Homeಚಳವಳಿಇಂದು 'ಸಾರ್ವತ್ರಿಕ ಮುಷ್ಕರ': 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

ಇಂದು ‘ಸಾರ್ವತ್ರಿಕ ಮುಷ್ಕರ’: 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

- Advertisement -
- Advertisement -

ಕೇಂದ್ರದ ‘ಕಾರ್ಮಿಕ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ’ ನೀತಿಗಳ ವಿರುದ್ಧ ಇಂದು (ಜು.9) ದೇಶದಾದ್ಯಂತ ಬೃಹತ್ ಮುಷ್ಕರಕ್ಕೆ ಕರೆ ಕೊಡಲಾಗಿದೆ. ವಿವಿಧ ಕ್ಷೇತ್ರಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ.

ರೈತ ಸಂಘಟನೆಗಳು ಮತ್ತು ಕಾರ್ಮಿಕ ಗುಂಪುಗಳ ಬೆಂಬಲದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರ ಅಥವಾ ‘ಭಾರತ್ ಬಂದ್’ಗೆ ಕರೆ ಕೊಟ್ಟಿದೆ. ಬ್ಯಾಂಕಿಂಗ್, ಅಂಚೆ ಕಾರ್ಯಾಚರಣೆಗಳು, ಸಾರಿಗೆ ಮತ್ತು ವಿದ್ಯುತ್ ಸರಬರಾಜು ಸೇರಿದಂತೆ ಅಗತ್ಯ ಸಾರ್ವಜನಿಕ ಸೇವೆಗಳಲ್ಲಿ ಅಡಚಣೆ ಉಂಟಾಗುವ ನಿರೀಕ್ಷೆಯಿದೆ.

ಏನಿರುತ್ತೆ.. ಏನಿರಲ್ಲ?

ಬ್ಯಾಂಕಿಂಗ್ ಮತ್ತು ವಿಮಾ ಸೇವೆಗಳು, ಅಂಚೆ ಕಾರ್ಯಾಚರಣೆಗಳು, ಕಲ್ಲಿದ್ದಲು ಗಣಿಗಾರಿಕೆ ಮತ್ತು ಕೈಗಾರಿಕಾ ಉತ್ಪಾದನೆ, ಸರ್ಕಾರಿ ಸಾರ್ವಜನಿಕ ಸಾರಿಗೆ, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಘಟಕಗಳು, ಗ್ರಾಮೀಣ ಪ್ರದೇಶಗಳಲ್ಲಿ ರೈತರ ನೇತೃತ್ವದ ಕಾರ್ಯಚರಣೆಗಳು ಇಂದು ಬಂದ್ ಆಗುವ ಸಾಧ್ಯತೆ ಇದೆ.

ಶಾಲಾ, ಕಾಲೇಜುಗಳು, ಖಾಸಗಿ ಕಚೇರಿಗಳು ಕಾರ್ಯಾಚರಿಸಲಿವೆ. ರೈಲು ಸೇವೆಗಳು ಇದ್ದರೂ, ವಿಳಂಬ ಆಗುವ ಸಾಧ್ಯತೆಗಳು ಹೆಚ್ಚಿದೆ.

“ದೇಶದಾದ್ಯಂತ ರೈತರು ಮತ್ತು ಗ್ರಾಮೀಣ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ಎಐಟಿಯುಸಿಯ ಅಮರ್‌ಜೀತ್ ಕೌರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. “ಸರ್ಕಾರ ನಮ್ಮ 17 ಅಂಶಗಳ ಬೇಡಿಕೆ ಪಟ್ಟಿಯನ್ನು ನಿರ್ಲಕ್ಷಿಸಿದೆ ಮತ್ತು ಕಳೆದ 10 ವರ್ಷಗಳಲ್ಲಿ ವಾರ್ಷಿಕ ಕಾರ್ಮಿಕ ಸಮ್ಮೇಳನವನ್ನು ಸಹ ಕರೆದಿಲ್ಲ” ಎಂದು ಅವರು ಹೇಳಿದ್ದಾರೆ.

