Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...