Homeಚಳವಳಿತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

ತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

’ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ’

- Advertisement -
- Advertisement -

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಮತ್ತು ದೆಹಲಿಯಲ್ಲಿ ರೈತರು ನಡೆಸಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ತುಮಕೂರು ಮತ್ತು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು. . ರೈತ-ದಲಿತ-ಕಾರ್ಮಿಕ ಸಂಘಟನೆಗಳು, ಎಡಪಕ್ಷಗಳು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನಾನಿರತ ರೈತರು ಪ್ರಧಾನಿ ನರೆಂದ್ರ ಮೋದಿಯ ಪ್ರತಿಕೃತಿ ದಹನ ಮಾಡಿ ಕಿಡಿಕಾರಿದರು. ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು. ಕೃಷಿ ಸಂಬಂಧಿ ಸುಗ್ರೀವಾಜ್ಞೆಗಳ ಜಾರಿಯಿಂದ ದೇಶಕ್ಕೆ ಅನ್ನ ನೀಡುವ ರೈತ ಸಮೂಹ ಬೀದಿಗೆ ಬೀಳಲಿದೆ. ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ. ಅನ್ನ ನೀಡುವ ರೈತ ಮತ್ತೊಬ್ಬರ ಬಾಗಿಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ಎದುರಾಗಲಿದೆ.

ಬಡ, ಮಧ್ಯಮ ವರ್ಗದ ರೈತರ ಬಳಿ ಇರುವ ಅಲ್ಪಸ್ವಲ್ಪ ಭೂಮಿಯೂ ಶ್ರೀಮಂತರ ಕೈ ಸೇರಲಿದೆ. ಕಾರ್ಪೋರೇಟ್ ಕುಳಗಳು ಜಮೀನು ಖರೀದಿ ರೈತರನ್ನು ಕೂಲಿ ಇಟ್ಟುಕೊಳ್ಳುವಂತಹ ವ್ಯವಸ್ಥೆ ಮತ್ತೆ ಬರಲಿದೆ. ರೈತರು ಸ್ವತಂತ್ರವಾಗಿರಬೇಕು. ಯಾರ ಹಿಡಿತವೂ ಇರಬಾರದು. ಮತ್ತೊಬ್ಬರ ಗುಲಾಮ ರಾಗಿ ಜೀವನ ನಡೆಸಬಾರದು ಎಂಬ ನ್ಯಾಯದ ವ್ಯವಸ್ಥೆಗೆ ಧಕ್ಕೆ ಬರಲಿದೆ. ಹಾಗಾಗಿ ಭಾರತ ಸರ್ಕಾರ ಹೊಸ ಕೃಷಿ ಸುಗ್ರೀವಾಜ್ಞೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ಗುಬ್ಬಿ, ತಿಪಟೂರು, ಕುಣಿಗಲ್, ತುರುವೇಕೆರೆ, ಚಿಕ್ಕನಾಯಕನ ಹಳ್ಳಿ ಹೀಗೆ ಜಿಲ್ಲೆಯ ಎಲ್ಲಾ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ಜೋರಾಗಿ ನಡೆದವು. ರಾಜ್ಯ ರೈತ ಸಂಘಟನೆ ಮತ್ತು ಹಸಿರು ಸೇನೆಯ ಎರಡೂ ಬಣಗಳ ಕಾರ್ಯಕರ್ತರು ಮಿನಿವಿಧಾನ ಸೌಧಗಳ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಅನ್ನದಾತರ ಬೆನ್ನು ಮೂಳೆ ಮುರಿಯುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ. ಪ್ರತಿಯೊಬ್ಬರು ಅನ್ನ ತಿಂದೇ ಬದುಕಬೇಕು ಅನ್ನವಿಲ್ಲದೆ ಬಲವೂ ಇಲ್ಲ. ಜ್ಞಾನವೂ ಪಡೆಯಲು ಆಗುವುದಿಲ್ಲ. ಇದನ್ನು ಕಾರ್ಪೋರೇಟ್ ಬೆಂಬಲಿತ ಸರ್ಕಾರ ಗಳ ಅರ್ಥ ಮಾಡಿಕೊಳ್ಳಬೇಕು. ಇದು ಅರ್ಥವಾಗದಿದ್ದರೆ ದೇಶವನ್ನು ಆಳ್ವಿಕೆ ಮಾಡಲು ಯೋಗ್ಯರಲ್ಲ. ನಿಮಗೆ ಹೇಗೆ ಅರ್ಥಮಾಡಿಸಬೇಕೆಂಬುದನ್ನು ಚುನಾವಣೆಯಲ್ಲಿ ತಿಳಿಸುತ್ತೇವೆ ಎಂದು ಸವಾಲು ಹಾಕಿದರು.

