ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ 12 ಗಂಟೆಗಳ ಭಾರತ್ ಬಂದ್ಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ದೇಶದ ಹಲವು ಭಾಗಗಳಲ್ಲಿ ರೈತರ ಪ್ರತಿಭಟನೆಗೆ ಅನೇಕ ಸಂಘಟನೆಗಳು, ವಿದ್ಯಾರ್ಥಿಗಳು, ಬೀದಿ ಬದಿ ವ್ಯಾಪಾರಿಗಳು, ರಾಜಕೀಯ ಪಕ್ಷಗಳು ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ನಡೆಸಿದವು.
ದೆಹಲಿಯ ಗಡಿಗಳು ಸಂಪೂರ್ಣ ಸ್ತಬ್ದವಾಗಿದ್ದವು. ಪಂಜಾಬ್ ಮತ್ತು ಹರಿಯಾಣದ 32 ಸ್ಥಳಗಳಲ್ಲಿ ರಸ್ತೆಗಳು, ರೈಲು ಮಾರ್ಗಗಳು ಮತ್ತು ಹೆದ್ದಾರಿಗಳನ್ನು ನಿರ್ಬಂಧಿಸಲಾಗಿತ್ತು. ಪ್ರತಿಭಟನೆಯಿಂದಾಗಿ ರೈಲು ಸಂಚಾರದ ಮೇಲೆ ಪರಿಣಾಮ ಬೀರಿ, ನಾಲ್ಕು ಶತಾಬ್ದಿ ರೈಲುಗಳನ್ನು ರದ್ದುಪಡಿಸಲಾಗಿತ್ತು.
ಕರ್ನಾಟಕ, ಆಂಧ್ರ ಪ್ರದೇಶ, ಪಂಜಾಬ್, ಹರಿಯಾಣ ಸೇರಿದಂತೆ ಹಲವೆಡೆ ಪ್ರತಿಭಟನಾಕಾರರನ್ನು ಬಂಧಿಸಲಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಂಯುಕ್ತ ಕಿಸಾನ್ ಮೋರ್ಚಾ ಎಚ್ಚರಿಕೆ ವಹಿಸಿತ್ತು.
ಇದನ್ನೂ ಓದಿ: ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ
ಇಂದಿನ ಭಾರತ್ ಬಂದ್ ಪ್ರತಿಭಟನೆಯ ಕೆಲವು ಚಿತ್ರಗಳು ಇಲ್ಲಿವೆ.
ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಇಡೀ ನಮ್ಮ ಹೋರಾಟ ನಿರಂತರ ಪ್ರಯತ್ನ ನಡೆಯುತ್ತಿದೆ ಅಗತ್ಯ ಮುನ್ನೆಚ್ಚರಿಕೆ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಜೋತೆ ಗೆ ಅವರು ಬೇಡಿ ಕೆ ಸಂದಿಸಲೇಬೇಕು.
Export