Homeಚಳವಳಿದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ...

ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

- Advertisement -
- Advertisement -

ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ರಾಷ್ಟ್ರವ್ಯಾಪಿ ಭಾರತ್ ಬಂದ್‌ಗೆ ಕರೆ ನೀಡಿದ್ದು, ಪರಿಣಾಮವಾಗಿ ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿಯನ್ನು ಇಂದು ಮಧ್ಯಾಹ್ನ 3 ಗಂಟೆಯವರೆಗೆ ನಿರ್ಬಂಧಿಸುವುದಾಗಿ ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ. ದೆಹಲಿಯಲ್ಲಿ ಸಾರಿಗೆ ಸೇವೆಗಳು ಸೇರಿದಂತೆ ಕಛೇರಿಗಳು, ಅಂಗಡಿಗಳು ಬಹುತೇಕ ಬಂದ್ ಆಗಿವೆ.

ದೆಹಲಿ ಮತ್ತು ಹರಿಯಾಣದಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ರೈತ ಸಂಘಟನೆಗಳು ಹೇಳಿವೆ. ಈ ಬಂದ್‌ಗೆ ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ಇರುವ ರೈತರು ನಡೆಸುತ್ತಿರುವ ಈ ದೊಡ್ಡಮಟ್ಟದ ಪ್ರತಿಭಟನೆಯ ಪ್ರಮುಖ ಅಂಶಗಳು ಇಲ್ಲಿವೆ.

  • ದೆಹಲಿ ಮತ್ತು ಉತ್ತರ ಪ್ರದೇಶದ ಮೀರತ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ -24 ನ್ನು ರೈತರು ಮುತ್ತಿಗೆ ಹಾಕಿದ್ದಾರೆ. ಮಧ್ಯಾಹ್ನ 3 ಗಂಟೆಯವರೆಗೆ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ದೊಡ್ಡಮಟ್ಟದ ಪೊಲೀಸ್ ನಿಯೋಜನೆಯ ಹೊರತಾಗಿಯೂ ಪ್ರತಿಭಟನಾಕಾರರು ರಸ್ತೆಗಳನ್ನು ಆಕ್ರಮಿಸಿಕೊಂಡಿದ್ದಾರೆ.
  • ಭಾರತ್ ಬಂದ್ ಅನ್ನು ಬೆಂಬಲಿಸಲು ಮುಂಬೈನ ವಾಶಿಯಲ್ಲಿನ ಅತಿದೊಡ್ಡ ಕೃಷಿ ಮಾರುಕಟ್ಟೆ ಮುಚ್ಚಲಾಗಿದೆ. “ಈ ಮಾರುಕಟ್ಟೆಯು ಮುಂಬೈ ಮತ್ತು ಹತ್ತಿರದ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿತ್ತು. ಲಕ್ಷಾಂತರ ಜನರು ರಸ್ತೆಗಿಳಿಯಬಹುದಾದರೂ, ನಾವು ಶಾಂತಿಯುತ ಪ್ರತಿಭಟನೆಯನ್ನು ಬಯಸುತ್ತೇವೆ. ಸರ್ಕಾರ ಈಕಡೆ ಗಮನಹರಿಸಬೇಕು” ಎಂದು ಶಾಸಕ ಮತ್ತು ಎನ್‌ಸಿಪಿ ಮುಖಂಡ ಶಶಿಕಾಂತ್ ಶಿಂಧೆ ಇಂದು ಬೆಳಿಗ್ಗೆ ಎನ್‌ಡಿಟಿವಿಗೆ ತಿಳಿಸಿದರು.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

