Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...