Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...