Homeಚಳವಳಿಇಂದು 'ಸಾರ್ವತ್ರಿಕ ಮುಷ್ಕರ': 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

ಇಂದು ‘ಸಾರ್ವತ್ರಿಕ ಮುಷ್ಕರ’: 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

- Advertisement -
- Advertisement -

ಕೇಂದ್ರದ ‘ಕಾರ್ಮಿಕ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ’ ನೀತಿಗಳ ವಿರುದ್ಧ ಇಂದು (ಜು.9) ದೇಶದಾದ್ಯಂತ ಬೃಹತ್ ಮುಷ್ಕರಕ್ಕೆ ಕರೆ ಕೊಡಲಾಗಿದೆ. ವಿವಿಧ ಕ್ಷೇತ್ರಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ.

ರೈತ ಸಂಘಟನೆಗಳು ಮತ್ತು ಕಾರ್ಮಿಕ ಗುಂಪುಗಳ ಬೆಂಬಲದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರ ಅಥವಾ ‘ಭಾರತ್ ಬಂದ್’ಗೆ ಕರೆ ಕೊಟ್ಟಿದೆ. ಬ್ಯಾಂಕಿಂಗ್, ಅಂಚೆ ಕಾರ್ಯಾಚರಣೆಗಳು, ಸಾರಿಗೆ ಮತ್ತು ವಿದ್ಯುತ್ ಸರಬರಾಜು ಸೇರಿದಂತೆ ಅಗತ್ಯ ಸಾರ್ವಜನಿಕ ಸೇವೆಗಳಲ್ಲಿ ಅಡಚಣೆ ಉಂಟಾಗುವ ನಿರೀಕ್ಷೆಯಿದೆ.

ಏನಿರುತ್ತೆ.. ಏನಿರಲ್ಲ?

ಬ್ಯಾಂಕಿಂಗ್ ಮತ್ತು ವಿಮಾ ಸೇವೆಗಳು, ಅಂಚೆ ಕಾರ್ಯಾಚರಣೆಗಳು, ಕಲ್ಲಿದ್ದಲು ಗಣಿಗಾರಿಕೆ ಮತ್ತು ಕೈಗಾರಿಕಾ ಉತ್ಪಾದನೆ, ಸರ್ಕಾರಿ ಸಾರ್ವಜನಿಕ ಸಾರಿಗೆ, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಘಟಕಗಳು, ಗ್ರಾಮೀಣ ಪ್ರದೇಶಗಳಲ್ಲಿ ರೈತರ ನೇತೃತ್ವದ ಕಾರ್ಯಚರಣೆಗಳು ಇಂದು ಬಂದ್ ಆಗುವ ಸಾಧ್ಯತೆ ಇದೆ.

ಶಾಲಾ, ಕಾಲೇಜುಗಳು, ಖಾಸಗಿ ಕಚೇರಿಗಳು ಕಾರ್ಯಾಚರಿಸಲಿವೆ. ರೈಲು ಸೇವೆಗಳು ಇದ್ದರೂ, ವಿಳಂಬ ಆಗುವ ಸಾಧ್ಯತೆಗಳು ಹೆಚ್ಚಿದೆ.

“ದೇಶದಾದ್ಯಂತ ರೈತರು ಮತ್ತು ಗ್ರಾಮೀಣ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ಎಐಟಿಯುಸಿಯ ಅಮರ್‌ಜೀತ್ ಕೌರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. “ಸರ್ಕಾರ ನಮ್ಮ 17 ಅಂಶಗಳ ಬೇಡಿಕೆ ಪಟ್ಟಿಯನ್ನು ನಿರ್ಲಕ್ಷಿಸಿದೆ ಮತ್ತು ಕಳೆದ 10 ವರ್ಷಗಳಲ್ಲಿ ವಾರ್ಷಿಕ ಕಾರ್ಮಿಕ ಸಮ್ಮೇಳನವನ್ನು ಸಹ ಕರೆದಿಲ್ಲ” ಎಂದು ಅವರು ಹೇಳಿದ್ದಾರೆ.

