Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...