Homeಚಳವಳಿತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

ತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

’ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ’

- Advertisement -
- Advertisement -

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಮತ್ತು ದೆಹಲಿಯಲ್ಲಿ ರೈತರು ನಡೆಸಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ತುಮಕೂರು ಮತ್ತು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು. . ರೈತ-ದಲಿತ-ಕಾರ್ಮಿಕ ಸಂಘಟನೆಗಳು, ಎಡಪಕ್ಷಗಳು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನಾನಿರತ ರೈತರು ಪ್ರಧಾನಿ ನರೆಂದ್ರ ಮೋದಿಯ ಪ್ರತಿಕೃತಿ ದಹನ ಮಾಡಿ ಕಿಡಿಕಾರಿದರು. ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು. ಕೃಷಿ ಸಂಬಂಧಿ ಸುಗ್ರೀವಾಜ್ಞೆಗಳ ಜಾರಿಯಿಂದ ದೇಶಕ್ಕೆ ಅನ್ನ ನೀಡುವ ರೈತ ಸಮೂಹ ಬೀದಿಗೆ ಬೀಳಲಿದೆ. ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ. ಅನ್ನ ನೀಡುವ ರೈತ ಮತ್ತೊಬ್ಬರ ಬಾಗಿಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ಎದುರಾಗಲಿದೆ.

ಬಡ, ಮಧ್ಯಮ ವರ್ಗದ ರೈತರ ಬಳಿ ಇರುವ ಅಲ್ಪಸ್ವಲ್ಪ ಭೂಮಿಯೂ ಶ್ರೀಮಂತರ ಕೈ ಸೇರಲಿದೆ. ಕಾರ್ಪೋರೇಟ್ ಕುಳಗಳು ಜಮೀನು ಖರೀದಿ ರೈತರನ್ನು ಕೂಲಿ ಇಟ್ಟುಕೊಳ್ಳುವಂತಹ ವ್ಯವಸ್ಥೆ ಮತ್ತೆ ಬರಲಿದೆ. ರೈತರು ಸ್ವತಂತ್ರವಾಗಿರಬೇಕು. ಯಾರ ಹಿಡಿತವೂ ಇರಬಾರದು. ಮತ್ತೊಬ್ಬರ ಗುಲಾಮ ರಾಗಿ ಜೀವನ ನಡೆಸಬಾರದು ಎಂಬ ನ್ಯಾಯದ ವ್ಯವಸ್ಥೆಗೆ ಧಕ್ಕೆ ಬರಲಿದೆ. ಹಾಗಾಗಿ ಭಾರತ ಸರ್ಕಾರ ಹೊಸ ಕೃಷಿ ಸುಗ್ರೀವಾಜ್ಞೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ಗುಬ್ಬಿ, ತಿಪಟೂರು, ಕುಣಿಗಲ್, ತುರುವೇಕೆರೆ, ಚಿಕ್ಕನಾಯಕನ ಹಳ್ಳಿ ಹೀಗೆ ಜಿಲ್ಲೆಯ ಎಲ್ಲಾ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ಜೋರಾಗಿ ನಡೆದವು. ರಾಜ್ಯ ರೈತ ಸಂಘಟನೆ ಮತ್ತು ಹಸಿರು ಸೇನೆಯ ಎರಡೂ ಬಣಗಳ ಕಾರ್ಯಕರ್ತರು ಮಿನಿವಿಧಾನ ಸೌಧಗಳ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಅನ್ನದಾತರ ಬೆನ್ನು ಮೂಳೆ ಮುರಿಯುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ. ಪ್ರತಿಯೊಬ್ಬರು ಅನ್ನ ತಿಂದೇ ಬದುಕಬೇಕು ಅನ್ನವಿಲ್ಲದೆ ಬಲವೂ ಇಲ್ಲ. ಜ್ಞಾನವೂ ಪಡೆಯಲು ಆಗುವುದಿಲ್ಲ. ಇದನ್ನು ಕಾರ್ಪೋರೇಟ್ ಬೆಂಬಲಿತ ಸರ್ಕಾರ ಗಳ ಅರ್ಥ ಮಾಡಿಕೊಳ್ಳಬೇಕು. ಇದು ಅರ್ಥವಾಗದಿದ್ದರೆ ದೇಶವನ್ನು ಆಳ್ವಿಕೆ ಮಾಡಲು ಯೋಗ್ಯರಲ್ಲ. ನಿಮಗೆ ಹೇಗೆ ಅರ್ಥಮಾಡಿಸಬೇಕೆಂಬುದನ್ನು ಚುನಾವಣೆಯಲ್ಲಿ ತಿಳಿಸುತ್ತೇವೆ ಎಂದು ಸವಾಲು ಹಾಕಿದರು.