ತುಮಕೂರು ಚರ್ಚ್ ವೃತ್ತದಿಂದ ಟೌನ್ ಹಾಲ್‌ವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದನ್ನು ಖಂಡಿಸಿದರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವ ಪ್ರಧಾನಿ ರೈತರನ್ನು ಒಳಗೊಳ್ಳದೆ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಬಾಯಿ ಮಾತಿಗೆ ಮಾತ್ರ ರೈತಮಂತ್ರ ಜಪಿಸುವ ಮೋದಿ ಕೇವಲ ಡೋಂಗಿಯಂತೆ ನಟಿಸುತ್ತಿದ್ದಾರೆ. ರೈತರ ಪರ ಕಾಳಿಜಿ ಇಲ್ಲದ ಪ್ರಧಾನಿ ಅದಾನಿ ಅಂಬಾನಿಯಂಥ ಬಂಡವಾಳಗಾರರಿಗೆ ಮಣೆ ಹಾಕುತ್ತಿದ್ದಾರೆ. ರೈತರನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಟಿ.ಬಿ.ಜಯಂದ್ರ ಮಾತನಾಡಿ, ’ನಮ್ಮ ಪಕ್ಷ ರೈತರ ನೆರವಿಗೆ ನಿಲ್ಲುತ್ತದೆ. ರೈತರು ಈ ದೇಶದ ಎಲ್ಲಾ ವರ್ಗದ ಜನರಿಗೂ ಅನ್ನ ನೀಡುವವರು. ಅವರು ಸಂಕಷ್ಟಕ್ಕೆ ಸಿಲುಕಿದರೆ ದೇಶವೇ ಸಂಕಷ್ಟಕ್ಕೆ ಸಿಲುಕಿದಂತೆ ಆಗುತ್ತದೆ. ಕಳೆದ ಹಲುವು ದಿನಗಳಿಂದ ದೆಹಲಿಯಲ್ಲಿ ನೂರಾರು ರೈತ ಸಂಘಟನೆ ಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಮನಹರಿಸುತ್ತಿಲ್ಲ’ ಎಂದರು.

ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

’ಇದು ಬಿಜೆಪಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ಗಳು ರೈತರು, ಜನಸಾಮಾನ್ಯರನ್ನು ಕತ್ತಲಿಗೆ ದೂಡಲಿವೆ. ಜನರು ಆಹಾರದ ಸಮಸ್ಯೆಯನ್ನು ಎದುರಿಸುವಂಥ ದಿನಗಳು ದೂರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ರೈತರ ಬೇಢಿಕೆಗಳಿಗೆ ಸ್ಪಂದಿಸಬೇಕು. ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಮೊದಲಿನ ವ್ಯವಸ್ಥೆಯನ್ನೇ ಅನುಷ್ಠಾನಕ್ಕೆ ತರಬೇಕು’ ಎಂದು ಒತ್ತಾಯಿಸಿದರು

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಭಯ ಬಣಗಳ ತುಮಕೂರು ಜಿಲ್ಲಾಧ್ಯಕ್ಷರಾದ ಎ.ಗೋವಿಂದ ರಾಜು, ಆನಂದ ಪಟೇಲ್, ’ಮಾತನಾಡಿ ಪ್ರಧಾನಿ ಮೋದಿ ಮೊಂಡುತನವನ್ನು ಬಿಟ್ಟು ರೈತರ ಜೊತೆ ಮಾತು ನಡೆಸಬೇಕು. ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗೆ ನಮಗೆ ಒಪ್ಪಿಗೆ ಇಲ್ಲ. ಆದ್ದರಿಂದ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನೇ ರದ್ದುಪಡಿಸಬೇಕು. ಹಲವು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಜಾರಿರುವುದು ಬೇಜವಾಬ್ದಾರಿಯನ್ನು ತೋರಿಸುತ್ತದೆ. ಹಿಟ್ಲರ್ ಕೂಡ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿ ಪತನಗೊಂಡ. ಇದನ್ನು ಪ್ರಧಾನಿ ಅರ್ಥ ಮಾಡಿಕೊಂಡರೆ ಒಳ್ಳೆಯದು. ಐದು ಸುತ್ತಿನ ಮಾತುಕತೆಯಲ್ಲೂ ರೈತರ ಬೇಡಿಕೆಯೊಂದನ್ನು ಈಡೇರಿಸಲು ಆಗಿಲ್ಲ. ಬರೀ ಮಾತು ಆಡಿದರೆ ಸಾಲದು. ರೈತರ ಬೇಡಿಕೆ ಈಡೇರಿಸಬೇಕು’ ಎಂದು ಹೇಳಿದರು.

ಆರ್.ಕೆ.ಎಸ್. ಮುಖಂಡ ಎಸ್.ಎನ್.ಸ್ವಾಮಿ, ಎಐಟಿಯುಸಿ ಗಿರೀಶ್, ಎಐಕೆಎಸ್ ಶಶಿಕಾಂತ್, ಎಐಕೆಎಸ್ ಸಿಸಿ ಕಾರ್ಯದರ್ಶಿ ಸಿ.ಯತಿರಾಜು, ಕಾರ್ಮಿಕ ಮುಖಂಡರು ಎಐಡಿಎಸ್ಒ‌ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...