Homeಚಳವಳಿದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ...

ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ರಾಷ್ಟ್ರವ್ಯಾಪಿ ಭಾರತ್ ಬಂದ್‌ಗೆ ಕರೆ ನೀಡಿದ್ದು, ಪರಿಣಾಮವಾಗಿ ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಮಧ್ಯಾಹ್ನ 3 ಗಂಟೆಯವರೆಗೆ ನಿರ್ಬಂಧಿಸುವುದಾಗಿ ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ದೆಹಲಿಯಲ್ಲಿ ಸಾರಿಗೆ ಸೇವೆಗಳು ಸೇರಿದಂತೆ ಕಛೇರಿಗಳು, ಅಂಗಡಿಗಳು ಬಹುತೇಕ ಬಂದ್ ಆಗಿವೆ.

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ಇರುವ ರೈತರು ನಡೆಸುತ್ತಿರುವ ಈ ದೊಡ್ಡಮಟ್ಟದ ಪ್ರತಿಭಟನೆಯ ಪ್ರಮುಖ ಅಂಶಗಳು ಇಲ್ಲಿವೆ.

  • ದೆಹಲಿ ಮತ್ತು ಉತ್ತರ ಪ್ರದೇಶದ ಮೀರತ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ -24 ನ್ನು ರೈತರು ಮುತ್ತಿಗೆ ಹಾಕಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ದೊಡ್ಡಮಟ್ಟದ ಪೊಲೀಸ್ ನಿಯೋಜನೆಯ ಹೊರತಾಗಿಯೂ ಪ್ರತಿಭಟನಾಕಾರರು ರಸ್ತೆಗಳನ್ನು ಆಕ್ರಮಿಸಿಕೊಂಡಿದ್ದಾರೆ.
  • ಭಾರತ್ ಬಂದ್ ಅನ್ನು ಬೆಂಬಲಿಸಲು ಮುಂಬೈನ ವಾಶಿಯಲ್ಲಿನ ಅತಿದೊಡ್ಡ ಕೃಷಿ ಮಾರುಕಟ್ಟೆ ಮುಚ್ಚಲಾಗಿದೆ. “ಈ ಮಾರುಕಟ್ಟೆಯು ಮುಂಬೈ ಮತ್ತು ಹತ್ತಿರದ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿತ್ತು. ಲಕ್ಷಾಂತರ ಜನರು ರಸ್ತೆಗಿಳಿಯಬಹುದಾದರೂ, ನಾವು ಶಾಂತಿಯುತ ಪ್ರತಿಭಟನೆಯನ್ನು ಬಯಸುತ್ತೇವೆ. ಸರ್ಕಾರ ಈಕಡೆ ಗಮನಹರಿಸಬೇಕು” ಎಂದು ಶಾಸಕ ಮತ್ತು ಎನ್‌ಸಿಪಿ ಮುಖಂಡ ಶಶಿಕಾಂತ್ ಶಿಂಧೆ ಇಂದು ಬೆಳಿಗ್ಗೆ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

  • ಉತ್ತರಪ್ರದೇಶದ ಲಖನೌದಲ್ಲಿನ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನೂ ಮುಚ್ಚಲಾಗಿದೆ. ಇಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸುಮಾರು 15,000 ಸಣ್ಣ ರೈತರು ಪ್ರತಿದಿನ ಮಾರುಕಟ್ಟೆಗೆ ಬರುತ್ತಾರೆ. ಇವರೆಲ್ಲರೂ ಪ್ರತಿಭಟನೆಯನ್ನ ಬೆಂಬಲಿಸಿದ್ದು, “ನಾವು ಸಣ್ಣ ರೈತರು. ಆದರೆ ನಾವು ಪ್ರತಿಭಟನೆಯನ್ನು ಬೆಂಬಲಿಸುತ್ತೇವೆ. ಖಾಸಗೀ ಉದ್ಯಮಿಗಳ ಭಾಗವಹಿಸುವಿಕೆಯಿಂದ ನಮಗೆ ಆತಂಕ ಎದುರಾಗಿದೆ” ಎಂದು ರೈತ ರಾಮ್ ವರ್ಮಾ ತಿಳಿಸಿದರು.
  • ದೆಹಲಿಯಲ್ಲೂ ಸಾಗಾಣೆಗೆ ತೊಂದರೆಯಾಗಿದೆ. “ನಾವು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ. ಆದರೂ ನಾವು ಅಂಗಡಿಗಳನ್ನು ತೆರೆದಿದ್ದೇವೆ. ಆದರೆ ಗ್ರಾಹಕರು ಬರುತ್ತಿಲ್ಲ” ಎಂದು ಸಗಟು ಮಾರುಕಟ್ಟೆಯ ಅಂಗಡಿಯವರೊಬ್ಬರು ಹೇಳಿದರು. ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಜನರಿಗೆ ಪೊಲೀಸರು ಪ್ರತ್ಯೇಕ ಪ್ರಯಾಣ ಮತ್ತು ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಆದರೂ ಪ್ರಮುಖ ಹೆದ್ದಾರಿಗಳನ್ನು ತಡೆಯಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

  • ಹಲವು ಬ್ಯಾಂಕ್ ಒಕ್ಕೂಟಗಳು ರೈತರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದರೂ ಅವರು ನೇರವಾಗಿ ಬಂದ್‌ನಲ್ಲಿ ಭಾಗವಹಿಸುತ್ತಿಲ್ಲ. ಆದಾಗ್ಯೂ, ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬಹುತೇಕ ಎಲ್ಲಾ ವಾಣಿಜ್ಯ ಸಾರಿಗೆ ಮತ್ತು ಟ್ರಕ್ ಒಕ್ಕೂಟಗಳು ಬಂದ್‌ನಲ್ಲಿ ಭಾಗವಹಿಸುತ್ತಿವೆ. ಹಾಗಾಗಿ ಇದು ಡೈರಿ ಉತ್ಪನ್ನಗಳು, ಹಣ್ಣುಗಳು ಮತ್ತು ತರಕಾರಿಗಳ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
  • ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯನ್ನು ಪಕ್ಷವೇ ಮುನ್ನಡೆಸಿದೆ. ಬಹುತೇಕ ಎಲ್ಲಾ ಕಾರ್ಮಿಕ ಸಂಘಗಳು ತಮ್ಮ ಬೆಂಬಲವನ್ನು ನೀಡಿವೆ. ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷಗಳಾದ ಅಕಾಲಿ ದಳ ಮತ್ತು ಎಎಪಿ ತಮ್ಮ ಕ್ಷೇತ್ರಗಳಲ್ಲಿ ಧರಣಿ ನಡೆಸಿದ್ದಾರೆ. ಚಂಡೀಗಢದಲ್ಲಿ ಕೆಲವು ಮಾರುಕಟ್ಟೆ ಸಂಘಗಳು ಬಂದ್ ಅನ್ನು ಬೆಂಬಲಿಸಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

  • ತೆಲಂಗಾಣವು ಬಂದ್ ಅನ್ನು ಬೆಂಬಲಿಸಿದ್ದು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಟಿಆರ್‌ಎಸ್ ಕಾರ್ಯಕರ್ತರಿಗೆ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಕರೆ ನೀಡಿದರು.
  • ಈಶಾನ್ಯ ರಾಜ್ಯಗಳಲ್ಲೂ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

ಇಂದಿನ ಭಾರತ್ ಬಂದ್ ದೇಶದ ನಾನಾ ಭಾಗಗಳಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಇನ್ನಷ್ಟು ತೀವ್ರಗೊಂಡಿದೆ.


ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...