Homeಚಳವಳಿಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ಭಾರತ್ ಬಂದ್‌ಗೆ, ಆರ್‌ಜೆಡಿ, ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ಟಿಆರ್‌ಎಸ್, 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ಬೆಂಬಲವನ್ನು ಘೋಷಿಸಿವೆ.

- Advertisement -
- Advertisement -

ಪ್ರತಿಭಟನಾ ನಿತರ ರೈತರು ಮತ್ತು ಸರ್ಕಾರದ ನಡುವಿನ ಐದನೇ ಸುತ್ತಿನ ಮಾತುಕತೆ ಶನಿವಾರ  ವಿಫಲವಾಗಿದ್ದರಿಂದ, ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ಡಿಸೆಂಬರ್ 8 ರ ಮಂಗಳವಾರ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ.

ಕೃಷಿ ಮಸೂದೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಕೇಂದ್ರ ಸರ್ಕಾರ ಪದೇ ಪದೇ ಆಶ್ವಾಸನೆ ನೀಡಿದೆ. ಆದರೆ ಸಭೆಗಳು ವಿಫಲವಾಗುತ್ತಿರುವುದರಿಂದ, ಡಿಸೆಂಬರ್ 8 ಕ್ಕೆ ಘೋಷಿಸಲಾದ ಭಾರತ್ ಬಂದ್ ಯೋಜಿಸಿದಂತೆ ನಡೆಯಲಿದೆ ಎಂದು ಕೃಷಿ ಒಕ್ಕೂಟದ ಮುಖಂಡರು ಹೇಳಿದ್ದಾರೆ. ರೈತರ ಪ್ರತಿಭಟನೆಗೆ  ಬಿಜೆಪಿಯೇತರ ಸರ್ಕಾರಗಳು, ಎಡ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ 2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020 ರ ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ- 2020 ಇವುಗಳನ್ನು ವಿರೋಧಿಸಿ ರೈತರು ಕಳೆದ 11 ದಿನಗಳಿಂದಲೂ  ಪ್ರತಿಭಟಿಸುತ್ತಿದ್ದಾರೆ.

“ಸರ್ಕಾರವು ಕೃಷಿ ಕಾನೂನುಗಳ ಸಂಬಂಧ ಕರಡನ್ನು ಸಿದ್ಧಪಡಿಸಿ ನಮಗೆ ನೀಡುತ್ತದೆ. ಈ ಕುರಿತು ಕೇಂದ್ರ ಸರ್ಕಾರ ರಾಜ್ಯಗಳನ್ನೂ ಸಂಪರ್ಕಿಸುತ್ತಾರೆ ಎಂದು ತಿಳಿಸಿದ್ದಾರೆ. ಎಂಎಸ್‌ಪಿ ಬಗ್ಗೆಯೂ ಚರ್ಚೆಗಳು ನಡೆದವು. ಆದರೆ, ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕುರಿತು ಮಾತನಾಡಬೇಕು ಎಂದು ಹೇಳಿದ್ದೇವೆ. ಈ ಮೊದಲು ಘೋಷಿಸಿದಂತೆ ಭಾರತ್ ಬಂದ್ ನಡೆಯಲಿದೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಹೇಳಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ಸರ್ಕಾರದ ಜೊತೆ ಮಾತುಕತೆಯಿಂದ ಪ್ರಯೋಜನವಿಲ್ಲ. ಅವರು ಕಾಯ್ದೆಗಳನ್ನು ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಹಾಗಾಗಿ ಮಂಗಳವಾರ ಭಾರತ್ ಬಂದ್ ನಡೆಸಲಿದ್ದೇವೆ. ದೆಹಲಿಯ ಪ್ರತಿ ರಸ್ತೆಗಳನ್ನು, ಪ್ರತಿ ಟೋಲ್‌ಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಘೋಷಿಸಿದ್ದರು.

