Homeಚಳವಳಿಭಾರತ್ ಬಂದ್: ಇಂದಿನ ರೈತ ಪ್ರತಿಭಟನೆಗೆ ಬೆಂಬಲ ನೀಡಿದ ರಾಜಕೀಯ ನಾಯಕರಿವರು

ಭಾರತ್ ಬಂದ್: ಇಂದಿನ ರೈತ ಪ್ರತಿಭಟನೆಗೆ ಬೆಂಬಲ ನೀಡಿದ ರಾಜಕೀಯ ನಾಯಕರಿವರು

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ಒಕ್ಕೂಟ ಸರ್ಕಾರ ಜಾರಿಗೊಳಿಸಿ ಒಂದು ವರ್ಷವಾದ ಹಿನ್ನೆಲೆ ಇಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ. ಇದಕ್ಕೆ ವಿಪಕ್ಷ ನಾಯಕರು ಸೇರಿದಂತೆ ಹಲವು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರುಗಳ ವಿವರ ಇಲ್ಲಿದೆ.

ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್‌ಗೆ ಬೆಂಬಲ ನೀಡಿದ್ದು, “ರೈತರ ಅಹಿಂಸಾತ್ಮಕ ಸತ್ಯಾಗ್ರಹ ಇಂದಿಗೂ ಹಾಗೆಯೇ ನಡೆಯುತ್ತಿದೆ. ಆದರೆ ಶೋಷಣೆ ಮಾಡುತ್ತಿರುವ ಸರ್ಕಾರವು ಇದನ್ನು ಇಷ್ಟಪಡುವುದಿಲ್ಲ. ಹೀಗಾಗಿ ಇಂದು ಭಾರತ್ ಬಂದ್ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ (ಕಾಂಗ್ರೆಸ್)

ಪಂಜಾಬ್ ನೂತನ ಮುಖ್ಯಮಂತ್ರಿ  ಚರಣ್‌ಜಿತ್ ಸಿಂಗ್ ಚನ್ನಿ ರೈತ ಹೋರಾಟಕ್ಕೆ ಬೆಂಬಲಿಸಿ ಕಪ್ಪು ಬಾವುಟ ಹಿಡಿದಿರುವ ಪೋಟೋ ಜೊತೆಗೆ ಟ್ವೀಟ್ ಮಾಡಿದ್ದಾರೆ.

“ನಾನು ರೈತರೊಂದಿಗೆ ನಿಲ್ಲುತ್ತೇನೆ ಮತ್ತು ಕೇಂದ್ರ ಸರ್ಕಾರಕ್ಕೆ ಮೂರು ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಲು ಮನವಿ ಮಾಡುತ್ತೇನೆ. ನಮ್ಮ ರೈತರು ಒಂದು ವರ್ಷದಿಂದಲೂ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಅವರ ಧ್ವನಿಯನ್ನು ಕೇಳುವ ಸಮಯ ಬಂದಿದೆ” ಎಂದಿದ್ದಾರೆ. ಜೊತೆಗೆ ರೈತರು ಶಾಂತಿಯುತವಾಗಿ ತಮ್ಮ ಹಕ್ಕನ್ನು ಕೇಳುವಂತೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.

ರಾಘವ್ ಚಡ್ಡಾ (ಆಪ್)

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಡ್ಡಾ ಕೃಷಿ ಕಾನೂನುಗಳನ್ನು ವಿರೋಧಿಸಿ, ಭಾರತ್ ಬಂದ್‌ಗೆ ಬೆ<ಬಲ ನೀಡಿದ್ದಾರೆ.

“ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಅವರು ಕೇಜ್ರಿವಾಲ್, ಕಪ್ಪು ಕಾನೂನುಗಳ ವಿರುದ್ಧ ರೈತರ ಪರವಾಗಿ ನಿಂತಿದ್ದಾರೆ. ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ ಭಾರತ್ ಬಂದ್ ಕರೆಗೆ ಎಎಪಿ ಸಂಪೂರ್ಣ ಬೆಂಬಲಿಸುತ್ತಣ” ಎಂದು ವಿಡಿಯೊ ಬಿಡುಗಡೆ ಮಾಡಿದ್ದಾರೆ.

ತೇಜಸ್ವಿ ಯಾದವ್ (ಆರ್‌ಜೆಡಿ)

ಆರ್‌ಜೆಡಿ ನಾಯಕ, ಬಿಹಾರದ ಪ್ರತಿಪಕ್ಷ ನಾಯಕ್ ತೇಜಸ್ವಿ ಯಾದವ್‌ ರೈತರಿಗೆ ಬೆಂಬಲ ವ್ಯಕ್ತಪಡಿಸಿ, ರೈತರ ವಬಿರುದ್ಧ ಮಾತನಾಡುವವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶದ ಬೆನ್ನೆಲುಬಾಗಿರುವ ರೈತರನ್ನು ಬಡವರನ್ನಾಗಿ ಮಾಡುವ ಮೂಲಕ, ದೇಶವು ಎಂದಾದರೂ ಸಮೃದ್ಧ, ಸಮರ್ಥ, ಬಲಿಷ್ಠವಾಗಲು ಸಾಧ್ಯವೇ..? ಈ ದಾನಿಗಳು ಬೆಳೆದ ಆಹಾರವನ್ನು ನಾವು ತಿನ್ನುತ್ತೇವೆ. ಅದೇ ಬಾಯಿಯಿಂದ ದೇಶದ ರೈತರ ವಿರುದ್ಧ ನಿಂದನಾತ್ಮಕ ಮಾತುಗಳನ್ನು ಮಾತನಾಡಲು ನಾಚಿಕೆಯಾಗುವುದಿಲ್ಲವೇ..?” ಎಂದು ಆಕ್ರೋಶ ಹೊರಹಾಕಿದ್ದಾರೆ.

ಲಾಲೂ ಪ್ರಸಾದ್ ಯಾದವ್ (ಬಿಹಾರದ ಮಾಜಿ ಮುಖ್ಯಮಂತ್ರಿ)

ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ಭಾರತವು ಕೃಷಿಕರ ದೇಶವಾಗಿದ್ದು, ರೈತರ ಶ್ರಮದಿಂದ ಬಲವನ್ನು ಪಡೆಯುವ ಮೂಲಕ ದೇಶ ಬೆಳೆಯುತ್ತಿದೆ. ಇದು ಬೆರಳೆಣಿಕೆಯಷ್ಟು ಬಂಡವಾಳಶಾಹಿಗಳ ಕ್ರೋನಿ ಕ್ಯಾಪಿಟಲಿಸಂ ಪ್ರಾಬಲ್ಯದ ದೇಶವಲ್ಲ. ಕ್ರೂರ ಬಂಡವಾಳಶಾಹಿ ಎಲ್ಲಾ ಸಂಪತ್ತನ್ನು ಬೆರಳೆಣಿಕೆಯ ಜನರ ಚೀಲದಲ್ಲಿ ಇರಿಸುತ್ತದೆ. ಆದರೆ ರೈತ ಎಲ್ಲರಿಗೂ ಆಹಾರವನ್ನು ಉತ್ಪಾದಿಸುತ್ತಾನೆ. ಅದಕ್ಕಾಗಿಯೇ ನಾವು ರೈತರೊಂದಿಗೆ ಇದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...