Homeಚಳವಳಿಭಾರತ್ ಬಂದ್: ಇಂದಿನ ರೈತ ಪ್ರತಿಭಟನೆಗೆ ಬೆಂಬಲ ನೀಡಿದ ರಾಜಕೀಯ ನಾಯಕರಿವರು

ಭಾರತ್ ಬಂದ್: ಇಂದಿನ ರೈತ ಪ್ರತಿಭಟನೆಗೆ ಬೆಂಬಲ ನೀಡಿದ ರಾಜಕೀಯ ನಾಯಕರಿವರು

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ಒಕ್ಕೂಟ ಸರ್ಕಾರ ಜಾರಿಗೊಳಿಸಿ ಒಂದು ವರ್ಷವಾದ ಹಿನ್ನೆಲೆ ಇಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‌ಗೆ ಕರೆ ನೀಡಿದೆ. ಇದಕ್ಕೆ ವಿಪಕ್ಷ ನಾಯಕರು ಸೇರಿದಂತೆ ಹಲವು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರುಗಳ ವಿವರ ಇಲ್ಲಿದೆ.

ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್‌ಗೆ ಬೆಂಬಲ ನೀಡಿದ್ದು, “ರೈತರ ಅಹಿಂಸಾತ್ಮಕ ಸತ್ಯಾಗ್ರಹ ಇಂದಿಗೂ ಹಾಗೆಯೇ ನಡೆಯುತ್ತಿದೆ. ಆದರೆ ಶೋಷಣೆ ಮಾಡುತ್ತಿರುವ ಸರ್ಕಾರವು ಇದನ್ನು ಇಷ್ಟಪಡುವುದಿಲ್ಲ. ಹೀಗಾಗಿ ಇಂದು ಭಾರತ್ ಬಂದ್ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಚರಣ್‌‌ಜಿತ್‌ ಸಿಂಗ್‌ ಚನ್ನಿ (ಕಾಂಗ್ರೆಸ್)

ಪಂಜಾಬ್ ನೂತನ ಮುಖ್ಯಮಂತ್ರಿ  ಚರಣ್‌ಜಿತ್ ಸಿಂಗ್ ಚನ್ನಿ ರೈತ ಹೋರಾಟಕ್ಕೆ ಬೆಂಬಲಿಸಿ ಕಪ್ಪು ಬಾವುಟ ಹಿಡಿದಿರುವ ಪೋಟೋ ಜೊತೆಗೆ ಟ್ವೀಟ್ ಮಾಡಿದ್ದಾರೆ.

“ನಾನು ರೈತರೊಂದಿಗೆ ನಿಲ್ಲುತ್ತೇನೆ ಮತ್ತು ಕೇಂದ್ರ ಸರ್ಕಾರಕ್ಕೆ ಮೂರು ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಲು ಮನವಿ ಮಾಡುತ್ತೇನೆ. ನಮ್ಮ ರೈತರು ಒಂದು ವರ್ಷದಿಂದಲೂ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಅವರ ಧ್ವನಿಯನ್ನು ಕೇಳುವ ಸಮಯ ಬಂದಿದೆ” ಎಂದಿದ್ದಾರೆ. ಜೊತೆಗೆ ರೈತರು ಶಾಂತಿಯುತವಾಗಿ ತಮ್ಮ ಹಕ್ಕನ್ನು ಕೇಳುವಂತೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.

ರಾಘವ್ ಚಡ್ಡಾ (ಆಪ್)

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಡ್ಡಾ ಕೃಷಿ ಕಾನೂನುಗಳನ್ನು ವಿರೋಧಿಸಿ, ಭಾರತ್ ಬಂದ್‌ಗೆ ಬೆ<ಬಲ ನೀಡಿದ್ದಾರೆ.

“ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಅವರು ಕೇಜ್ರಿವಾಲ್, ಕಪ್ಪು ಕಾನೂನುಗಳ ವಿರುದ್ಧ ರೈತರ ಪರವಾಗಿ ನಿಂತಿದ್ದಾರೆ. ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ ಭಾರತ್ ಬಂದ್ ಕರೆಗೆ ಎಎಪಿ ಸಂಪೂರ್ಣ ಬೆಂಬಲಿಸುತ್ತಣ” ಎಂದು ವಿಡಿಯೊ ಬಿಡುಗಡೆ ಮಾಡಿದ್ದಾರೆ.

ತೇಜಸ್ವಿ ಯಾದವ್ (ಆರ್‌ಜೆಡಿ)

ಆರ್‌ಜೆಡಿ ನಾಯಕ, ಬಿಹಾರದ ಪ್ರತಿಪಕ್ಷ ನಾಯಕ್ ತೇಜಸ್ವಿ ಯಾದವ್‌ ರೈತರಿಗೆ ಬೆಂಬಲ ವ್ಯಕ್ತಪಡಿಸಿ, ರೈತರ ವಬಿರುದ್ಧ ಮಾತನಾಡುವವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದೇಶದ ಬೆನ್ನೆಲುಬಾಗಿರುವ ರೈತರನ್ನು ಬಡವರನ್ನಾಗಿ ಮಾಡುವ ಮೂಲಕ, ದೇಶವು ಎಂದಾದರೂ ಸಮೃದ್ಧ, ಸಮರ್ಥ, ಬಲಿಷ್ಠವಾಗಲು ಸಾಧ್ಯವೇ..? ಈ ದಾನಿಗಳು ಬೆಳೆದ ಆಹಾರವನ್ನು ನಾವು ತಿನ್ನುತ್ತೇವೆ. ಅದೇ ಬಾಯಿಯಿಂದ ದೇಶದ ರೈತರ ವಿರುದ್ಧ ನಿಂದನಾತ್ಮಕ ಮಾತುಗಳನ್ನು ಮಾತನಾಡಲು ನಾಚಿಕೆಯಾಗುವುದಿಲ್ಲವೇ..?” ಎಂದು ಆಕ್ರೋಶ ಹೊರಹಾಕಿದ್ದಾರೆ.

ಲಾಲೂ ಪ್ರಸಾದ್ ಯಾದವ್ (ಬಿಹಾರದ ಮಾಜಿ ಮುಖ್ಯಮಂತ್ರಿ)

ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

“ಭಾರತವು ಕೃಷಿಕರ ದೇಶವಾಗಿದ್ದು, ರೈತರ ಶ್ರಮದಿಂದ ಬಲವನ್ನು ಪಡೆಯುವ ಮೂಲಕ ದೇಶ ಬೆಳೆಯುತ್ತಿದೆ. ಇದು ಬೆರಳೆಣಿಕೆಯಷ್ಟು ಬಂಡವಾಳಶಾಹಿಗಳ ಕ್ರೋನಿ ಕ್ಯಾಪಿಟಲಿಸಂ ಪ್ರಾಬಲ್ಯದ ದೇಶವಲ್ಲ. ಕ್ರೂರ ಬಂಡವಾಳಶಾಹಿ ಎಲ್ಲಾ ಸಂಪತ್ತನ್ನು ಬೆರಳೆಣಿಕೆಯ ಜನರ ಚೀಲದಲ್ಲಿ ಇರಿಸುತ್ತದೆ. ಆದರೆ ರೈತ ಎಲ್ಲರಿಗೂ ಆಹಾರವನ್ನು ಉತ್ಪಾದಿಸುತ್ತಾನೆ. ಅದಕ್ಕಾಗಿಯೇ ನಾವು ರೈತರೊಂದಿಗೆ ಇದ್ದೇವೆ” ಎಂದಿದ್ದಾರೆ.


ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...