Homeಮುಖಪುಟಭಾರತ್ ಬಂದ್ ಯಶಸ್ವಿ: ದೇಶಾದ್ಯಂತದ ಹೋರಾಟದ ಚಿತ್ರಗಳು

ಭಾರತ್ ಬಂದ್ ಯಶಸ್ವಿ: ದೇಶಾದ್ಯಂತದ ಹೋರಾಟದ ಚಿತ್ರಗಳು

ಮೈಸೂರು ಬ್ಯಾಂಕ್ ವೃತ್ತದಲ್ಲಿಯೂ ಸಹ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆದಿದೆ. ಹಲವು ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಗಿದೆ. 

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಹೋರಾಟನಿರತ ರೈತರು ನೀಡಿದ್ದ ಭಾರತ್ ಬಂದ್ ಯಶಸ್ವಿಯಾಗಿದೆ. ದೇಶದ ಉದ್ದಗಲಕ್ಕೂ ಎಲ್ಲಾ ವರ್ಗದ ಜನರು ಬಂದ್‌ಗೆ ಬೆಂಬಲ ನೀಡಿ ಅನ್ನದಾತರ ಹೋರಾಟಕ್ಕೆ ಕೈಜೋಡಿಸಿದ್ದಾರೆ.

ದೆಹಲಿ ಮತ್ತು ಉತ್ತರ ಪ್ರದೇಶದ ಮೀರತ್ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ -24 ನ್ನು ರೈತರು ಮುತ್ತಿಗೆ ಹಾಕಿದ್ದಾರೆ. ಗಾಜಿಯಾಬಾದ್-ಗಾಜಿಪುರ್ ಗಡಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ದೊಡ್ಡಮಟ್ಟದ ಪೊಲೀಸ್ ನಿಯೋಜನೆಯ ಹೊರತಾಗಿಯೂ ಪ್ರತಿಭಟನಾಕಾರರು ರಸ್ತೆಗಳನ್ನು ಆಕ್ರಮಿಸಿಕೊಂಡಿದ್ದಾರೆ.

ಕಳೆದ 12 ದಿನಗಳಿಂದ ಹೋರಾಟ ನಿರತ ರೈತರಿಂದಾಗಿ ದೇಶದ ಗಮನ ಸೆಳೆದಿದ್ದ ದೆಹಲಿಯ ಸಿಂಘು ಗಡಿಗೆ ಪಂಜಾಬ್‌ನ ರೋಪಾರ್ ಜಿಲ್ಲೆಯಿಂದ 200 ಟ್ರಕ್‌ಗಳಲ್ಲಿ ರೈತರು ಬಂದು ಸೇರಿದ್ದಾರೆ. ಎಷ್ಟೇ ಪೊಲೀಸ್ ಬಲ ಬಳಸಿದರೂ ರೈತರು ಶಾಂತಿಯುತವಾಗಿ ಹೆದ್ದಾರಿ ಬಂದ್‌ ಮಾಡುವುದನ್ನು ತಡೆಯಲಾಗಿಲ್ಲ. ರೈತರು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಲ್ಕು ಗಂಟೆಗಳ ಕಾಲ ಹೆದ್ದಾರಿ ತಡೆದಿದ್ದಾರೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಬ್ದಗೊಂಡಿದೆ.

 

ಕರ್ನಾಟಕದಲ್ಲಿ ಇಂದು ಬೆಳಿಗ್ಗೆ ನೂರಾರು ಸಂಘಟನೆಗಳ ಕಾರ್ಯಕರ್ತರು ಟೌನ್‌ಹಾಲ್ ಬಳಿ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎತ್ತಿನಗಾಡಿ, ಟ್ರಾಕ್ಟರ್‌ಗಳಲ್ಲಿ ಬಂದ ರೈತರು ತರಕಾರಿಗಳನ್ನು ತಂದು ಪ್ರದರ್ಶನ ಮಾಡಿ ಹೋರಾಟ ನಡೆಸಿದ್ದಾರೆ. ಹಲವು ಕನ್ನಡಪರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಹ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಮುಖ್ಯಮಂತ್ರಿ ಚಂದ್ರು, ಕೋಡಿಹಳ್ಳಿ ಚಂದ್ರಶೇಖರ್, ಡಿ.ಕೆ ಶಿವಕುಮಾರ್, ಮೀನಾಕ್ಷಿ ಸುಂದರಂ ಸೇರಿ ಇತರ ಮುಖಂಡರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಐಕ್ಯ ಹೋರಾಟ ಸಮಿತಿಯು ಬೆಳಿಗ್ಗೆಯಿಂದಲೇ ಧರಣಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದೆ. ಆನಂದ್ ರಾವ್ ವೃತ್ತದ ರಸ್ತೆಯಲ್ಲಿ ಒಂದೂ ವಾಹನಗಳು ಸಂಚರಿಸಿದೆ ಸಂಪೂರ್ಣ ಖಾಲಿಯಾಗಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿಯೂ ಸಹ ಮಳೆಯನ್ನು ಲೆಕ್ಕಿಸದೇ ಪ್ರತಿಭಟನೆ ನಡೆದಿದೆ. ಹಲವು ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಭಾರತ್ ಬಂದ್ ಆಚರಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಲಾಗಿದೆ.

ಮೈಸೂರಿನಲ್ಲಿ ಬಂದ್
ತುಮಕೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಣುಕು ಶವಯಾತ್ರೆ
ಹೊಸಪೇಟೆಯಲ್ಲಿ ಬಂದ್

ಇದನ್ನೂ ಓದಿ: ರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...