Homeಚಳವಳಿಇಂದು 'ಸಾರ್ವತ್ರಿಕ ಮುಷ್ಕರ': 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

ಇಂದು ‘ಸಾರ್ವತ್ರಿಕ ಮುಷ್ಕರ’: 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

- Advertisement -
- Advertisement -

ಕೇಂದ್ರದ ‘ಕಾರ್ಮಿಕ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ’ ನೀತಿಗಳ ವಿರುದ್ಧ ಇಂದು (ಜು.9) ದೇಶದಾದ್ಯಂತ ಬೃಹತ್ ಮುಷ್ಕರಕ್ಕೆ ಕರೆ ಕೊಡಲಾಗಿದೆ. ವಿವಿಧ ಕ್ಷೇತ್ರಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ.

ರೈತ ಸಂಘಟನೆಗಳು ಮತ್ತು ಕಾರ್ಮಿಕ ಗುಂಪುಗಳ ಬೆಂಬಲದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರ ಅಥವಾ ‘ಭಾರತ್ ಬಂದ್’ಗೆ ಕರೆ ಕೊಟ್ಟಿದೆ. ಬ್ಯಾಂಕಿಂಗ್, ಅಂಚೆ ಕಾರ್ಯಾಚರಣೆಗಳು, ಸಾರಿಗೆ ಮತ್ತು ವಿದ್ಯುತ್ ಸರಬರಾಜು ಸೇರಿದಂತೆ ಅಗತ್ಯ ಸಾರ್ವಜನಿಕ ಸೇವೆಗಳಲ್ಲಿ ಅಡಚಣೆ ಉಂಟಾಗುವ ನಿರೀಕ್ಷೆಯಿದೆ.

ಏನಿರುತ್ತೆ.. ಏನಿರಲ್ಲ?

ಬ್ಯಾಂಕಿಂಗ್ ಮತ್ತು ವಿಮಾ ಸೇವೆಗಳು, ಅಂಚೆ ಕಾರ್ಯಾಚರಣೆಗಳು, ಕಲ್ಲಿದ್ದಲು ಗಣಿಗಾರಿಕೆ ಮತ್ತು ಕೈಗಾರಿಕಾ ಉತ್ಪಾದನೆ, ಸರ್ಕಾರಿ ಸಾರ್ವಜನಿಕ ಸಾರಿಗೆ, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಘಟಕಗಳು, ಗ್ರಾಮೀಣ ಪ್ರದೇಶಗಳಲ್ಲಿ ರೈತರ ನೇತೃತ್ವದ ಕಾರ್ಯಚರಣೆಗಳು ಇಂದು ಬಂದ್ ಆಗುವ ಸಾಧ್ಯತೆ ಇದೆ.

ಶಾಲಾ, ಕಾಲೇಜುಗಳು, ಖಾಸಗಿ ಕಚೇರಿಗಳು ಕಾರ್ಯಾಚರಿಸಲಿವೆ. ರೈಲು ಸೇವೆಗಳು ಇದ್ದರೂ, ವಿಳಂಬ ಆಗುವ ಸಾಧ್ಯತೆಗಳು ಹೆಚ್ಚಿದೆ.

“ದೇಶದಾದ್ಯಂತ ರೈತರು ಮತ್ತು ಗ್ರಾಮೀಣ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ಎಐಟಿಯುಸಿಯ ಅಮರ್‌ಜೀತ್ ಕೌರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. “ಸರ್ಕಾರ ನಮ್ಮ 17 ಅಂಶಗಳ ಬೇಡಿಕೆ ಪಟ್ಟಿಯನ್ನು ನಿರ್ಲಕ್ಷಿಸಿದೆ ಮತ್ತು ಕಳೆದ 10 ವರ್ಷಗಳಲ್ಲಿ ವಾರ್ಷಿಕ ಕಾರ್ಮಿಕ ಸಮ್ಮೇಳನವನ್ನು ಸಹ ಕರೆದಿಲ್ಲ” ಎಂದು ಅವರು ಹೇಳಿದ್ದಾರೆ.

