Homeಚಳವಳಿಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಭಾರತ್ ಬಂದ್‌ಗೆ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ಟಿಆರ್‌ಎಸ್, 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ಬೆಂಬಲವನ್ನು ಘೋಷಿಸಿವೆ.

- Advertisement -
- Advertisement -

ಪ್ರತಿಭಟನಾ ನಿತರ ರೈತರು ಮತ್ತು ಸರ್ಕಾರದ ನಡುವಿನ ಐದನೇ ಸುತ್ತಿನ ಮಾತುಕತೆ ಶನಿವಾರ  ವಿಫಲವಾಗಿದ್ದರಿಂದ, ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 8 ರ ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.

ಕೃಷಿ ಮಸೂದೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಕೇಂದ್ರ ಸರ್ಕಾರ ಪದೇ ಪದೇ ಆಶ್ವಾಸನೆ ನೀಡಿದೆ. ಆದರೆ ಸಭೆಗಳು ವಿಫಲವಾಗುತ್ತಿರುವುದರಿಂದ, ಡಿಸೆಂಬರ್ 8 ಕ್ಕೆ ಘೋಷಿಸಲಾದ ಭಾರತ್ ಬಂದ್ ಯೋಜಿಸಿದಂತೆ ನಡೆಯಲಿದೆ ಎಂದು ಕೃಷಿ ಒಕ್ಕೂಟದ ಮುಖಂಡರು ಹೇಳಿದ್ದಾರೆ. ರೈತರ ಪ್ರತಿಭಟನೆಗೆ  ಬಿಜೆಪಿಯೇತರ ಸರ್ಕಾರಗಳು, ಎಡ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ 2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020 ರ ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ- 2020 ಇವುಗಳನ್ನು ವಿರೋಧಿಸಿ ರೈತರು ಕಳೆದ 11 ದಿನಗಳಿಂದಲೂ  ಪ್ರತಿಭಟಿಸುತ್ತಿದ್ದಾರೆ.

“ಸರ್ಕಾರವು ಕೃಷಿ ಕಾನೂನುಗಳ ಸಂಬಂಧ ಕರಡನ್ನು ಸಿದ್ಧಪಡಿಸಿ ನಮಗೆ ನೀಡುತ್ತದೆ. ಈ ಕುರಿತು ಕೇಂದ್ರ ಸರ್ಕಾರ ರಾಜ್ಯಗಳನ್ನೂ ಸಂಪರ್ಕಿಸುತ್ತಾರೆ ಎಂದು ತಿಳಿಸಿದ್ದಾರೆ. ಎಂಎಸ್‌ಪಿ ಬಗ್ಗೆಯೂ ಚರ್ಚೆಗಳು ನಡೆದವು. ಆದರೆ, ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕುರಿತು ಮಾತನಾಡಬೇಕು ಎಂದು ಹೇಳಿದ್ದೇವೆ. ಈ ಮೊದಲು ಘೋಷಿಸಿದಂತೆ ಭಾರತ್ ಬಂದ್ ನಡೆಯಲಿದೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಸರ್ಕಾರದ ಜೊತೆ ಮಾತುಕತೆಯಿಂದ ಪ್ರಯೋಜನವಿಲ್ಲ. ಅವರು ಕಾಯ್ದೆಗಳನ್ನು ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಹಾಗಾಗಿ ಮಂಗಳವಾರ ಭಾರತ್ ಬಂದ್ ನಡೆಸಲಿದ್ದೇವೆ. ದೆಹಲಿಯ ಪ್ರತಿ ರಸ್ತೆಗಳನ್ನು, ಪ್ರತಿ ಟೋಲ್‌ಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಘೋಷಿಸಿದ್ದರು.

ರೈತರ ಭಾರತ್ ಬಂದ್‌ಗೆ, ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ಭಾರತ್ ಬಂದ್ ಕರೆಯ ಭಾಗವಾಗಿ, ರೈತರು ದೆಹಲಿಗೆ ಹೋಗುವ ಎಲ್ಲಾ ರಸ್ತೆಗಳನ್ನು ನಿರ್ಬಂಧಿಸಲು ಸಿದ್ಧರಾಗಿದ್ದಾರೆ. ಟೋಲ್ ಪ್ಲಾಜಾಗಳನ್ನು ಸಹ ಆಕ್ರಮಿಸಲಾಗುವುದು ಮತ್ತು ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳಲಿದೆ.

ಎಡ ಪಕ್ಷಗಳು ಭಾರತ್ ಬಂದ್‌ಗಾಗಿ ರೈತರ ಕರೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದು, ರೈತರಿಗೆ ಸಹಕಾರ ನೀಡಿ ಪ್ರತಿಭಟನೆಗೆ ಬೆಂಬಲ ತೋರಿಸುವಂತೆ ಇತರ ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ. ಸಿಪಿಐ, ಸಿಪಿಐ (ಎಂ) ಮತ್ತು ಸಿಪಿಎಂ (ಎಂಎಲ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ ಮತ್ತು ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC), ಹಿಂದ್ ಮಜ್ದೂರ್ ಸಭಾ (HMS), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಅಖಿಲ ಭಾರತ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC)  ಮತ್ತು ಟ್ರೇಡ್ ಯೂನಿಯನ್ ಕೋ- ಆರ್ಡಿನೇಷನ್ ಸೆಂಟರ್ (TUCC)  ಕಾರ್ಮಿಕ ಸಂಘಟನೆಗಳು ಸಹ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿವೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಬಿಹಾರದ ಗಾಂಧಿ ಮೈದಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಕ್ಕಾಗಿ ಪಾಟ್ನಾ ಪೊಲೀಸರು ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಮತ್ತು ಇತರ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಚಲೋ ಆಂದೋಲನಕ್ಕೆ ಒಗ್ಗಟ್ಟಾಗಿ ಪ್ರತಿಭಟನೆ ನಡೆಸಬೇಕೆಂದು ಬಿಹಾರ ವಿಧಾನಸಭೆ ಪ್ರತಿಪಕ್ಷದ ನಾಯಕ ತೇಜಶ್ವಿ ಯಾದವ್ ಕರೆ ನೀಡಿದ್ದರು.

ಆರ್‌ಜೆಡಿ, ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಹಿರಿಯ ಮುಖಂಡರು ಶನಿವಾರ ಧರಣಿ ನಡೆಸಿದ್ದರು. ಧರಣಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ರೈತರ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭನಟನಾ ನಿರತ ರೈತ ಸಂಘಟನೆಗಳು, ಉತ್ತರ ಪ್ರದೇಶ ಮತ್ತು ಹರಿಯಾಣ ಗಡಿಯ ರೈತರಿಗೆ ತಮ್ಮೊಂದಿಗೆ ಸೇರಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕಳೆದ 10 ದಿನಗಳಿಂದ, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶವನ್ನು (ಎನ್‌ಸಿಆರ್) ಸಂಪರ್ಕಿಸುವ ರಸ್ತೆಗಳು, ದೆಹಲಿ ಗಡಿ ಭಾಗಗಳು ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ಸಾವಿರಾರು ರೈತರ ಪ್ರತಿಭಟನೆಗೆ ಸಾಕ್ಷಿಯಾಗಿದೆ.


ಇದನ್ನೂ ಓದಿ: ಅನ್ನ ನೀಡುವ ರೈತರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...