Homeಮುಖಪುಟಮಾ. 26ಕ್ಕೆ ಭಾರತ್ ಬಂದ್: ಹೋಳಿ ದಿನದಂದು ಕೃಷಿ ಕಾನೂನುಗಳ ಪ್ರತಿ ದಹನ

ಮಾ. 26ಕ್ಕೆ ಭಾರತ್ ಬಂದ್: ಹೋಳಿ ದಿನದಂದು ಕೃಷಿ ಕಾನೂನುಗಳ ಪ್ರತಿ ದಹನ

ಮುಷ್ಕರವು ಬೆಳಗ್ಗೆ 6ಕ್ಕೆ ಆರಂಭವಾಗಿ ಸಂಜೆ 6ರ ತನಕವೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳು, ಡೈರಿಗಳು ಸಹಿತ ಎಲ್ಲವೂ ಬಾಗಿಲು ಮುಚ್ಚಲಿವೆ

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 3 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ ಇದೇ ಮಾರ್ಚ್ 26 ರಂದು ಭಾರತದಾದ್ಯಂತ ಸಂಪೂರ್ಣ ಭಾರತ್ ಬಂದ್‌ಗೆ ಹೋರಾಟನಿರತ ರೈತರು ಕರೆ ನೀಡಿದ್ದಾರೆ.

ಅಖಿಲ ಭಾರತ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ಇತರೆ ಸಾಮೂಹಿಕ ಸಂಘಟನೆಗಳ ಬೆಂಬಲವನ್ನು ಕೇಳಲಾಗಿದೆ ಎಂದು ರೈತ ಸಂಘಟನೆಗಳು ಹೇಳಿವೆ.

ರೈತರ ಚಳವಳಿಗೆ ನಾಲ್ಕು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಮಾರ್ಚ್ 26ರಂದು ದೇಶವ್ಯಾಪಿ ಮುಷ್ಕರ ನಡೆಯಲಿದ್ದು, ಎಲ್ಲ ಅಂಗಡಿಗಳು ಹಾಗೂ ಇತರ ವ್ಯವಹಾರ ಸಂಸ್ಥೆಗಳು 12 ಗಂಟೆಗಳ ಕಾಲ ಮುಚ್ಚಲಿವೆ. ಮಾರ್ಚ್ 28ರಂದು ಹೋಳಿ ದಹನದ ವೇಳೆ ಕೃಷಿ ಕಾನೂನುಗಳ ಪ್ರತಿಗಳನ್ನು ಸುಡಲಾಗುವುದು ಎಂದು ಎಸ್ ಕೆ ಎಂ ತಿಳಿಸಿದೆ.

ಮುಷ್ಕರವು ಬೆಳಗ್ಗೆ 6ಕ್ಕೆ ಆರಂಭವಾಗಿ ಸಂಜೆ 6ರ ತನಕವೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳು, ಡೈರಿಗಳು ಸೇರಿದಂತೆ ಎಲ್ಲವೂ ಬಾಗಿಲು ಮುಚ್ಚಲಿವೆ. ಹೋಳಿಯ ದಿನ 3 ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಹಾಕಲಾಗುವುದು. ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದು ಮಾಡಿ, ಕನಿಷ್ಠ ಬೆಂಬಲ ಬೆಲೆಗೆ ಲಿಖಿತ ಖಾತರಿ ನೀಡುವ ವಿಶ್ವಾಸ ನಮಗಿದೆ ಎಂದು ಗಂಗಾನಗರ್ ಕಿಸಾನ್ ಸಮಿತಿಯ ರಂಜಿತ್ ರಾಜು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ: ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ಕನಿಷ್ಟ ಬೆಂಬಲೆ ಬೆಲೆ ನಿಗದಿಗೊಳಿಸುವಂತೆ ಮತ್ತು 3 ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ದೇಶದಾದ್ಯಂತ ಇರುವ ರೈತರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 2020ರ ನವೆಂಬರ್ ತಿಂಗಳಿನಿಂದಲೂ ಹೋರಾಟ ಮಾಡುತ್ತಿದ್ದಾರೆ.

ಈ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳಾಗಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ನಂತರ ಜ. 26 ರಂದು ಟ್ರ್ಯಾಕ್ಟರ್‌ ರ್ಯಾಲಿಗೆ ರೈತರು ಕರೆ ನೀಡಿದ್ದರು. ಆ ಸಂದರ್ಭದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳಿಂದ ರೈತ ಹೋರಾಟಕ್ಕೆ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ರಾಕೆಶ್ ಟಿಕಾಯತ್ ಭಾವನಾತ್ಮಕ ಭಾಷಣ ಮಾಡಿದ ನಂತರ ಉತ್ತರ ಭಾರತದಾದ್ಯಂತ ಪ್ರತಿ ಹಳ್ಳಿಗಳಲ್ಲೂ ಮಹಾ ಪಂಚಾಯತ್‌ಗಳನ್ನು ನಡೆಸಿ ಲಕ್ಷಾಂತರ ರೈತ ಬೆಂಬಲಿಗರನ್ನು ಒಟ್ಟಗೂಡಿಸಲಾಗುತ್ತಿದೆ. ಅಂದಿನಿಂದ ರೈತ ಹೋರಾಟ ಮತ್ತಷ್ಟು ಚುರುಕು ಪಡೆದುಕೊಂಡಿದೆ.

ರೈತ ಹೋರಾಟವನ್ನು ಹತ್ತಿಕ್ಕಲು ಸರ್ಕಾರವು ಹಲವು ಅನೈತಿಕ ಮಾರ್ಗಗಳನ್ನು ಪರೋಕ್ಷವಾಗಿ ಅನುಸರಿಸುತ್ತಿದೆ. ಆದರೆ ಹೋರಾಟವನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಿಲ್ಲ. ಈಗ ರೈತರು ಮತ್ತೊಮ್ಮೆ ದೇಶದಾದ್ಯಂತ ಬಂದ್ ಮಾಡಲು ಕರೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...