“ಸಾರ್ವತ್ರಿಕ ಮುಷ್ಕರದಿಂದ ದೇಶದಾದ್ಯಂತ ಸಾರ್ವಜನಿಕ ಸೇವೆಗಳು ಅಸ್ತವ್ಯಸ್ತಗೊಳ್ಳಲಿವೆ. ಬ್ಯಾಂಕಿಂಗ್, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಕಾರ್ಖಾನೆಗಳು, ರಾಜ್ಯ ಸಾರಿಗೆ ಸೇವೆಗಳ ಮೇಲೆ ಮುಷ್ಕರದ ಪರಿಣಾಮ ಬೀರಲಿದೆ” ಎಂದು ಹಿಂದ್ ಮಜ್ದೂರ್ ಸಭಾದ ಹರ್ಭಜನ್ ಸಿಂಗ್ ಸಿಧು ಪಿಟಿಐಗೆ ತಿಳಿಸಿದ್ದಾರೆ.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (AIBEA)ನೊಂದಿಗೆ ಸಂಯೋಜಿತವಾಗಿರುವ ಬಂಗಾಳ ಪ್ರಾಂತೀಯ ಬ್ಯಾಂಕ್ ನೌಕರರ ಸಂಘವು ಬ್ಯಾಂಕಿಂಗ್ ಮತ್ತು ವಿಮಾ ವಲಯಗಳೆರಡೂ ಮುಷ್ಕರದಲ್ಲಿ ಭಾಗವಹಿಸಲಿವೆ ಎಂದು ದೃಢಪಡಿಸಿದೆ. ಇಂದು ಔಪಚಾರಿಕ ಬ್ಯಾಂಕಿಂಗ್ ರಜೆ ಇಲ್ಲದಿದ್ದರೂ, ಶಾಖೆಗಳು ಮತ್ತು ಎಟಿಎಂಗಳಲ್ಲಿನ ಸೇವೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ.

ವಿದ್ಯುತ್ ಸರಬರಾಜಿನ ಮೇಲೂ ಪರಿಣಾಮ ಬೀರಬಹುದು. ಪಿಟಿಐ ವರದಿಯ ಪ್ರಕಾರ, 27 ಲಕ್ಷಕ್ಕೂ ಹೆಚ್ಚು ವಿದ್ಯುತ್ ಕ್ಷೇತ್ರದ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ರೈಲ್ವೆ ಇಲಾಖೆ ಯಾವುದೇ ಅಧಿಕೃತ ಮುಷ್ಕರ ಸೂಚನೆಯನ್ನು ನೀಡಿಲ್ಲ. ಆದಾಗ್ಯೂ, ಪ್ರತಿಭಟನೆಗಳು ಅಥವಾ ಸಾಗಣೆ ಪರಿಣಾಮಗಳಿಂದಾಗಿ ರೈಲು ಸೇವೆಗಳಲ್ಲಿ ಸಂಭವನೀಯ ಅಡಚಣೆಗಳು ಅಥವಾ ವಿಳಂಬಗಳು ಸಂಭವಿಸಬಹುದು.

ಈ ಮುಷ್ಕರ ಕೇವಲ ಔಪಚಾರಿಕ ವಲಯದ ಉದ್ಯೋಗಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಅನೌಪಚಾರಿಕ ವಲಯದ ಕಾರ್ಮಿಕರು, ಸ್ವಯಂ ಉದ್ಯೋಗಿ ಮಹಿಳಾ ಸಂಘ (SEWA) ನಂತಹ ಸ್ವಯಂ ಉದ್ಯೋಗಿ ಗುಂಪುಗಳು ಮತ್ತು ಗ್ರಾಮೀಣ ಸಮುದಾಯಗಳು ಸಹ ಭಾಗವಹಿಸಲಿವೆ.

ಮುಷ್ಕರಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದಂತಹ ರೈತ ಒಕ್ಕೂಟಗಳ ಬೆಂಬಲ ದೊರೆತಿದೆ. ಸಂಯುಕ್ತ ಕಿಸಾನ್ ಮೋರ್ಚಾ ಈಗ ರದ್ದುಗೊಂಡಿರುವ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧದ ಐತಿಹಾಸಿಕ ರೈತರ ಆಂದೋಲನದ ನೇತೃತ್ವ ವಹಿಸಿತ್ತು.

