Homeಚಳವಳಿದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ...

ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ರಾಷ್ಟ್ರವ್ಯಾಪಿ ಭಾರತ್ ಬಂದ್‌ಗೆ ಕರೆ ನೀಡಿದ್ದು, ಪರಿಣಾಮವಾಗಿ ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಮಧ್ಯಾಹ್ನ 3 ಗಂಟೆಯವರೆಗೆ ನಿರ್ಬಂಧಿಸುವುದಾಗಿ ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ದೆಹಲಿಯಲ್ಲಿ ಸಾರಿಗೆ ಸೇವೆಗಳು ಸೇರಿದಂತೆ ಕಛೇರಿಗಳು, ಅಂಗಡಿಗಳು ಬಹುತೇಕ ಬಂದ್ ಆಗಿವೆ.

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ಇರುವ ರೈತರು ನಡೆಸುತ್ತಿರುವ ಈ ದೊಡ್ಡಮಟ್ಟದ ಪ್ರತಿಭಟನೆಯ ಪ್ರಮುಖ ಅಂಶಗಳು ಇಲ್ಲಿವೆ.

  • ದೆಹಲಿ ಮತ್ತು ಉತ್ತರ ಪ್ರದೇಶದ ಮೀರತ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ -24 ನ್ನು ರೈತರು ಮುತ್ತಿಗೆ ಹಾಕಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ದೊಡ್ಡಮಟ್ಟದ ಪೊಲೀಸ್ ನಿಯೋಜನೆಯ ಹೊರತಾಗಿಯೂ ಪ್ರತಿಭಟನಾಕಾರರು ರಸ್ತೆಗಳನ್ನು ಆಕ್ರಮಿಸಿಕೊಂಡಿದ್ದಾರೆ.
  • ಭಾರತ್ ಬಂದ್ ಅನ್ನು ಬೆಂಬಲಿಸಲು ಮುಂಬೈನ ವಾಶಿಯಲ್ಲಿನ ಅತಿದೊಡ್ಡ ಕೃಷಿ ಮಾರುಕಟ್ಟೆ ಮುಚ್ಚಲಾಗಿದೆ. “ಈ ಮಾರುಕಟ್ಟೆಯು ಮುಂಬೈ ಮತ್ತು ಹತ್ತಿರದ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿತ್ತು. ಲಕ್ಷಾಂತರ ಜನರು ರಸ್ತೆಗಿಳಿಯಬಹುದಾದರೂ, ನಾವು ಶಾಂತಿಯುತ ಪ್ರತಿಭಟನೆಯನ್ನು ಬಯಸುತ್ತೇವೆ. ಸರ್ಕಾರ ಈಕಡೆ ಗಮನಹರಿಸಬೇಕು” ಎಂದು ಶಾಸಕ ಮತ್ತು ಎನ್‌ಸಿಪಿ ಮುಖಂಡ ಶಶಿಕಾಂತ್ ಶಿಂಧೆ ಇಂದು ಬೆಳಿಗ್ಗೆ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

  • ಉತ್ತರಪ್ರದೇಶದ ಲಖನೌದಲ್ಲಿನ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನೂ ಮುಚ್ಚಲಾಗಿದೆ. ಇಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸುಮಾರು 15,000 ಸಣ್ಣ ರೈತರು ಪ್ರತಿದಿನ ಮಾರುಕಟ್ಟೆಗೆ ಬರುತ್ತಾರೆ. ಇವರೆಲ್ಲರೂ ಪ್ರತಿಭಟನೆಯನ್ನ ಬೆಂಬಲಿಸಿದ್ದು, “ನಾವು ಸಣ್ಣ ರೈತರು. ಆದರೆ ನಾವು ಪ್ರತಿಭಟನೆಯನ್ನು ಬೆಂಬಲಿಸುತ್ತೇವೆ. ಖಾಸಗೀ ಉದ್ಯಮಿಗಳ ಭಾಗವಹಿಸುವಿಕೆಯಿಂದ ನಮಗೆ ಆತಂಕ ಎದುರಾಗಿದೆ” ಎಂದು ರೈತ ರಾಮ್ ವರ್ಮಾ ತಿಳಿಸಿದರು.
  • ದೆಹಲಿಯಲ್ಲೂ ಸಾಗಾಣೆಗೆ ತೊಂದರೆಯಾಗಿದೆ. “ನಾವು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ. ಆದರೂ ನಾವು ಅಂಗಡಿಗಳನ್ನು ತೆರೆದಿದ್ದೇವೆ. ಆದರೆ ಗ್ರಾಹಕರು ಬರುತ್ತಿಲ್ಲ” ಎಂದು ಸಗಟು ಮಾರುಕಟ್ಟೆಯ ಅಂಗಡಿಯವರೊಬ್ಬರು ಹೇಳಿದರು. ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಜನರಿಗೆ ಪೊಲೀಸರು ಪ್ರತ್ಯೇಕ ಪ್ರಯಾಣ ಮತ್ತು ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಆದರೂ ಪ್ರಮುಖ ಹೆದ್ದಾರಿಗಳನ್ನು ತಡೆಯಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

  • ಹಲವು ಬ್ಯಾಂಕ್ ಒಕ್ಕೂಟಗಳು ರೈತರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದರೂ ಅವರು ನೇರವಾಗಿ ಬಂದ್‌ನಲ್ಲಿ ಭಾಗವಹಿಸುತ್ತಿಲ್ಲ. ಆದಾಗ್ಯೂ, ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬಹುತೇಕ ಎಲ್ಲಾ ವಾಣಿಜ್ಯ ಸಾರಿಗೆ ಮತ್ತು ಟ್ರಕ್ ಒಕ್ಕೂಟಗಳು ಬಂದ್‌ನಲ್ಲಿ ಭಾಗವಹಿಸುತ್ತಿವೆ. ಹಾಗಾಗಿ ಇದು ಡೈರಿ ಉತ್ಪನ್ನಗಳು, ಹಣ್ಣುಗಳು ಮತ್ತು ತರಕಾರಿಗಳ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
  • ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯನ್ನು ಪಕ್ಷವೇ ಮುನ್ನಡೆಸಿದೆ. ಬಹುತೇಕ ಎಲ್ಲಾ ಕಾರ್ಮಿಕ ಸಂಘಗಳು ತಮ್ಮ ಬೆಂಬಲವನ್ನು ನೀಡಿವೆ. ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷಗಳಾದ ಅಕಾಲಿ ದಳ ಮತ್ತು ಎಎಪಿ ತಮ್ಮ ಕ್ಷೇತ್ರಗಳಲ್ಲಿ ಧರಣಿ ನಡೆಸಿದ್ದಾರೆ. ಚಂಡೀಗಢದಲ್ಲಿ ಕೆಲವು ಮಾರುಕಟ್ಟೆ ಸಂಘಗಳು ಬಂದ್ ಅನ್ನು ಬೆಂಬಲಿಸಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

  • ತೆಲಂಗಾಣವು ಬಂದ್ ಅನ್ನು ಬೆಂಬಲಿಸಿದ್ದು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಟಿಆರ್‌ಎಸ್ ಕಾರ್ಯಕರ್ತರಿಗೆ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಕರೆ ನೀಡಿದರು.
  • ಈಶಾನ್ಯ ರಾಜ್ಯಗಳಲ್ಲೂ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

ಇಂದಿನ ಭಾರತ್ ಬಂದ್ ದೇಶದ ನಾನಾ ಭಾಗಗಳಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಇನ್ನಷ್ಟು ತೀವ್ರಗೊಂಡಿದೆ.


ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...