Homeಚಳವಳಿದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ...

ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ರಾಷ್ಟ್ರವ್ಯಾಪಿ ಭಾರತ್ ಬಂದ್‌ಗೆ ಕರೆ ನೀಡಿದ್ದು, ಪರಿಣಾಮವಾಗಿ ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಮಧ್ಯಾಹ್ನ 3 ಗಂಟೆಯವರೆಗೆ ನಿರ್ಬಂಧಿಸುವುದಾಗಿ ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ದೆಹಲಿಯಲ್ಲಿ ಸಾರಿಗೆ ಸೇವೆಗಳು ಸೇರಿದಂತೆ ಕಛೇರಿಗಳು, ಅಂಗಡಿಗಳು ಬಹುತೇಕ ಬಂದ್ ಆಗಿವೆ.

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ಇರುವ ರೈತರು ನಡೆಸುತ್ತಿರುವ ಈ ದೊಡ್ಡಮಟ್ಟದ ಪ್ರತಿಭಟನೆಯ ಪ್ರಮುಖ ಅಂಶಗಳು ಇಲ್ಲಿವೆ.

  • ದೆಹಲಿ ಮತ್ತು ಉತ್ತರ ಪ್ರದೇಶದ ಮೀರತ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ -24 ನ್ನು ರೈತರು ಮುತ್ತಿಗೆ ಹಾಕಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ದೊಡ್ಡಮಟ್ಟದ ಪೊಲೀಸ್ ನಿಯೋಜನೆಯ ಹೊರತಾಗಿಯೂ ಪ್ರತಿಭಟನಾಕಾರರು ರಸ್ತೆಗಳನ್ನು ಆಕ್ರಮಿಸಿಕೊಂಡಿದ್ದಾರೆ.
  • ಭಾರತ್ ಬಂದ್ ಅನ್ನು ಬೆಂಬಲಿಸಲು ಮುಂಬೈನ ವಾಶಿಯಲ್ಲಿನ ಅತಿದೊಡ್ಡ ಕೃಷಿ ಮಾರುಕಟ್ಟೆ ಮುಚ್ಚಲಾಗಿದೆ. “ಈ ಮಾರುಕಟ್ಟೆಯು ಮುಂಬೈ ಮತ್ತು ಹತ್ತಿರದ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿತ್ತು. ಲಕ್ಷಾಂತರ ಜನರು ರಸ್ತೆಗಿಳಿಯಬಹುದಾದರೂ, ನಾವು ಶಾಂತಿಯುತ ಪ್ರತಿಭಟನೆಯನ್ನು ಬಯಸುತ್ತೇವೆ. ಸರ್ಕಾರ ಈಕಡೆ ಗಮನಹರಿಸಬೇಕು” ಎಂದು ಶಾಸಕ ಮತ್ತು ಎನ್‌ಸಿಪಿ ಮುಖಂಡ ಶಶಿಕಾಂತ್ ಶಿಂಧೆ ಇಂದು ಬೆಳಿಗ್ಗೆ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

  • ಉತ್ತರಪ್ರದೇಶದ ಲಖನೌದಲ್ಲಿನ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನೂ ಮುಚ್ಚಲಾಗಿದೆ. ಇಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸುಮಾರು 15,000 ಸಣ್ಣ ರೈತರು ಪ್ರತಿದಿನ ಮಾರುಕಟ್ಟೆಗೆ ಬರುತ್ತಾರೆ. ಇವರೆಲ್ಲರೂ ಪ್ರತಿಭಟನೆಯನ್ನ ಬೆಂಬಲಿಸಿದ್ದು, “ನಾವು ಸಣ್ಣ ರೈತರು. ಆದರೆ ನಾವು ಪ್ರತಿಭಟನೆಯನ್ನು ಬೆಂಬಲಿಸುತ್ತೇವೆ. ಖಾಸಗೀ ಉದ್ಯಮಿಗಳ ಭಾಗವಹಿಸುವಿಕೆಯಿಂದ ನಮಗೆ ಆತಂಕ ಎದುರಾಗಿದೆ” ಎಂದು ರೈತ ರಾಮ್ ವರ್ಮಾ ತಿಳಿಸಿದರು.
  • ದೆಹಲಿಯಲ್ಲೂ ಸಾಗಾಣೆಗೆ ತೊಂದರೆಯಾಗಿದೆ. “ನಾವು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ. ಆದರೂ ನಾವು ಅಂಗಡಿಗಳನ್ನು ತೆರೆದಿದ್ದೇವೆ. ಆದರೆ ಗ್ರಾಹಕರು ಬರುತ್ತಿಲ್ಲ” ಎಂದು ಸಗಟು ಮಾರುಕಟ್ಟೆಯ ಅಂಗಡಿಯವರೊಬ್ಬರು ಹೇಳಿದರು. ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಜನರಿಗೆ ಪೊಲೀಸರು ಪ್ರತ್ಯೇಕ ಪ್ರಯಾಣ ಮತ್ತು ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಆದರೂ ಪ್ರಮುಖ ಹೆದ್ದಾರಿಗಳನ್ನು ತಡೆಯಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

  • ಹಲವು ಬ್ಯಾಂಕ್ ಒಕ್ಕೂಟಗಳು ರೈತರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದರೂ ಅವರು ನೇರವಾಗಿ ಬಂದ್‌ನಲ್ಲಿ ಭಾಗವಹಿಸುತ್ತಿಲ್ಲ. ಆದಾಗ್ಯೂ, ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬಹುತೇಕ ಎಲ್ಲಾ ವಾಣಿಜ್ಯ ಸಾರಿಗೆ ಮತ್ತು ಟ್ರಕ್ ಒಕ್ಕೂಟಗಳು ಬಂದ್‌ನಲ್ಲಿ ಭಾಗವಹಿಸುತ್ತಿವೆ. ಹಾಗಾಗಿ ಇದು ಡೈರಿ ಉತ್ಪನ್ನಗಳು, ಹಣ್ಣುಗಳು ಮತ್ತು ತರಕಾರಿಗಳ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
  • ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯನ್ನು ಪಕ್ಷವೇ ಮುನ್ನಡೆಸಿದೆ. ಬಹುತೇಕ ಎಲ್ಲಾ ಕಾರ್ಮಿಕ ಸಂಘಗಳು ತಮ್ಮ ಬೆಂಬಲವನ್ನು ನೀಡಿವೆ. ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷಗಳಾದ ಅಕಾಲಿ ದಳ ಮತ್ತು ಎಎಪಿ ತಮ್ಮ ಕ್ಷೇತ್ರಗಳಲ್ಲಿ ಧರಣಿ ನಡೆಸಿದ್ದಾರೆ. ಚಂಡೀಗಢದಲ್ಲಿ ಕೆಲವು ಮಾರುಕಟ್ಟೆ ಸಂಘಗಳು ಬಂದ್ ಅನ್ನು ಬೆಂಬಲಿಸಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

  • ತೆಲಂಗಾಣವು ಬಂದ್ ಅನ್ನು ಬೆಂಬಲಿಸಿದ್ದು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಟಿಆರ್‌ಎಸ್ ಕಾರ್ಯಕರ್ತರಿಗೆ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಕರೆ ನೀಡಿದರು.
  • ಈಶಾನ್ಯ ರಾಜ್ಯಗಳಲ್ಲೂ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

ಇಂದಿನ ಭಾರತ್ ಬಂದ್ ದೇಶದ ನಾನಾ ಭಾಗಗಳಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಇನ್ನಷ್ಟು ತೀವ್ರಗೊಂಡಿದೆ.


ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...