Homeಚಳವಳಿದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ...

ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ರಾಷ್ಟ್ರವ್ಯಾಪಿ ಭಾರತ್ ಬಂದ್‌ಗೆ ಕರೆ ನೀಡಿದ್ದು, ಪರಿಣಾಮವಾಗಿ ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಮಧ್ಯಾಹ್ನ 3 ಗಂಟೆಯವರೆಗೆ ನಿರ್ಬಂಧಿಸುವುದಾಗಿ ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ದೆಹಲಿಯಲ್ಲಿ ಸಾರಿಗೆ ಸೇವೆಗಳು ಸೇರಿದಂತೆ ಕಛೇರಿಗಳು, ಅಂಗಡಿಗಳು ಬಹುತೇಕ ಬಂದ್ ಆಗಿವೆ.

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ಇರುವ ರೈತರು ನಡೆಸುತ್ತಿರುವ ಈ ದೊಡ್ಡಮಟ್ಟದ ಪ್ರತಿಭಟನೆಯ ಪ್ರಮುಖ ಅಂಶಗಳು ಇಲ್ಲಿವೆ.

  • ದೆಹಲಿ ಮತ್ತು ಉತ್ತರ ಪ್ರದೇಶದ ಮೀರತ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ -24 ನ್ನು ರೈತರು ಮುತ್ತಿಗೆ ಹಾಕಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ದೊಡ್ಡಮಟ್ಟದ ಪೊಲೀಸ್ ನಿಯೋಜನೆಯ ಹೊರತಾಗಿಯೂ ಪ್ರತಿಭಟನಾಕಾರರು ರಸ್ತೆಗಳನ್ನು ಆಕ್ರಮಿಸಿಕೊಂಡಿದ್ದಾರೆ.
  • ಭಾರತ್ ಬಂದ್ ಅನ್ನು ಬೆಂಬಲಿಸಲು ಮುಂಬೈನ ವಾಶಿಯಲ್ಲಿನ ಅತಿದೊಡ್ಡ ಕೃಷಿ ಮಾರುಕಟ್ಟೆ ಮುಚ್ಚಲಾಗಿದೆ. “ಈ ಮಾರುಕಟ್ಟೆಯು ಮುಂಬೈ ಮತ್ತು ಹತ್ತಿರದ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿತ್ತು. ಲಕ್ಷಾಂತರ ಜನರು ರಸ್ತೆಗಿಳಿಯಬಹುದಾದರೂ, ನಾವು ಶಾಂತಿಯುತ ಪ್ರತಿಭಟನೆಯನ್ನು ಬಯಸುತ್ತೇವೆ. ಸರ್ಕಾರ ಈಕಡೆ ಗಮನಹರಿಸಬೇಕು” ಎಂದು ಶಾಸಕ ಮತ್ತು ಎನ್‌ಸಿಪಿ ಮುಖಂಡ ಶಶಿಕಾಂತ್ ಶಿಂಧೆ ಇಂದು ಬೆಳಿಗ್ಗೆ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

  • ಉತ್ತರಪ್ರದೇಶದ ಲಖನೌದಲ್ಲಿನ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನೂ ಮುಚ್ಚಲಾಗಿದೆ. ಇಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸುಮಾರು 15,000 ಸಣ್ಣ ರೈತರು ಪ್ರತಿದಿನ ಮಾರುಕಟ್ಟೆಗೆ ಬರುತ್ತಾರೆ. ಇವರೆಲ್ಲರೂ ಪ್ರತಿಭಟನೆಯನ್ನ ಬೆಂಬಲಿಸಿದ್ದು, “ನಾವು ಸಣ್ಣ ರೈತರು. ಆದರೆ ನಾವು ಪ್ರತಿಭಟನೆಯನ್ನು ಬೆಂಬಲಿಸುತ್ತೇವೆ. ಖಾಸಗೀ ಉದ್ಯಮಿಗಳ ಭಾಗವಹಿಸುವಿಕೆಯಿಂದ ನಮಗೆ ಆತಂಕ ಎದುರಾಗಿದೆ” ಎಂದು ರೈತ ರಾಮ್ ವರ್ಮಾ ತಿಳಿಸಿದರು.
  • ದೆಹಲಿಯಲ್ಲೂ ಸಾಗಾಣೆಗೆ ತೊಂದರೆಯಾಗಿದೆ. “ನಾವು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ. ಆದರೂ ನಾವು ಅಂಗಡಿಗಳನ್ನು ತೆರೆದಿದ್ದೇವೆ. ಆದರೆ ಗ್ರಾಹಕರು ಬರುತ್ತಿಲ್ಲ” ಎಂದು ಸಗಟು ಮಾರುಕಟ್ಟೆಯ ಅಂಗಡಿಯವರೊಬ್ಬರು ಹೇಳಿದರು. ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಜನರಿಗೆ ಪೊಲೀಸರು ಪ್ರತ್ಯೇಕ ಪ್ರಯಾಣ ಮತ್ತು ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಆದರೂ ಪ್ರಮುಖ ಹೆದ್ದಾರಿಗಳನ್ನು ತಡೆಯಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

  • ಹಲವು ಬ್ಯಾಂಕ್ ಒಕ್ಕೂಟಗಳು ರೈತರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದರೂ ಅವರು ನೇರವಾಗಿ ಬಂದ್‌ನಲ್ಲಿ ಭಾಗವಹಿಸುತ್ತಿಲ್ಲ. ಆದಾಗ್ಯೂ, ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬಹುತೇಕ ಎಲ್ಲಾ ವಾಣಿಜ್ಯ ಸಾರಿಗೆ ಮತ್ತು ಟ್ರಕ್ ಒಕ್ಕೂಟಗಳು ಬಂದ್‌ನಲ್ಲಿ ಭಾಗವಹಿಸುತ್ತಿವೆ. ಹಾಗಾಗಿ ಇದು ಡೈರಿ ಉತ್ಪನ್ನಗಳು, ಹಣ್ಣುಗಳು ಮತ್ತು ತರಕಾರಿಗಳ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
  • ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯನ್ನು ಪಕ್ಷವೇ ಮುನ್ನಡೆಸಿದೆ. ಬಹುತೇಕ ಎಲ್ಲಾ ಕಾರ್ಮಿಕ ಸಂಘಗಳು ತಮ್ಮ ಬೆಂಬಲವನ್ನು ನೀಡಿವೆ. ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷಗಳಾದ ಅಕಾಲಿ ದಳ ಮತ್ತು ಎಎಪಿ ತಮ್ಮ ಕ್ಷೇತ್ರಗಳಲ್ಲಿ ಧರಣಿ ನಡೆಸಿದ್ದಾರೆ. ಚಂಡೀಗಢದಲ್ಲಿ ಕೆಲವು ಮಾರುಕಟ್ಟೆ ಸಂಘಗಳು ಬಂದ್ ಅನ್ನು ಬೆಂಬಲಿಸಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

  • ತೆಲಂಗಾಣವು ಬಂದ್ ಅನ್ನು ಬೆಂಬಲಿಸಿದ್ದು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಟಿಆರ್‌ಎಸ್ ಕಾರ್ಯಕರ್ತರಿಗೆ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಕರೆ ನೀಡಿದರು.
  • ಈಶಾನ್ಯ ರಾಜ್ಯಗಳಲ್ಲೂ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

ಇಂದಿನ ಭಾರತ್ ಬಂದ್ ದೇಶದ ನಾನಾ ಭಾಗಗಳಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಇನ್ನಷ್ಟು ತೀವ್ರಗೊಂಡಿದೆ.


ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...