  • ಉತ್ತರಪ್ರದೇಶದ ಲಖನೌದಲ್ಲಿನ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನೂ ಮುಚ್ಚಲಾಗಿದೆ. ಇಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸುಮಾರು 15,000 ಸಣ್ಣ ರೈತರು ಪ್ರತಿದಿನ ಮಾರುಕಟ್ಟೆಗೆ ಬರುತ್ತಾರೆ. ಇವರೆಲ್ಲರೂ ಪ್ರತಿಭಟನೆಯನ್ನ ಬೆಂಬಲಿಸಿದ್ದು, “ನಾವು ಸಣ್ಣ ರೈತರು. ಆದರೆ ನಾವು ಪ್ರತಿಭಟನೆಯನ್ನು ಬೆಂಬಲಿಸುತ್ತೇವೆ. ಖಾಸಗೀ ಉದ್ಯಮಿಗಳ ಭಾಗವಹಿಸುವಿಕೆಯಿಂದ ನಮಗೆ ಆತಂಕ ಎದುರಾಗಿದೆ” ಎಂದು ರೈತ ರಾಮ್ ವರ್ಮಾ ತಿಳಿಸಿದರು.
  • ದೆಹಲಿಯಲ್ಲೂ ಸಾಗಾಣೆಗೆ ತೊಂದರೆಯಾಗಿದೆ. “ನಾವು ರೈತರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ. ಆದರೂ ನಾವು ಅಂಗಡಿಗಳನ್ನು ತೆರೆದಿದ್ದೇವೆ. ಆದರೆ ಗ್ರಾಹಕರು ಬರುತ್ತಿಲ್ಲ” ಎಂದು ಸಗಟು ಮಾರುಕಟ್ಟೆಯ ಅಂಗಡಿಯವರೊಬ್ಬರು ಹೇಳಿದರು. ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಜನರಿಗೆ ಪೊಲೀಸರು ಪ್ರತ್ಯೇಕ ಪ್ರಯಾಣ ಮತ್ತು ಸಂಚಾರ ಸಲಹೆಗಳನ್ನು ನೀಡಿದ್ದಾರೆ. ಆದರೂ ಪ್ರಮುಖ ಹೆದ್ದಾರಿಗಳನ್ನು ತಡೆಯಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

  • ಹಲವು ಬ್ಯಾಂಕ್ ಒಕ್ಕೂಟಗಳು ರೈತರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದರೂ ಅವರು ನೇರವಾಗಿ ಬಂದ್‌ನಲ್ಲಿ ಭಾಗವಹಿಸುತ್ತಿಲ್ಲ. ಆದಾಗ್ಯೂ, ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬಹುತೇಕ ಎಲ್ಲಾ ವಾಣಿಜ್ಯ ಸಾರಿಗೆ ಮತ್ತು ಟ್ರಕ್ ಒಕ್ಕೂಟಗಳು ಬಂದ್‌ನಲ್ಲಿ ಭಾಗವಹಿಸುತ್ತಿವೆ. ಹಾಗಾಗಿ ಇದು ಡೈರಿ ಉತ್ಪನ್ನಗಳು, ಹಣ್ಣುಗಳು ಮತ್ತು ತರಕಾರಿಗಳ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ.
  • ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯನ್ನು ಪಕ್ಷವೇ ಮುನ್ನಡೆಸಿದೆ. ಬಹುತೇಕ ಎಲ್ಲಾ ಕಾರ್ಮಿಕ ಸಂಘಗಳು ತಮ್ಮ ಬೆಂಬಲವನ್ನು ನೀಡಿವೆ. ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷಗಳಾದ ಅಕಾಲಿ ದಳ ಮತ್ತು ಎಎಪಿ ತಮ್ಮ ಕ್ಷೇತ್ರಗಳಲ್ಲಿ ಧರಣಿ ನಡೆಸಿದ್ದಾರೆ. ಚಂಡೀಗಢದಲ್ಲಿ ಕೆಲವು ಮಾರುಕಟ್ಟೆ ಸಂಘಗಳು ಬಂದ್ ಅನ್ನು ಬೆಂಬಲಿಸಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

  • ತೆಲಂಗಾಣವು ಬಂದ್ ಅನ್ನು ಬೆಂಬಲಿಸಿದ್ದು, ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಟಿಆರ್‌ಎಸ್ ಕಾರ್ಯಕರ್ತರಿಗೆ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಕರೆ ನೀಡಿದರು.
  • ಈಶಾನ್ಯ ರಾಜ್ಯಗಳಲ್ಲೂ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

ಇಂದಿನ ಭಾರತ್ ಬಂದ್ ದೇಶದ ನಾನಾ ಭಾಗಗಳಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಇನ್ನಷ್ಟು ತೀವ್ರಗೊಂಡಿದೆ.


ಇದನ್ನೂ ಓದಿ: ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...