Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...