ರೈತರ ಭಾರತ್ ಬಂದ್‌ಗೆ, ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ಭಾರತ್ ಬಂದ್ ಕರೆಯ ಭಾಗವಾಗಿ, ರೈತರು ದೆಹಲಿಗೆ ಹೋಗುವ ಎಲ್ಲಾ ರಸ್ತೆಗಳನ್ನು ನಿರ್ಬಂಧಿಸಲು ಸಿದ್ಧರಾಗಿದ್ದಾರೆ. ಟೋಲ್ ಪ್ಲಾಜಾಗಳನ್ನು ಸಹ ಆಕ್ರಮಿಸಲಾಗುವುದು ಮತ್ತು ಕೇಂದ್ರ ಸರ್ಕಾರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳಲಿದೆ.

ಎಡ ಪಕ್ಷಗಳು ಭಾರತ್ ಬಂದ್‌ಗಾಗಿ ರೈತರ ಕರೆಗೆ ತಮ್ಮ ಬೆಂಬಲವನ್ನು ಸೂಚಿಸಿದ್ದು, ರೈತರಿಗೆ ಸಹಕಾರ ನೀಡಿ ಪ್ರತಿಭಟನೆಗೆ ಬೆಂಬಲ ತೋರಿಸುವಂತೆ ಇತರ ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದೆ. ಸಿಪಿಐ, ಸಿಪಿಐ (ಎಂ) ಮತ್ತು ಸಿಪಿಎಂ (ಎಂಎಲ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ ಮತ್ತು ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC), ಹಿಂದ್ ಮಜ್ದೂರ್ ಸಭಾ (HMS), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಅಖಿಲ ಭಾರತ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC)  ಮತ್ತು ಟ್ರೇಡ್ ಯೂನಿಯನ್ ಕೋ- ಆರ್ಡಿನೇಷನ್ ಸೆಂಟರ್ (TUCC)  ಕಾರ್ಮಿಕ ಸಂಘಟನೆಗಳು ಸಹ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ನೀಡಿವೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಬಿಹಾರದ ಗಾಂಧಿ ಮೈದಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಕ್ಕಾಗಿ ಪಾಟ್ನಾ ಪೊಲೀಸರು ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಮತ್ತು ಇತರ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಚಲೋ ಆಂದೋಲನಕ್ಕೆ ಒಗ್ಗಟ್ಟಾಗಿ ಪ್ರತಿಭಟನೆ ನಡೆಸಬೇಕೆಂದು ಬಿಹಾರ ವಿಧಾನಸಭೆ ಪ್ರತಿಪಕ್ಷದ ನಾಯಕ ತೇಜಶ್ವಿ ಯಾದವ್ ಕರೆ ನೀಡಿದ್ದರು.

ಆರ್‌ಜೆಡಿ, ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಹಿರಿಯ ಮುಖಂಡರು ಶನಿವಾರ ಧರಣಿ ನಡೆಸಿದ್ದರು. ಧರಣಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದೆ.

ಪಶ್ಚಿಮ ಬಂಗಾಳ, ತಮಿಳುನಾಡು, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ರೈತರ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭನಟನಾ ನಿರತ ರೈತ ಸಂಘಟನೆಗಳು, ಉತ್ತರ ಪ್ರದೇಶ ಮತ್ತು ಹರಿಯಾಣ ಗಡಿಯ ರೈತರಿಗೆ ತಮ್ಮೊಂದಿಗೆ ಸೇರಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕಳೆದ 10 ದಿನಗಳಿಂದ, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶವನ್ನು (ಎನ್‌ಸಿಆರ್) ಸಂಪರ್ಕಿಸುವ ರಸ್ತೆಗಳು, ದೆಹಲಿ ಗಡಿ ಭಾಗಗಳು ಪಂಜಾಬ್, ಹರಿಯಾಣ ಮತ್ತು ಇತರ ರಾಜ್ಯಗಳ ಸಾವಿರಾರು ರೈತರ ಪ್ರತಿಭಟನೆಗೆ ಸಾಕ್ಷಿಯಾಗಿದೆ.


ಇದನ್ನೂ ಓದಿ: ಅನ್ನ ನೀಡುವ ರೈತರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...