Homeಕರ್ನಾಟಕಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

ಭಾರತ್ ಬಂದ್: ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ರೈತರ ಬಂದ್‌ಗೆ ʼನೈತಿಕʼ ಬೆಂಬಲ

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ ಒಂದು ವರ್ಷವಾಗುತ್ತಿರುವ ಹಿನ್ನೆಲೆ ರೈತ ಸಂಘಟನೆಗಳು ಸೆಪ್ಟಂಬರ್‌ 27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿವೆ. ರೈತರ ಕರೆಗೆ ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ.

ರಾಜ್ಯದಲ್ಲೂ ಭಾರತ್ ಬಂದ್‌ಗೆ ಬೆಂಬಲವಾಗಿ ಸೆಪ್ಟಂಬರ್‌ 27ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಯ ಕ್ಯಾಮ್ಸ್‌ ಕೂಡ ಈ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ.

“ನಮ್ಮ ನೆಲ, ಜಲ, ಸಂಸ್ಕಾರ, ಸಂಸ್ಕೃತಿಗೆ ದಕ್ಕೆ ಉಂಟಾದಾಗ ಸಂದರ್ಭಕ್ಕನುಗುಣವಾಗಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಯವರು ತಮ್ಮದೇ ಆದ ರೀತಿಯಲ್ಲಿ ಭಾಗವಹಿಸುವಿಕೆ ಹಾಗು ಬೆಂಬಲ ವ್ಯಕ್ತಪಡಿಸಿರುವುದು ತಿಳಿದಿರುವ ವಿಷಯ, ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವಂಚಿತವಾಗಿ ಮಕ್ಕಳ ನಿರಂತರ ಕಲಿಕೆಯಲ್ಲಿ ಹೆಚ್ಚಿನ ಅನ್ಯಾಯವಾಗಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗೆ ರಜೆ ಕೊಟ್ಟು ಹೋರಾಟಕ್ಕೆ ಭಾಗವಹಿಸಲು ಕಷ್ಟಸಾಧ್ಯ ಎಂಬುವ ಅಭಿಪ್ರಾಯದೊಂದಿಗೆ, ಶಿಕ್ಷಣ ಸಂಸ್ಥೆಗಳು, ಶಿಕ್ಷಕರು,  ಶಿಕ್ಷಕೇತರ ಸಿಬ್ಬಂದಿ, ವ್ಯವಸ್ಥಾಪಕರು ಸಾಂಕೇತಿಕ ಬೆಂಬಲ ನೀಡಲು ಕ್ಯಾಮ್ಸ್‌ ಮನವಿ ಮಾಡಿದೆ” ಎಂದಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಜೊತೆಗೆ ಸೆಪ್ಟಂಬರ್‌ 27ರ ದಿನ ಹಸಿರು ಉಡುಪು ಅಥವಾ ಹಸಿರು ಪಟ್ಟಿಯನ್ನು ಧರಿಸುವ ಮುಖಾಂತರ ಈ ಒಂದು ಹೋರಾಟಕ್ಕೆ ನೈತಿಕ ಬೆಂಬಲ ಕೊಡಬೇಕಾಗಿ ತಮ್ಮಲ್ಲಿ ಮನವಿ ಮಾಡಲಾಗಿದೆ. ನಮ್ಮ ಸಂಘಟನೆಯ ಎಲ್ಲಾ ಸದಸ್ಯರು ರೈತರ ಹೋರಾಟಕ್ಕೆ ತಾವುಗಳು ನೈತಿಕ ಬೆಂಬಲ ಕೊಟ್ಟು ಸಂಘಟನೆಯ ನಿಲುವನ್ನು ಆದರಿಸುತ್ತೀರ ಎಂದು ನಂಬಿರುತ್ತೇವೆ ಎಂದು ಕಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್ ಅಂಗವಾಗಿ “ ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾರ್ಥಿ, ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದರು. ಇದಕ್ಕೆ ಹಲವು ಸಂಘ, ಸಂಸ್ಥೆಗಳು ಬೆಂಬಲ ನೀಡಿವೆ.


ಇದನ್ನೂ ಓದಿ: ಸೆ.27ಕ್ಕೆ ಭಾರತ್ ಬಂದ್: ಕರ್ನಾಟಕದಲ್ಲಿ ಬಂದ್‌ ಸಿದ್ಧತೆ ಬಗ್ಗೆ ಸಂಯುಕ್ತ ಹೋರಾಟದ ಬಹಿರಂಗ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...