“ಸಾರ್ವತ್ರಿಕ ಮುಷ್ಕರದಿಂದ ದೇಶದಾದ್ಯಂತ ಸಾರ್ವಜನಿಕ ಸೇವೆಗಳು ಅಸ್ತವ್ಯಸ್ತಗೊಳ್ಳಲಿವೆ. ಬ್ಯಾಂಕಿಂಗ್, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಕಾರ್ಖಾನೆಗಳು, ರಾಜ್ಯ ಸಾರಿಗೆ ಸೇವೆಗಳ ಮೇಲೆ ಮುಷ್ಕರದ ಪರಿಣಾಮ ಬೀರಲಿದೆ” ಎಂದು ಹಿಂದ್ ಮಜ್ದೂರ್ ಸಭಾದ ಹರ್ಭಜನ್ ಸಿಂಗ್ ಸಿಧು ಪಿಟಿಐಗೆ ತಿಳಿಸಿದ್ದಾರೆ.

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (AIBEA)ನೊಂದಿಗೆ ಸಂಯೋಜಿತವಾಗಿರುವ ಬಂಗಾಳ ಪ್ರಾಂತೀಯ ಬ್ಯಾಂಕ್ ನೌಕರರ ಸಂಘವು ಬ್ಯಾಂಕಿಂಗ್ ಮತ್ತು ವಿಮಾ ವಲಯಗಳೆರಡೂ ಮುಷ್ಕರದಲ್ಲಿ ಭಾಗವಹಿಸಲಿವೆ ಎಂದು ದೃಢಪಡಿಸಿದೆ. ಇಂದು ಔಪಚಾರಿಕ ಬ್ಯಾಂಕಿಂಗ್ ರಜೆ ಇಲ್ಲದಿದ್ದರೂ, ಶಾಖೆಗಳು ಮತ್ತು ಎಟಿಎಂಗಳಲ್ಲಿನ ಸೇವೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ.

ವಿದ್ಯುತ್ ಸರಬರಾಜಿನ ಮೇಲೂ ಪರಿಣಾಮ ಬೀರಬಹುದು. ಪಿಟಿಐ ವರದಿಯ ಪ್ರಕಾರ, 27 ಲಕ್ಷಕ್ಕೂ ಹೆಚ್ಚು ವಿದ್ಯುತ್ ಕ್ಷೇತ್ರದ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ರೈಲ್ವೆ ಇಲಾಖೆ ಯಾವುದೇ ಅಧಿಕೃತ ಮುಷ್ಕರ ಸೂಚನೆಯನ್ನು ನೀಡಿಲ್ಲ. ಆದಾಗ್ಯೂ, ಪ್ರತಿಭಟನೆಗಳು ಅಥವಾ ಸಾಗಣೆ ಪರಿಣಾಮಗಳಿಂದಾಗಿ ರೈಲು ಸೇವೆಗಳಲ್ಲಿ ಸಂಭವನೀಯ ಅಡಚಣೆಗಳು ಅಥವಾ ವಿಳಂಬಗಳು ಸಂಭವಿಸಬಹುದು.

ಈ ಮುಷ್ಕರ ಕೇವಲ ಔಪಚಾರಿಕ ವಲಯದ ಉದ್ಯೋಗಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಅನೌಪಚಾರಿಕ ವಲಯದ ಕಾರ್ಮಿಕರು, ಸ್ವಯಂ ಉದ್ಯೋಗಿ ಮಹಿಳಾ ಸಂಘ (SEWA) ನಂತಹ ಸ್ವಯಂ ಉದ್ಯೋಗಿ ಗುಂಪುಗಳು ಮತ್ತು ಗ್ರಾಮೀಣ ಸಮುದಾಯಗಳು ಸಹ ಭಾಗವಹಿಸಲಿವೆ.

ಮುಷ್ಕರಕ್ಕೆ ಸಂಯುಕ್ತ ಕಿಸಾನ್ ಮೋರ್ಚಾದಂತಹ ರೈತ ಒಕ್ಕೂಟಗಳ ಬೆಂಬಲ ದೊರೆತಿದೆ. ಸಂಯುಕ್ತ ಕಿಸಾನ್ ಮೋರ್ಚಾ ಈಗ ರದ್ದುಗೊಂಡಿರುವ ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧದ ಐತಿಹಾಸಿಕ ರೈತರ ಆಂದೋಲನದ ನೇತೃತ್ವ ವಹಿಸಿತ್ತು.

