Homeಚಳವಳಿತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

ತುಮಕೂರು ಜಿಲ್ಲೆಯ ವಿವಿದೆಡೆ ಭಾರತ್ ಬಂದ್: ಪ್ರಧಾನಿ ಪ್ರತಿಕೃತಿ ದಹನ

’ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ’

- Advertisement -
- Advertisement -

ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಮತ್ತು ದೆಹಲಿಯಲ್ಲಿ ರೈತರು ನಡೆಸಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ತುಮಕೂರು ಮತ್ತು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು. . ರೈತ-ದಲಿತ-ಕಾರ್ಮಿಕ ಸಂಘಟನೆಗಳು, ಎಡಪಕ್ಷಗಳು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನಾನಿರತ ರೈತರು ಪ್ರಧಾನಿ ನರೆಂದ್ರ ಮೋದಿಯ ಪ್ರತಿಕೃತಿ ದಹನ ಮಾಡಿ ಕಿಡಿಕಾರಿದರು. ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು. ಕೃಷಿ ಸಂಬಂಧಿ ಸುಗ್ರೀವಾಜ್ಞೆಗಳ ಜಾರಿಯಿಂದ ದೇಶಕ್ಕೆ ಅನ್ನ ನೀಡುವ ರೈತ ಸಮೂಹ ಬೀದಿಗೆ ಬೀಳಲಿದೆ. ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ. ಅನ್ನ ನೀಡುವ ರೈತ ಮತ್ತೊಬ್ಬರ ಬಾಗಿಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ಎದುರಾಗಲಿದೆ.

ಬಡ, ಮಧ್ಯಮ ವರ್ಗದ ರೈತರ ಬಳಿ ಇರುವ ಅಲ್ಪಸ್ವಲ್ಪ ಭೂಮಿಯೂ ಶ್ರೀಮಂತರ ಕೈ ಸೇರಲಿದೆ. ಕಾರ್ಪೋರೇಟ್ ಕುಳಗಳು ಜಮೀನು ಖರೀದಿ ರೈತರನ್ನು ಕೂಲಿ ಇಟ್ಟುಕೊಳ್ಳುವಂತಹ ವ್ಯವಸ್ಥೆ ಮತ್ತೆ ಬರಲಿದೆ. ರೈತರು ಸ್ವತಂತ್ರವಾಗಿರಬೇಕು. ಯಾರ ಹಿಡಿತವೂ ಇರಬಾರದು. ಮತ್ತೊಬ್ಬರ ಗುಲಾಮ ರಾಗಿ ಜೀವನ ನಡೆಸಬಾರದು ಎಂಬ ನ್ಯಾಯದ ವ್ಯವಸ್ಥೆಗೆ ಧಕ್ಕೆ ಬರಲಿದೆ. ಹಾಗಾಗಿ ಭಾರತ ಸರ್ಕಾರ ಹೊಸ ಕೃಷಿ ಸುಗ್ರೀವಾಜ್ಞೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ಭಾರಿ ಬೆಂಬಲ: ಹೋರಾಟ ಯಶಸ್ವಿ

ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ಗುಬ್ಬಿ, ತಿಪಟೂರು, ಕುಣಿಗಲ್, ತುರುವೇಕೆರೆ, ಚಿಕ್ಕನಾಯಕನ ಹಳ್ಳಿ ಹೀಗೆ ಜಿಲ್ಲೆಯ ಎಲ್ಲಾ ಹತ್ತೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆಗಳು ಜೋರಾಗಿ ನಡೆದವು. ರಾಜ್ಯ ರೈತ ಸಂಘಟನೆ ಮತ್ತು ಹಸಿರು ಸೇನೆಯ ಎರಡೂ ಬಣಗಳ ಕಾರ್ಯಕರ್ತರು ಮಿನಿವಿಧಾನ ಸೌಧಗಳ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಅನ್ನದಾತರ ಬೆನ್ನು ಮೂಳೆ ಮುರಿಯುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ. ಪ್ರತಿಯೊಬ್ಬರು ಅನ್ನ ತಿಂದೇ ಬದುಕಬೇಕು ಅನ್ನವಿಲ್ಲದೆ ಬಲವೂ ಇಲ್ಲ. ಜ್ಞಾನವೂ ಪಡೆಯಲು ಆಗುವುದಿಲ್ಲ. ಇದನ್ನು ಕಾರ್ಪೋರೇಟ್ ಬೆಂಬಲಿತ ಸರ್ಕಾರ ಗಳ ಅರ್ಥ ಮಾಡಿಕೊಳ್ಳಬೇಕು. ಇದು ಅರ್ಥವಾಗದಿದ್ದರೆ ದೇಶವನ್ನು ಆಳ್ವಿಕೆ ಮಾಡಲು ಯೋಗ್ಯರಲ್ಲ. ನಿಮಗೆ ಹೇಗೆ ಅರ್ಥಮಾಡಿಸಬೇಕೆಂಬುದನ್ನು ಚುನಾವಣೆಯಲ್ಲಿ ತಿಳಿಸುತ್ತೇವೆ ಎಂದು ಸವಾಲು ಹಾಕಿದರು.