ಎನ್‌ಎಂಡಿಸಿ ಲಿಮಿಟೆಡ್, ಉಕ್ಕು ಸ್ಥಾವರಗಳು ಮತ್ತು ರೈಲ್ವೆ ಕಾರ್ಯಾಚರಣೆಗಳು ಸೇರಿದಂತೆ ಪ್ರಮುಖ ಕೈಗಾರಿಕೆಗಳ ಸಾರ್ವಜನಿಕ ವಲಯದ ಉದ್ಯೋಗಿಗಳು ಸಹ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು), ಹಿಂದ್ ಮಜ್ದೂರ್ ಸಭಾ (ಹೆಚ್‌ಎಂಎಸ್‌), ಸೆಲ್ಫ್ ಎಂಪ್ಲಾಯಿಡ್ ವುಮೆನ್ಸ್ ಅಸೋಸಿಯೇಷನ್ (ಎಸ್‌ಇಡಬ್ಲ್ಯುಎ), ಲೇಬರ್ ಪ್ರೊಗ್ರೆಸಿವ್ ಫೆಡರೇಶನ್ (ಎಲ್‌ಪಿಎಫ್‌), ಯುನೈಟೆಡ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಯುಟಿಯುಸಿ), ಸಂಯುಕ್ತ ಕಿಸಾನ್ ಮೊರ್ಚಾ, ರೂರಲ್ ವರ್ಕರ್ಸ್ ಯೂನಿಯನ್ ಹಾಗೂ ರೈಲ್ವೆ, ಎನ್‌ಎಂಡಿಸಿ ಲಿಮಿಟೆಡ್ ಮತ್ತು ಉಕ್ಕಿನ ಕೈಗಾರಿಕೆಗಳ ಸಾರ್ವಜನಿಕ ವಲಯದ ಸಿಬ್ಬಂದಿ ಮಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಸತ್ತು ಅಂಗೀಕರಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಎಂಬುವುದೇ ಮುಷ್ಕರದ ಪ್ರಮುಖ ಬೇಡಿಕೆಯಾಗಿದೆ.

ಈ ಕಾರ್ಮಿಕ ಸಂಹಿತೆಗಳು ಮುಷ್ಕರ ನಡೆಸುವುದನ್ನು ಹೆಚ್ಚು ಕಷ್ಟಕರವಾಗಿಸುವ ಮೂಲಕ, ಕೆಲಸದ ಸಮಯವನ್ನು ಹೆಚ್ಚಿಸುವ ಮೂಲಕ ಮತ್ತು ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದಾಗ ಉದ್ಯೋಗದಾತರನ್ನು ದಂಡದಿಂದ ರಕ್ಷಿಸುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಕಾರ್ಮಿಕ ಸಂಘಗಳು ವಾದಿಸಿವೆ.

ಅಲ್ಲದೆ, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣಕ್ಕೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ಹೆಚ್ಚು ಕೆಲಸಗಾರರನ್ನು ನೇಮಿಸಲು ಅವಕಾಶ ನೀಡುತ್ತದೆ. ಹೊರ ಗುತ್ತಿಗೆ ಉದ್ಯೋಗ ಭದ್ರತೆ ಮತ್ತು ನ್ಯಾಯಯುತ ವೇತನಕ್ಕೆ ಧಕ್ಕೆ ತರುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ಇಷ್ಟೊಂದು ದೊಡ್ಡ ಪ್ರಮಾಣದ ಮುಷ್ಕರ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2020, 2022 ಮತ್ತು 2024ರಲ್ಲಿ ನಡೆದ ಇದೇ ರೀತಿಯ ರಾಷ್ಟ್ರವ್ಯಾಪಿ ಮುಷ್ಕರಗಳಲ್ಲಿ ಲಕ್ಷಾಂತರ ಕಾರ್ಮಿಕರು ಬೀದಿಗಿಳಿದು ಕಾರ್ಮಿಕ ವಿರೋಧಿ ನೀತಿಗಳು ಮತ್ತು ವಿವಾದಾತ್ಮಕ ಆರ್ಥಿಕ ಸುಧಾರಣೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು.

ಜುಲೈ 9ಕ್ಕೆ ಭಾರತ್ ಬಂದ್: 25 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗಿ, ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ – ದೇಶದಾದ್ಯಂತ ಸೇವೆಗಳ ವ್ಯಾಪಕ ವ್ಯತ್ಯಯ ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...