ಎನ್‌ಎಂಡಿಸಿ ಲಿಮಿಟೆಡ್, ಉಕ್ಕು ಸ್ಥಾವರಗಳು ಮತ್ತು ರೈಲ್ವೆ ಕಾರ್ಯಾಚರಣೆಗಳು ಸೇರಿದಂತೆ ಪ್ರಮುಖ ಕೈಗಾರಿಕೆಗಳ ಸಾರ್ವಜನಿಕ ವಲಯದ ಉದ್ಯೋಗಿಗಳು ಸಹ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು), ಹಿಂದ್ ಮಜ್ದೂರ್ ಸಭಾ (ಹೆಚ್‌ಎಂಎಸ್‌), ಸೆಲ್ಫ್ ಎಂಪ್ಲಾಯಿಡ್ ವುಮೆನ್ಸ್ ಅಸೋಸಿಯೇಷನ್ (ಎಸ್‌ಇಡಬ್ಲ್ಯುಎ), ಲೇಬರ್ ಪ್ರೊಗ್ರೆಸಿವ್ ಫೆಡರೇಶನ್ (ಎಲ್‌ಪಿಎಫ್‌), ಯುನೈಟೆಡ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಯುಟಿಯುಸಿ), ಸಂಯುಕ್ತ ಕಿಸಾನ್ ಮೊರ್ಚಾ, ರೂರಲ್ ವರ್ಕರ್ಸ್ ಯೂನಿಯನ್ ಹಾಗೂ ರೈಲ್ವೆ, ಎನ್‌ಎಂಡಿಸಿ ಲಿಮಿಟೆಡ್ ಮತ್ತು ಉಕ್ಕಿನ ಕೈಗಾರಿಕೆಗಳ ಸಾರ್ವಜನಿಕ ವಲಯದ ಸಿಬ್ಬಂದಿ ಮಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಸತ್ತು ಅಂಗೀಕರಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು ಎಂಬುವುದೇ ಮುಷ್ಕರದ ಪ್ರಮುಖ ಬೇಡಿಕೆಯಾಗಿದೆ.

ಈ ಕಾರ್ಮಿಕ ಸಂಹಿತೆಗಳು ಮುಷ್ಕರ ನಡೆಸುವುದನ್ನು ಹೆಚ್ಚು ಕಷ್ಟಕರವಾಗಿಸುವ ಮೂಲಕ, ಕೆಲಸದ ಸಮಯವನ್ನು ಹೆಚ್ಚಿಸುವ ಮೂಲಕ ಮತ್ತು ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದಾಗ ಉದ್ಯೋಗದಾತರನ್ನು ದಂಡದಿಂದ ರಕ್ಷಿಸುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಕಾರ್ಮಿಕ ಸಂಘಗಳು ವಾದಿಸಿವೆ.

ಅಲ್ಲದೆ, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣಕ್ಕೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ಹೆಚ್ಚು ಕೆಲಸಗಾರರನ್ನು ನೇಮಿಸಲು ಅವಕಾಶ ನೀಡುತ್ತದೆ. ಹೊರ ಗುತ್ತಿಗೆ ಉದ್ಯೋಗ ಭದ್ರತೆ ಮತ್ತು ನ್ಯಾಯಯುತ ವೇತನಕ್ಕೆ ಧಕ್ಕೆ ತರುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ಇಷ್ಟೊಂದು ದೊಡ್ಡ ಪ್ರಮಾಣದ ಮುಷ್ಕರ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2020, 2022 ಮತ್ತು 2024ರಲ್ಲಿ ನಡೆದ ಇದೇ ರೀತಿಯ ರಾಷ್ಟ್ರವ್ಯಾಪಿ ಮುಷ್ಕರಗಳಲ್ಲಿ ಲಕ್ಷಾಂತರ ಕಾರ್ಮಿಕರು ಬೀದಿಗಿಳಿದು ಕಾರ್ಮಿಕ ವಿರೋಧಿ ನೀತಿಗಳು ಮತ್ತು ವಿವಾದಾತ್ಮಕ ಆರ್ಥಿಕ ಸುಧಾರಣೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು.

ಜುಲೈ 9ಕ್ಕೆ ಭಾರತ್ ಬಂದ್: 25 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗಿ, ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ – ದೇಶದಾದ್ಯಂತ ಸೇವೆಗಳ ವ್ಯಾಪಕ ವ್ಯತ್ಯಯ ಸಾಧ್ಯತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...