Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...