“ಸಾರ್ವತ್ರಿಕ ಮುಷ್ಕರದಿಂದ ದೇಶದಾದ್ಯಂತ ಸಾರ್ವಜನಿಕ ಸೇವೆಗಳು ಅಸ್ತವ್ಯಸ್ತಗೊಳ್ಳಲಿವೆ. ಬ್ಯಾಂಕಿಂಗ್, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಕಾರ್ಖಾನೆಗಳು, ರಾಜ್ಯ ಸಾರಿಗೆ ಸೇವೆಗಳ ಮೇಲೆ ಮುಷ್ಕರದ ಪರಿಣಾಮ ಬೀರಲಿದೆ” ಎಂದು ಹಿಂದ್ ಮಜ್ದೂರ್ ಸಭಾದ ಹರ್ಭಜನ್ ಸಿಂಗ್ ಸಿಧು ಪಿಟಿಐಗೆ ತಿಳಿಸಿದ್ದಾರೆ.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (AIBEA)ನೊಂದಿಗೆ ಸಂಯೋಜಿತವಾಗಿರುವ ಬಂಗಾಳ ಪ್ರಾಂತೀಯ ಬ್ಯಾಂಕ್ ನೌಕರರ ಸಂಘವು ಬ್ಯಾಂಕಿಂಗ್ ಮತ್ತು ವಿಮಾ ವಲಯಗಳೆರಡೂ ಮುಷ್ಕರದಲ್ಲಿ ಭಾಗವಹಿಸಲಿವೆ ಎಂದು ದೃಢಪಡಿಸಿದೆ. ಇಂದು ಔಪಚಾರಿಕ ಬ್ಯಾಂಕಿಂಗ್ ರಜೆ ಇಲ್ಲದಿದ್ದರೂ, ಶಾಖೆಗಳು ಮತ್ತು ಎಟಿಎಂಗಳಲ್ಲಿನ ಸೇವೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ.

ವಿದ್ಯುತ್ ಸರಬರಾಜಿನ ಮೇಲೂ ಪರಿಣಾಮ ಬೀರಬಹುದು. ಪಿಟಿಐ ವರದಿಯ ಪ್ರಕಾರ, 27 ಲಕ್ಷಕ್ಕೂ ಹೆಚ್ಚು ವಿದ್ಯುತ್ ಕ್ಷೇತ್ರದ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ರೈಲ್ವೆ ಇಲಾಖೆ ಯಾವುದೇ ಅಧಿಕೃತ ಮುಷ್ಕರ ಸೂಚನೆಯನ್ನು ನೀಡಿಲ್ಲ. ಆದಾಗ್ಯೂ, ಪ್ರತಿಭಟನೆಗಳು ಅಥವಾ ಸಾಗಣೆ ಪರಿಣಾಮಗಳಿಂದಾಗಿ ರೈಲು ಸೇವೆಗಳಲ್ಲಿ ಸಂಭವನೀಯ ಅಡಚಣೆಗಳು ಅಥವಾ ವಿಳಂಬಗಳು ಸಂಭವಿಸಬಹುದು.

ಈ ಮುಷ್ಕರ ಕೇವಲ ಔಪಚಾರಿಕ ವಲಯದ ಉದ್ಯೋಗಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಅನೌಪಚಾರಿಕ ವಲಯದ ಕಾರ್ಮಿಕರು, ಸ್ವಯಂ ಉದ್ಯೋಗಿ ಮಹಿಳಾ ಸಂಘ (SEWA) ನಂತಹ ಸ್ವಯಂ ಉದ್ಯೋಗಿ ಗುಂಪುಗಳು ಮತ್ತು ಗ್ರಾಮೀಣ ಸಮುದಾಯಗಳು ಸಹ ಭಾಗವಹಿಸಲಿವೆ.

ಮುಷ್ಕರಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದಂತಹ ರೈತ ಒಕ್ಕೂಟಗಳ ಬೆಂಬಲ ದೊರೆತಿದೆ. ಸಂಯುಕ್ತ ಕಿಸಾನ್ ಮೋರ್ಚಾ ಈಗ ರದ್ದುಗೊಂಡಿರುವ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧದ ಐತಿಹಾಸಿಕ ರೈತರ ಆಂದೋಲನದ ನೇತೃತ್ವ ವಹಿಸಿತ್ತು.

