Homeಚಳವಳಿಭಾರತ್ ಬಂದ್: ಇಂದಿನ ರೈತ ಪ್ರತಿಭಟನೆಗೆ ಬೆಂಬಲ ನೀಡಿದ ರಾಜಕೀಯ ನಾಯಕರಿವರು

ಭಾರತ್ ಬಂದ್: ಇಂದಿನ ರೈತ ಪ್ರತಿಭಟನೆಗೆ ಬೆಂಬಲ ನೀಡಿದ ರಾಜಕೀಯ ನಾಯಕರಿವರು

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ಒಕ್ಕೂಟ ಸರ್ಕಾರ ಜಾರಿಗೊಳಿಸಿ ಒಂದು ವರ್ಷವಾದ ಹಿನ್ನೆಲೆ ಇಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ. ಇದಕ್ಕೆ ವಿಪಕ್ಷ ನಾಯಕರು ಸೇರಿದಂತೆ ಹಲವು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರುಗಳ ವಿವರ ಇಲ್ಲಿದೆ.

ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್‌ಗೆ ಬೆಂಬಲ ನೀಡಿದ್ದು, “ರೈತರ ಅಹಿಂಸಾತ್ಮಕ ಸತ್ಯಾಗ್ರಹ ಇಂದಿಗೂ ಹಾಗೆಯೇ ನಡೆಯುತ್ತಿದೆ. ಆದರೆ ಶೋಷಣೆ ಮಾಡುತ್ತಿರುವ ಸರ್ಕಾರವು ಇದನ್ನು ಇಷ್ಟಪಡುವುದಿಲ್ಲ. ಹೀಗಾಗಿ ಇಂದು ಭಾರತ್ ಬಂದ್ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ (ಕಾಂಗ್ರೆಸ್)

ಪಂಜಾಬ್ ನೂತನ ಮುಖ್ಯಮಂತ್ರಿ  ಚರಣ್‌ಜಿತ್ ಸಿಂಗ್ ಚನ್ನಿ ರೈತ ಹೋರಾಟಕ್ಕೆ ಬೆಂಬಲಿಸಿ ಕಪ್ಪು ಬಾವುಟ ಹಿಡಿದಿರುವ ಪೋಟೋ ಜೊತೆಗೆ ಟ್ವೀಟ್ ಮಾಡಿದ್ದಾರೆ.

“ನಾನು ರೈತರೊಂದಿಗೆ ನಿಲ್ಲುತ್ತೇನೆ ಮತ್ತು ಕೇಂದ್ರ ಸರ್ಕಾರಕ್ಕೆ ಮೂರು ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಲು ಮನವಿ ಮಾಡುತ್ತೇನೆ. ನಮ್ಮ ರೈತರು ಒಂದು ವರ್ಷದಿಂದಲೂ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಅವರ ಧ್ವನಿಯನ್ನು ಕೇಳುವ ಸಮಯ ಬಂದಿದೆ” ಎಂದಿದ್ದಾರೆ. ಜೊತೆಗೆ ರೈತರು ಶಾಂತಿಯುತವಾಗಿ ತಮ್ಮ ಹಕ್ಕನ್ನು ಕೇಳುವಂತೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.

ರಾಘವ್ ಚಡ್ಡಾ (ಆಪ್)

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಡ್ಡಾ ಕೃಷಿ ಕಾನೂನುಗಳನ್ನು ವಿರೋಧಿಸಿ, ಭಾರತ್ ಬಂದ್‌ಗೆ ಬೆ<ಬಲ ನೀಡಿದ್ದಾರೆ.

“ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಅವರು ಕೇಜ್ರಿವಾಲ್, ಕಪ್ಪು ಕಾನೂನುಗಳ ವಿರುದ್ಧ ರೈತರ ಪರವಾಗಿ ನಿಂತಿದ್ದಾರೆ. ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ ಭಾರತ್ ಬಂದ್ ಕರೆಗೆ ಎಎಪಿ ಸಂಪೂರ್ಣ ಬೆಂಬಲಿಸುತ್ತಣ” ಎಂದು ವಿಡಿಯೊ ಬಿಡುಗಡೆ ಮಾಡಿದ್ದಾರೆ.

ತೇಜಸ್ವಿ ಯಾದವ್ (ಆರ್‌ಜೆಡಿ)

ಆರ್‌ಜೆಡಿ ನಾಯಕ, ಬಿಹಾರದ ಪ್ರತಿಪಕ್ಷ ನಾಯಕ್ ತೇಜಸ್ವಿ ಯಾದವ್‌ ರೈತರಿಗೆ ಬೆಂಬಲ ವ್ಯಕ್ತಪಡಿಸಿ, ರೈತರ ವಬಿರುದ್ಧ ಮಾತನಾಡುವವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶದ ಬೆನ್ನೆಲುಬಾಗಿರುವ ರೈತರನ್ನು ಬಡವರನ್ನಾಗಿ ಮಾಡುವ ಮೂಲಕ, ದೇಶವು ಎಂದಾದರೂ ಸಮೃದ್ಧ, ಸಮರ್ಥ, ಬಲಿಷ್ಠವಾಗಲು ಸಾಧ್ಯವೇ..? ಈ ದಾನಿಗಳು ಬೆಳೆದ ಆಹಾರವನ್ನು ನಾವು ತಿನ್ನುತ್ತೇವೆ. ಅದೇ ಬಾಯಿಯಿಂದ ದೇಶದ ರೈತರ ವಿರುದ್ಧ ನಿಂದನಾತ್ಮಕ ಮಾತುಗಳನ್ನು ಮಾತನಾಡಲು ನಾಚಿಕೆಯಾಗುವುದಿಲ್ಲವೇ..?” ಎಂದು ಆಕ್ರೋಶ ಹೊರಹಾಕಿದ್ದಾರೆ.

ಲಾಲೂ ಪ್ರಸಾದ್ ಯಾದವ್ (ಬಿಹಾರದ ಮಾಜಿ ಮುಖ್ಯಮಂತ್ರಿ)

ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ಭಾರತವು ಕೃಷಿಕರ ದೇಶವಾಗಿದ್ದು, ರೈತರ ಶ್ರಮದಿಂದ ಬಲವನ್ನು ಪಡೆಯುವ ಮೂಲಕ ದೇಶ ಬೆಳೆಯುತ್ತಿದೆ. ಇದು ಬೆರಳೆಣಿಕೆಯಷ್ಟು ಬಂಡವಾಳಶಾಹಿಗಳ ಕ್ರೋನಿ ಕ್ಯಾಪಿಟಲಿಸಂ ಪ್ರಾಬಲ್ಯದ ದೇಶವಲ್ಲ. ಕ್ರೂರ ಬಂಡವಾಳಶಾಹಿ ಎಲ್ಲಾ ಸಂಪತ್ತನ್ನು ಬೆರಳೆಣಿಕೆಯ ಜನರ ಚೀಲದಲ್ಲಿ ಇರಿಸುತ್ತದೆ. ಆದರೆ ರೈತ ಎಲ್ಲರಿಗೂ ಆಹಾರವನ್ನು ಉತ್ಪಾದಿಸುತ್ತಾನೆ. ಅದಕ್ಕಾಗಿಯೇ ನಾವು ರೈತರೊಂದಿಗೆ ಇದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...