Homeಮುಖಪುಟ'ಸರ್ನಾ ಪ್ರತ್ಯೇಕ ಧರ್ಮ' ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

‘ಸರ್ನಾ ಪ್ರತ್ಯೇಕ ಧರ್ಮ’ ಮಾನ್ಯತೆಗೆ ಒತ್ತಾಯಿಸಿ ಡಿ.30ರಂದು ಭಾರತ್ ಬಂದ್‌ಗೆ ಕರೆ

- Advertisement -
- Advertisement -

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ತಮ್ಮ ದೀರ್ಘ ಕಾಲದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೆಂಬರ್ 30ರಂದು ಸಾಂಕೇತಿಕ ‘ಭಾರತ್ ಬಂದ್‌’ಗೆ ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗಲ್ ಅಭಿಯಾನ್ (ಎಎಸ್‌ಎ) ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ. ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು ‘ಸಾಂವಿಧಾನಿಕ ಅಪರಾಧಕ್ಕೆ ಸಮಾನ’ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯವನ್ನು ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವುದು ‘ಧರ್ಮದ ಗುಲಾಮಗಿರಿಯನ್ನು ಸ್ವೀಕರಿಸಲು ಒತ್ತಾಯಿಸಿದಂತೆ’. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಕೊಟ್ಟಿತ್ತು. ನಂತರ ಕಾಂಗ್ರೆಸ್ ಅದನ್ನು ತೆಗೆದು ಹಾಕಿದೆ. ಬಿಜೆಪಿ ಈಗ ಆದಿವಾಸಿಗಳನ್ನು ವನವಾಸಿಗಳು ಮತ್ತು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಮುರ್ಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವವರ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮವನ್ನು ಗುರುತಿಸುತ್ತದೆಯೋ, ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

ಏನಿದು ಸರ್ನಾ ಧರ್ಮ?

ಸರ್ನಾ ಎಂಬುವುದು ಬುಡಕಟ್ಟು ಸಮುದಾಯಗಳ ಸ್ಥಳೀಯ ಧಾರ್ಮಿಕ ನಂಬಿಕೆಯಾಗಿದ್ದು, ಅವರು ಪ್ರಧಾನವಾಗಿ ಪರ್ವತ, ಕಾಡು ಮತ್ತು ವನ್ಯಜೀವಿಗಳಂತಹ ನೈಸರ್ಗಿಕ ಅಂಶಗಳನ್ನು ಪೂಜಿಸುತ್ತಾರೆ. ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಟಿ)ದ ಜನಗಣತಿಯು, ಧರ್ಮ ಸಂಹಿತೆಯಲ್ಲಿ ಸರ್ನಾ ಧರ್ಮಕ್ಕೆ ಸ್ವತಂತ್ರ ವರ್ಗವನ್ನು ನೀಡಬೇಕೆಂದು ಸೂಚಿಸಿದೆ.

ಹಲವಾರು ಬುಡಕಟ್ಟು ಸಂಘಟನೆಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳು ‘ಸರ್ನೈಂ’ಗೆ ವಿಶಿಷ್ಟವಾದ ಜನಗಣತಿ ಕೋಡ್ ನೀಡುವಂತೆ ಒತ್ತಾಯಿಸುತ್ತಿವೆ.

2011ರ ಜನಗಣತಿಯ ಪ್ರಕಾರ, ಸುಮಾರು 50 ಲಕ್ಷ ಆದಿವಾಸಿಗಳು ತಮ್ಮ ನಂಬಿಕೆಯನ್ನು ‘ಸರ್ನಾ’ ಎಂದು ಹೇಳಿಕೊಂಡಿದ್ದಾರೆ. ಜೈನ ಧರ್ಮಕ್ಕೆ ಹೋಲಿಸಿದರೆ ನಮ್ಮ ಸಂಖ್ಯೆ ದೊಡ್ಡದಿದೆ. ಕೇವಲ 44 ಜನ ಸಂಖ್ಯೆ ಇರುವ ಜೈನರಿಗೆ ಪ್ರತ್ಯೇಖ ಧರ್ಮದ ಮಾನ್ಯತೆ ಕೊಟ್ಟಿರುವಾಗ ನಮಗೂ ಕೊಡಿ ಎಂದು ಮುರ್ಮು ಆಗ್ರಹಿಸಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ಸ್ಥಳವಾದ ಜಾರ್ಖಂಡ್‌ನ ಉಲಿಹಾತುಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಥವಾ ನವೆಂಬರ್‌ನಲ್ಲಿ ಒಡಿಶಾದ ಬರಿಪಾದಕ್ಕೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ನಾ ಧರ್ಮದ ಮಾನ್ಯತೆಯ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಎಎಸ್‌ಎಗೆ ಬೇರೆ ಆಯ್ಕೆಗಳಿಲ್ಲದ ಕಾರಣ, ಡಿಸೆಂಬರ್ 30 ರಂದು ಸಮಾನ ಮನಸ್ಕ ಸಂಘಟನೆಗಳ ಬೆಂಬಲದೊಂದಿಗೆ ಒಂದು ದಿನದ ಸಾಂಕೇತಿಕ ಭಾರತ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಮುರ್ಮು ಹೇಳಿದ್ದಾರೆ.

ಭಾರತ್ ಬಂದ್ ಭಾಗವಾಗಿ ಡಿ.30ರಂದು ಆದಿವಾಸಿಗಳು ರಸ್ತೆ, ರೈಲು ತಡೆ ಚಳವಳಿ ನಡೆಸಲಿದ್ದಾರೆ ಎಂದು ಮುರ್ಮು ತಿಳಿಸಿದ್ದಾರೆ.

ನವೆಂಬರ್ 11 ರಂದು ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ನಾ ಪ್ರತ್ಯೇಖ ಧರ್ಮ ಸಂಹಿತೆ ಮಸೂದೆಯನ್ನು ಬೆಂಬಲಿಸಿದ ರಾಜಕೀಯ ಪಕ್ಷಗಳ ಬೆಂಬಲವನ್ನು ಭಾರತ್ ಬಂದ್‌ಗೆ ನಾವು ಕೋರಿದ್ದೇವೆ. ಜಾರ್ಖಂಡ್ ವಿಧಾನಸಭೆಯು 2020 ರ ನವೆಂಬರ್‌ನಲ್ಲಿ ಸರ್ವಾನುಮತದಿಂದ ಜನಗಣತಿಯ ವೇಳೆ ಸರ್ನಾವನ್ನು ಒಂದು ವಿಶಿಷ್ಟ ಧರ್ಮವೆಂದು ಗುರುತಿಸುವ ನಿರ್ಣಯವನ್ನು ಅಂಗೀಕರಿಸಿದೆ ಎಂದು ಮುರ್ಮು ಮಾಹಿತಿ ನೀಡಿದ್ದಾರೆ.

ಚಿತ್ರ ಕೃಪೆ: ದಿ ಹಿಂದೂ

ಇದನ್ನೂ ಓದಿ : 8 ಮಂದಿ ಭಾರತೀಯರಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ರದ್ದುಪಡಿಸಿದ ಕತಾರ್‌ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...