Homeಮುಖಪುಟಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ - AIKSCC

ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

"ಸರ್ಕಾರವು ಜನರ ಧ್ವನಿಯನ್ನ ಆಲಿಸಲಿ. ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು. ಇದು ರೈತರು ಮತ್ತು ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ"

- Advertisement -
- Advertisement -

ದೇಶದಾದ್ಯಂತ ಹಲವಾರು ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದ್ದು, “ಇದು ರೈತರು ಮತ್ತು ಕಾರ್ಪೋರೇಟ್ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ” ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳು ಮತ್ತು ವಿದ್ಯುತ್ ಕಾಯ್ದೆಯ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ದೇಶವ್ಯಾಪಿ ಹಮ್ಮಿಕೊಂಡಿದ್ದ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಿದ್ದಕ್ಕೆ AIKSCC ದೇಶದ ಜನತೆ ಮತ್ತು ಹತ್ತಾರು ಸಂಘಟನೆಗಳಿಗೆ ಧನ್ಯವಾದಗಳನ್ನು ಹೇಳಿದೆ.

ಇದನ್ನೂ ಓದಿ: ಭಾರತ್‌‌ ಬಂದ್ | ಕರ್ನಾಟಕದಲ್ಲಿ ಯಶಸ್ವಿ; ಜಿಲ್ಲಾವಾರು ಹೋರಾಟದ ಚಿತ್ರಗಳು!

“ದೇಶದಾದ್ಯಂತ ಎಲ್ಲಾ ವರ್ಗಕ್ಕೆ ಸೇರಿದ ಲಕ್ಷಾಂತರ ಜನರು ಈ ಹೋರಾಟದಲ್ಲಿ ಭಾಗವಹಿಸಿ ರೈತರ ನ್ಯಾಯಯುತವಾದ ಬೇಡಿಕೆಯನ್ನು ಗೌರವಿಸಿದ್ದಾರೆ. ಲಕ್ಷಾಂತರ ಸಂಖ್ಯೆಯ ರೈತರು ದೆಹಲಿಗೆ ನಡೆಸಿದ ಮೆರವಣಿಗೆಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ. ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಆ ಕುತಂತ್ರಗಳೆಲ್ಲವೂ ಇಂದು ವಿಫಲವಾಗಿವೆ. ಸರ್ಕಾರವು ಜನರ ಧ್ವನಿಯನ್ನ ಆಲಿಸಲಿ. ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು. ಇದು ರೈತರು ಮತ್ತು ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ” ಎಂದು ಹೇಳಿದೆ.

AIKSCC ಸೇರಿದಂತೆ ಹತ್ತಾರು ರೈತ ಸಂಘಟನೆಗಳು ಸೇರಿದಂತೆ ದೇಶದ ಜನರು ಭಾರತ್ ಬಂದ್ ಕರೆಗೆ ಉತ್ಸಾಹದಿಂದ ಪ್ರತಿಕ್ರಿಯಿಸಿದ್ದು, ಈ ಸರ್ಕಾರ ನೀಡಿರುವ ‘ಆರ್ಥಿಕ ಉತ್ತೇಜಕ’ದ ಜವಾಬನ್ನು ದೇಶದ ಜನರು ತಿರಸ್ಕರಿಸಿದ್ದಾರೆ. ಹಲವು ದಿನಗಳಿಂದ ಸರ್ಕಾರದ ಮೊಂಡು ವಾದವನ್ನು ಕೇಳಿರುವ ರೈತರು ಸರ್ಕಾರದ ಧೋರಣೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದ್ದರೆ, ಕರ್ನಾಟಕ, ಮಹಾರಾಷ್ಟ್ರ, ಬಿಹಾರ, ತ್ರಿಪುರ, ಕೇರಳ ಸೇರಿದಂತೆ ಒಟ್ಟು 22 ರಾಜ್ಯಗಳಲ್ಲಿ ಭಾರತ್ ಬಂದ್ ಅನ್ನು ವ್ಯಾಪಕವಾಗಿ ಆಚರಿಸಲಾಯಿತು. ಹಲವು ರಾಜ್ಯಗಳಲ್ಲಿ ಬೆಳಿಗ್ಗೆಯಿಂದಲೇ ರ್ಯಾಲಿಗಳು, ಧರಣಿಗಳು ನಡೆದಿದ್ದು, ಭಾರಿ ಪ್ರಮಾಣದಲ್ಲಿ ಜನತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕಾರ್ಮಿಕರು, ವಿದ್ಯಾರ್ಥಿಗಳು, ಅನೇಕ ವಿದ್ವಾಂಸರೂ ಸೇರಿದಂತೆ 1000 ಕ್ಕೂ ಹೆಚ್ಚು ಜಿಲ್ಲಾ ಮತ್ತು ತಹಸಿಲ್ ಬಾರ್ ಅಸೋಸಿಯೇಷನ್‌ಗಳು ರೈತರಿಗೆ ಬೆಂಬಲವಾಗಿ ನಿಂತಿದ್ದವು.

ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ…

“ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಗುಜರಾತ್, ಉತ್ತರಪ್ರದೇಶ ಮತ್ತು ಹರಿಯಾಣ ಸರ್ಕಾರಗಳ ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು AIKSCC ತೀವ್ರವಾಗಿ ಖಂಡಿಸುತ್ತದೆ. ಮತ್ತು ಬಂಧನಕ್ಕೊಳಗಾದ ಎಲ್ಲಾ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಕಾರ್ಪೋರೇಟ್‌ ಪರ ಕಾನೂನುಗಳನ್ನು ಜಾರಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಖಂಡಿಸುತ್ತೇವೆ. ರೈತರನ್ನು ರಕ್ಷಿಸುವ ಕಾನೂನುಗಳು ಎಂದು ಹೇಳುವ ನರೇಂದ್ರ ಮೋದಿ ವಾಸ್ತವದಲ್ಲಿ ಕಾರ್ಪೋರೇಟ್‌ ಕುಳಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರವು ಈ ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ಎಲ್ಲ ಸಂಘಟನೆಗಳೂ ತಮ್ಮ ಹೋರಾಟವನ್ನು ಮುಂದುವರಿಸಲಿವೆ” ಎಂದು ತಿಳಿಸಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಾಲ್ನಡಿಗೆ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...