ಎನ್‌ಎಂಡಿಸಿ ಲಿಮಿಟೆಡ್, ಉಕ್ಕು ಸ್ಥಾವರಗಳು ಮತ್ತು ರೈಲ್ವೆ ಕಾರ್ಯಾಚರಣೆಗಳು ಸೇರಿದಂತೆ ಪ್ರಮುಖ ಕೈಗಾರಿಕೆಗಳ ಸಾರ್ವಜನಿಕ ವಲಯದ ಉದ್ಯೋಗಿಗಳು ಸಹ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು), ಹಿಂದ್ ಮಜ್ದೂರ್ ಸಭಾ (ಹೆಚ್‌ಎಂಎಸ್‌), ಸೆಲ್ಫ್ ಎಂಪ್ಲಾಯಿಡ್ ವುಮೆನ್ಸ್ ಅಸೋಸಿಯೇಷನ್ (ಎಸ್‌ಇಡಬ್ಲ್ಯುಎ), ಲೇಬರ್ ಪ್ರೊಗ್ರೆಸಿವ್ ಫೆಡರೇಶನ್ (ಎಲ್‌ಪಿಎಫ್‌), ಯುನೈಟೆಡ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಯುಟಿಯುಸಿ), ಸಂಯುಕ್ತ ಕಿಸಾನ್ ಮೊರ್ಚಾ, ರೂರಲ್ ವರ್ಕರ್ಸ್ ಯೂನಿಯನ್ ಹಾಗೂ ರೈಲ್ವೆ, ಎನ್‌ಎಂಡಿಸಿ ಲಿಮಿಟೆಡ್ ಮತ್ತು ಉಕ್ಕಿನ ಕೈಗಾರಿಕೆಗಳ ಸಾರ್ವಜನಿಕ ವಲಯದ ಸಿಬ್ಬಂದಿ ಮಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಸತ್ತು ಅಂಗೀಕರಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಎಂಬುವುದೇ ಮುಷ್ಕರದ ಪ್ರಮುಖ ಬೇಡಿಕೆಯಾಗಿದೆ.

ಈ ಕಾರ್ಮಿಕ ಸಂಹಿತೆಗಳು ಮುಷ್ಕರ ನಡೆಸುವುದನ್ನು ಹೆಚ್ಚು ಕಷ್ಟಕರವಾಗಿಸುವ ಮೂಲಕ, ಕೆಲಸದ ಸಮಯವನ್ನು ಹೆಚ್ಚಿಸುವ ಮೂಲಕ ಮತ್ತು ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದಾಗ ಉದ್ಯೋಗದಾತರನ್ನು ದಂಡದಿಂದ ರಕ್ಷಿಸುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಕಾರ್ಮಿಕ ಸಂಘಗಳು ವಾದಿಸಿವೆ.

ಅಲ್ಲದೆ, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣಕ್ಕೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ಹೆಚ್ಚು ಕೆಲಸಗಾರರನ್ನು ನೇಮಿಸಲು ಅವಕಾಶ ನೀಡುತ್ತದೆ. ಹೊರ ಗುತ್ತಿಗೆ ಉದ್ಯೋಗ ಭದ್ರತೆ ಮತ್ತು ನ್ಯಾಯಯುತ ವೇತನಕ್ಕೆ ಧಕ್ಕೆ ತರುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ಇಷ್ಟೊಂದು ದೊಡ್ಡ ಪ್ರಮಾಣದ ಮುಷ್ಕರ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2020, 2022 ಮತ್ತು 2024ರಲ್ಲಿ ನಡೆದ ಇದೇ ರೀತಿಯ ರಾಷ್ಟ್ರವ್ಯಾಪಿ ಮುಷ್ಕರಗಳಲ್ಲಿ ಲಕ್ಷಾಂತರ ಕಾರ್ಮಿಕರು ಬೀದಿಗಿಳಿದು ಕಾರ್ಮಿಕ ವಿರೋಧಿ ನೀತಿಗಳು ಮತ್ತು ವಿವಾದಾತ್ಮಕ ಆರ್ಥಿಕ ಸುಧಾರಣೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು.

ಜುಲೈ 9ಕ್ಕೆ ಭಾರತ್ ಬಂದ್: 25 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗಿ, ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ – ದೇಶದಾದ್ಯಂತ ಸೇವೆಗಳ ವ್ಯಾಪಕ ವ್ಯತ್ಯಯ ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...