ತುಮಕೂರು ಚರ್ಚ್ ವೃತ್ತದಿಂದ ಟೌನ್ ಹಾಲ್‌ವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದನ್ನು ಖಂಡಿಸಿದರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವ ಪ್ರಧಾನಿ ರೈತರನ್ನು ಒಳಗೊಳ್ಳದೆ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಬಾಯಿ ಮಾತಿಗೆ ಮಾತ್ರ ರೈತಮಂತ್ರ ಜಪಿಸುವ ಮೋದಿ ಕೇವಲ ಡೋಂಗಿಯಂತೆ ನಟಿಸುತ್ತಿದ್ದಾರೆ. ರೈತರ ಪರ ಕಾಳಿಜಿ ಇಲ್ಲದ ಪ್ರಧಾನಿ ಅದಾನಿ ಅಂಬಾನಿಯಂಥ ಬಂಡವಾಳಗಾರರಿಗೆ ಮಣೆ ಹಾಕುತ್ತಿದ್ದಾರೆ. ರೈತರನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಟಿ.ಬಿ.ಜಯಂದ್ರ ಮಾತನಾಡಿ, ’ನಮ್ಮ ಪಕ್ಷ ರೈತರ ನೆರವಿಗೆ ನಿಲ್ಲುತ್ತದೆ. ರೈತರು ಈ ದೇಶದ ಎಲ್ಲಾ ವರ್ಗದ ಜನರಿಗೂ ಅನ್ನ ನೀಡುವವರು. ಅವರು ಸಂಕಷ್ಟಕ್ಕೆ ಸಿಲುಕಿದರೆ ದೇಶವೇ ಸಂಕಷ್ಟಕ್ಕೆ ಸಿಲುಕಿದಂತೆ ಆಗುತ್ತದೆ. ಕಳೆದ ಹಲುವು ದಿನಗಳಿಂದ ದೆಹಲಿಯಲ್ಲಿ ನೂರಾರು ರೈತ ಸಂಘಟನೆ ಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಮನಹರಿಸುತ್ತಿಲ್ಲ’ ಎಂದರು.

ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

’ಇದು ಬಿಜೆಪಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ಗಳು ರೈತರು, ಜನಸಾಮಾನ್ಯರನ್ನು ಕತ್ತಲಿಗೆ ದೂಡಲಿವೆ. ಜನರು ಆಹಾರದ ಸಮಸ್ಯೆಯನ್ನು ಎದುರಿಸುವಂಥ ದಿನಗಳು ದೂರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ರೈತರ ಬೇಢಿಕೆಗಳಿಗೆ ಸ್ಪಂದಿಸಬೇಕು. ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಮೊದಲಿನ ವ್ಯವಸ್ಥೆಯನ್ನೇ ಅನುಷ್ಠಾನಕ್ಕೆ ತರಬೇಕು’ ಎಂದು ಒತ್ತಾಯಿಸಿದರು

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಭಯ ಬಣಗಳ ತುಮಕೂರು ಜಿಲ್ಲಾಧ್ಯಕ್ಷರಾದ ಎ.ಗೋವಿಂದ ರಾಜು, ಆನಂದ ಪಟೇಲ್, ’ಮಾತನಾಡಿ ಪ್ರಧಾನಿ ಮೋದಿ ಮೊಂಡುತನವನ್ನು ಬಿಟ್ಟು ರೈತರ ಜೊತೆ ಮಾತು ನಡೆಸಬೇಕು. ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗೆ ನಮಗೆ ಒಪ್ಪಿಗೆ ಇಲ್ಲ. ಆದ್ದರಿಂದ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನೇ ರದ್ದುಪಡಿಸಬೇಕು. ಹಲವು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಜಾರಿರುವುದು ಬೇಜವಾಬ್ದಾರಿಯನ್ನು ತೋರಿಸುತ್ತದೆ. ಹಿಟ್ಲರ್ ಕೂಡ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿ ಪತನಗೊಂಡ. ಇದನ್ನು ಪ್ರಧಾನಿ ಅರ್ಥ ಮಾಡಿಕೊಂಡರೆ ಒಳ್ಳೆಯದು. ಐದು ಸುತ್ತಿನ ಮಾತುಕತೆಯಲ್ಲೂ ರೈತರ ಬೇಡಿಕೆಯೊಂದನ್ನು ಈಡೇರಿಸಲು ಆಗಿಲ್ಲ. ಬರೀ ಮಾತು ಆಡಿದರೆ ಸಾಲದು. ರೈತರ ಬೇಡಿಕೆ ಈಡೇರಿಸಬೇಕು’ ಎಂದು ಹೇಳಿದರು.

ಆರ್.ಕೆ.ಎಸ್. ಮುಖಂಡ ಎಸ್.ಎನ್.ಸ್ವಾಮಿ, ಎಐಟಿಯುಸಿ ಗಿರೀಶ್, ಎಐಕೆಎಸ್ ಶಶಿಕಾಂತ್, ಎಐಕೆಎಸ್ ಸಿಸಿ ಕಾರ್ಯದರ್ಶಿ ಸಿ.ಯತಿರಾಜು, ಕಾರ್ಮಿಕ ಮುಖಂಡರು ಎಐಡಿಎಸ್ಒ‌ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...