ತುಮಕೂರು ಚರ್ಚ್ ವೃತ್ತದಿಂದ ಟೌನ್ ಹಾಲ್‌ವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದನ್ನು ಖಂಡಿಸಿದರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವ ಪ್ರಧಾನಿ ರೈತರನ್ನು ಒಳಗೊಳ್ಳದೆ ಹೇಗೆ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪದೇಪದೇ ಉಲ್ಲೇಖಿಸುವ ಪ್ರಧಾನಿ ರೈತರ ಬೇಡಿಕೆಯೊಂದನ್ನು ಈಡೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಬಾಯಿ ಮಾತಿಗೆ ಮಾತ್ರ ರೈತಮಂತ್ರ ಜಪಿಸುವ ಮೋದಿ ಕೇವಲ ಡೋಂಗಿಯಂತೆ ನಟಿಸುತ್ತಿದ್ದಾರೆ. ರೈತರ ಪರ ಕಾಳಿಜಿ ಇಲ್ಲದ ಪ್ರಧಾನಿ ಅದಾನಿ ಅಂಬಾನಿಯಂಥ ಬಂಡವಾಳಗಾರರಿಗೆ ಮಣೆ ಹಾಕುತ್ತಿದ್ದಾರೆ. ರೈತರನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಟಿ.ಬಿ.ಜಯಂದ್ರ ಮಾತನಾಡಿ, ’ನಮ್ಮ ಪಕ್ಷ ರೈತರ ನೆರವಿಗೆ ನಿಲ್ಲುತ್ತದೆ. ರೈತರು ಈ ದೇಶದ ಎಲ್ಲಾ ವರ್ಗದ ಜನರಿಗೂ ಅನ್ನ ನೀಡುವವರು. ಅವರು ಸಂಕಷ್ಟಕ್ಕೆ ಸಿಲುಕಿದರೆ ದೇಶವೇ ಸಂಕಷ್ಟಕ್ಕೆ ಸಿಲುಕಿದಂತೆ ಆಗುತ್ತದೆ. ಕಳೆದ ಹಲುವು ದಿನಗಳಿಂದ ದೆಹಲಿಯಲ್ಲಿ ನೂರಾರು ರೈತ ಸಂಘಟನೆ ಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಗಮನಹರಿಸುತ್ತಿಲ್ಲ’ ಎಂದರು.

ಇದನ್ನೂ ಓದಿ: ದೆಹಲಿ-ಮೀರತ್ ರಾಷ್ಟ್ರೀಯ ಹೆದ್ದಾರಿ ತಡೆದ ರೈತರು: ಭಾರತ್ ಬಂದ್‌ನ ಪ್ರಮುಖ ಅಂಶಗಳು ಇಲ್ಲಿವೆ…

’ಇದು ಬಿಜೆಪಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂಬುದನ್ನು ತೋರಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ಗಳು ರೈತರು, ಜನಸಾಮಾನ್ಯರನ್ನು ಕತ್ತಲಿಗೆ ದೂಡಲಿವೆ. ಜನರು ಆಹಾರದ ಸಮಸ್ಯೆಯನ್ನು ಎದುರಿಸುವಂಥ ದಿನಗಳು ದೂರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ರೈತರ ಬೇಢಿಕೆಗಳಿಗೆ ಸ್ಪಂದಿಸಬೇಕು. ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಮೊದಲಿನ ವ್ಯವಸ್ಥೆಯನ್ನೇ ಅನುಷ್ಠಾನಕ್ಕೆ ತರಬೇಕು’ ಎಂದು ಒತ್ತಾಯಿಸಿದರು

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಭಯ ಬಣಗಳ ತುಮಕೂರು ಜಿಲ್ಲಾಧ್ಯಕ್ಷರಾದ ಎ.ಗೋವಿಂದ ರಾಜು, ಆನಂದ ಪಟೇಲ್, ’ಮಾತನಾಡಿ ಪ್ರಧಾನಿ ಮೋದಿ ಮೊಂಡುತನವನ್ನು ಬಿಟ್ಟು ರೈತರ ಜೊತೆ ಮಾತು ನಡೆಸಬೇಕು. ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗೆ ನಮಗೆ ಒಪ್ಪಿಗೆ ಇಲ್ಲ. ಆದ್ದರಿಂದ ಕೃಷಿ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನೇ ರದ್ದುಪಡಿಸಬೇಕು. ಹಲವು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಜಾರಿರುವುದು ಬೇಜವಾಬ್ದಾರಿಯನ್ನು ತೋರಿಸುತ್ತದೆ. ಹಿಟ್ಲರ್ ಕೂಡ ಸರ್ವಾಧಿಕಾರಿಯಾಗಿ ಆಡಳಿತ ನಡೆಸಿ ಪತನಗೊಂಡ. ಇದನ್ನು ಪ್ರಧಾನಿ ಅರ್ಥ ಮಾಡಿಕೊಂಡರೆ ಒಳ್ಳೆಯದು. ಐದು ಸುತ್ತಿನ ಮಾತುಕತೆಯಲ್ಲೂ ರೈತರ ಬೇಡಿಕೆಯೊಂದನ್ನು ಈಡೇರಿಸಲು ಆಗಿಲ್ಲ. ಬರೀ ಮಾತು ಆಡಿದರೆ ಸಾಲದು. ರೈತರ ಬೇಡಿಕೆ ಈಡೇರಿಸಬೇಕು’ ಎಂದು ಹೇಳಿದರು.

ಆರ್.ಕೆ.ಎಸ್. ಮುಖಂಡ ಎಸ್.ಎನ್.ಸ್ವಾಮಿ, ಎಐಟಿಯುಸಿ ಗಿರೀಶ್, ಎಐಕೆಎಸ್ ಶಶಿಕಾಂತ್, ಎಐಕೆಎಸ್ ಸಿಸಿ ಕಾರ್ಯದರ್ಶಿ ಸಿ.ಯತಿರಾಜು, ಕಾರ್ಮಿಕ ಮುಖಂಡರು ಎಐಡಿಎಸ್ಒ‌ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...