Homeಮುಖಪುಟಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ - AIKSCC

ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

"ಸರ್ಕಾರವು ಜನರ ಧ್ವನಿಯನ್ನ ಆಲಿಸಲಿ. ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು. ಇದು ರೈತರು ಮತ್ತು ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ"

- Advertisement -
- Advertisement -

ದೇಶದಾದ್ಯಂತ ಹಲವಾರು ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದ್ದು, “ಇದು ರೈತರು ಮತ್ತು ಕಾರ್ಪೋರೇಟ್ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ” ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳು ಮತ್ತು ವಿದ್ಯುತ್ ಕಾಯ್ದೆಯ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ದೇಶವ್ಯಾಪಿ ಹಮ್ಮಿಕೊಂಡಿದ್ದ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸಿದ್ದಕ್ಕೆ AIKSCC ದೇಶದ ಜನತೆ ಮತ್ತು ಹತ್ತಾರು ಸಂಘಟನೆಗಳಿಗೆ ಧನ್ಯವಾದಗಳನ್ನು ಹೇಳಿದೆ.

ಇದನ್ನೂ ಓದಿ: ಭಾರತ್‌‌ ಬಂದ್ | ಕರ್ನಾಟಕದಲ್ಲಿ ಯಶಸ್ವಿ; ಜಿಲ್ಲಾವಾರು ಹೋರಾಟದ ಚಿತ್ರಗಳು!

“ದೇಶದಾದ್ಯಂತ ಎಲ್ಲಾ ವರ್ಗಕ್ಕೆ ಸೇರಿದ ಲಕ್ಷಾಂತರ ಜನರು ಈ ಹೋರಾಟದಲ್ಲಿ ಭಾಗವಹಿಸಿ ರೈತರ ನ್ಯಾಯಯುತವಾದ ಬೇಡಿಕೆಯನ್ನು ಗೌರವಿಸಿದ್ದಾರೆ. ಲಕ್ಷಾಂತರ ಸಂಖ್ಯೆಯ ರೈತರು ದೆಹಲಿಗೆ ನಡೆಸಿದ ಮೆರವಣಿಗೆಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ. ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಆ ಕುತಂತ್ರಗಳೆಲ್ಲವೂ ಇಂದು ವಿಫಲವಾಗಿವೆ. ಸರ್ಕಾರವು ಜನರ ಧ್ವನಿಯನ್ನ ಆಲಿಸಲಿ. ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬಾರದು. ಇದು ರೈತರು ಮತ್ತು ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ” ಎಂದು ಹೇಳಿದೆ.

AIKSCC ಸೇರಿದಂತೆ ಹತ್ತಾರು ರೈತ ಸಂಘಟನೆಗಳು ಸೇರಿದಂತೆ ದೇಶದ ಜನರು ಭಾರತ್ ಬಂದ್ ಕರೆಗೆ ಉತ್ಸಾಹದಿಂದ ಪ್ರತಿಕ್ರಿಯಿಸಿದ್ದು, ಈ ಸರ್ಕಾರ ನೀಡಿರುವ ‘ಆರ್ಥಿಕ ಉತ್ತೇಜಕ’ದ ಜವಾಬನ್ನು ದೇಶದ ಜನರು ತಿರಸ್ಕರಿಸಿದ್ದಾರೆ. ಹಲವು ದಿನಗಳಿಂದ ಸರ್ಕಾರದ ಮೊಂಡು ವಾದವನ್ನು ಕೇಳಿರುವ ರೈತರು ಸರ್ಕಾರದ ಧೋರಣೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಒಡಿಶಾ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದ್ದರೆ, ಕರ್ನಾಟಕ, ಮಹಾರಾಷ್ಟ್ರ, ಬಿಹಾರ, ತ್ರಿಪುರ, ಕೇರಳ ಸೇರಿದಂತೆ ಒಟ್ಟು 22 ರಾಜ್ಯಗಳಲ್ಲಿ ಭಾರತ್ ಬಂದ್ ಅನ್ನು ವ್ಯಾಪಕವಾಗಿ ಆಚರಿಸಲಾಯಿತು. ಹಲವು ರಾಜ್ಯಗಳಲ್ಲಿ ಬೆಳಿಗ್ಗೆಯಿಂದಲೇ ರ್ಯಾಲಿಗಳು, ಧರಣಿಗಳು ನಡೆದಿದ್ದು, ಭಾರಿ ಪ್ರಮಾಣದಲ್ಲಿ ಜನತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕಾರ್ಮಿಕರು, ವಿದ್ಯಾರ್ಥಿಗಳು, ಅನೇಕ ವಿದ್ವಾಂಸರೂ ಸೇರಿದಂತೆ 1000 ಕ್ಕೂ ಹೆಚ್ಚು ಜಿಲ್ಲಾ ಮತ್ತು ತಹಸಿಲ್ ಬಾರ್ ಅಸೋಸಿಯೇಷನ್‌ಗಳು ರೈತರಿಗೆ ಬೆಂಬಲವಾಗಿ ನಿಂತಿದ್ದವು.

ಇದನ್ನೂ ಓದಿ: ಈ ಕೃಷಿ ಕಾನೂನುಗಳನ್ನು ಕಾಂಗ್ರೆಸ್ ಕೂಡಾ ತರಲು ಬಯಸಿತ್ತು ಎಂದ ಬಿಜೆಪಿ; ತಿರುಗೇಟು ನೀಡಿದ…

“ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಗುಜರಾತ್, ಉತ್ತರಪ್ರದೇಶ ಮತ್ತು ಹರಿಯಾಣ ಸರ್ಕಾರಗಳ ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು AIKSCC ತೀವ್ರವಾಗಿ ಖಂಡಿಸುತ್ತದೆ. ಮತ್ತು ಬಂಧನಕ್ಕೊಳಗಾದ ಎಲ್ಲಾ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಕಾರ್ಪೋರೇಟ್‌ ಪರ ಕಾನೂನುಗಳನ್ನು ಜಾರಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಖಂಡಿಸುತ್ತೇವೆ. ರೈತರನ್ನು ರಕ್ಷಿಸುವ ಕಾನೂನುಗಳು ಎಂದು ಹೇಳುವ ನರೇಂದ್ರ ಮೋದಿ ವಾಸ್ತವದಲ್ಲಿ ಕಾರ್ಪೋರೇಟ್‌ ಕುಳಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರವು ಈ ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ಎಲ್ಲ ಸಂಘಟನೆಗಳೂ ತಮ್ಮ ಹೋರಾಟವನ್ನು ಮುಂದುವರಿಸಲಿವೆ” ಎಂದು ತಿಳಿಸಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಾಲ್ನಡಿಗೆ ಜಾಥಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...