Homeಮುಖಪುಟನಾಳೆ ಸಂಪೂರ್ಣ ಭಾರತ್ ಬಂದ್‌: ಹೋರಾಟನಿರತ ರೈತರ ಬೇಡಿಕೆಗಳೇನು?

ನಾಳೆ ಸಂಪೂರ್ಣ ಭಾರತ್ ಬಂದ್‌: ಹೋರಾಟನಿರತ ರೈತರ ಬೇಡಿಕೆಗಳೇನು?

ಮುಷ್ಕರವು ಬೆಳಗ್ಗೆ 6ಕ್ಕೆ ಆರಂಭವಾಗಿ ಸಂಜೆ 6ರ ತನಕವೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳು, ಡೈರಿಗಳು ಸೇರಿದಂತೆ ಎಲ್ಲವೂ ಬಾಗಿಲು ಮುಚ್ಚಲಿವೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 4 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ ಮಾರ್ಚ್ 26 ರಂದು ಭಾರತದಾದ್ಯಂತ ಸಂಪೂರ್ಣ ಭಾರತ್ ಬಂದ್‌ಗೆ ಹೋರಾಟನಿರತ ರೈತರು ಕರೆ ನೀಡಿದ್ದಾರೆ.

ಅಖಿಲ ಭಾರತ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ಇತರೆ ಸಾಮೂಹಿಕ ಸಂಘಟನೆಗಳ ಬೆಂಬಲವನ್ನು ಕೇಳಲಾಗಿದೆ ಎಂದು ರೈತ ಸಂಘಟನೆಗಳು ಹೇಳಿವೆ.

ರೈತರ ಚಳವಳಿಗೆ ನಾಲ್ಕು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಮಾರ್ಚ್ 26ರಂದು ದೇಶವ್ಯಾಪಿ ಮುಷ್ಕರ ನಡೆಯಲಿದ್ದು, ಎಲ್ಲ ಅಂಗಡಿಗಳು ಹಾಗೂ ಇತರ ವ್ಯವಹಾರ ಸಂಸ್ಥೆಗಳು 12 ಗಂಟೆಗಳ ಕಾಲ ಮುಚ್ಚಲಿವೆ. ಮಾರ್ಚ್ 28ರಂದು ಹೋಳಿ ದಹನದ ವೇಳೆ ಕೃಷಿ ಕಾನೂನುಗಳ ಪ್ರತಿಗಳನ್ನು ಸುಡಲಾಗುವುದು ಎಂದು ಎಸ್ ಕೆ ಎಂ ತಿಳಿಸಿದೆ.

ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೆಕು, ಎಂಎಸ್‌ಪಿ ಮತ್ತು ಬೆಳೆ ಸಂಗ್ರಹಣೆ ಕುರಿತು ಕಾನೂನು ಮಾಡಬೇಕು, ರೈತರ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು, ವಿದ್ಯುತ್ ಬಿಲ್ ಮತ್ತು ಮಾಲಿನ್ಯ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಡೀಸೆಲ್, ಪೆಟ್ರೋಲ್ ಮತ್ತು ಅನಿಲದ ಬೆಲೆಯನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಒಕ್ಕೂಟ ಹೇಳಿದೆ.

ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ಮುಷ್ಕರವು ಬೆಳಗ್ಗೆ 6ಕ್ಕೆ ಆರಂಭವಾಗಿ ಸಂಜೆ 6ರ ತನಕವೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳು, ಡೈರಿಗಳು ಸೇರಿದಂತೆ ಎಲ್ಲವೂ ಬಾಗಿಲು ಮುಚ್ಚಲಿವೆ. ಹೋಳಿಯ ದಿನ 3 ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಹಾಕಲಾಗುವುದು. ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದು ಮಾಡಿ, ಕನಿಷ್ಠ ಬೆಂಬಲ ಬೆಲೆಗೆ ಲಿಖಿತ ಖಾತರಿ ನೀಡುವ ವಿಶ್ವಾಸ ನಮಗಿದೆ ಎಂದು ಗಂಗಾನಗರ್ ಕಿಸಾನ್ ಸಮಿತಿಯ ರಂಜಿತ್ ರಾಜು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

ಕನಿಷ್ಟ ಬೆಂಬಲೆ ಬೆಲೆ ನಿಗದಿಗೊಳಿಸುವಂತೆ ಮತ್ತು 3 ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ದೇಶದಾದ್ಯಂತ ಇರುವ ರೈತರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 2020ರ ನವೆಂಬರ್ ತಿಂಗಳಿನಿಂದಲೂ ಹೋರಾಟ ಮಾಡುತ್ತಿದ್ದಾರೆ.

ಈ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳಾಗಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ನಂತರ ಜ. 26 ರಂದು ಟ್ರ್ಯಾಕ್ಟರ್‌ ರ್ಯಾಲಿಗೆ ರೈತರು ಕರೆ ನೀಡಿದ್ದರು. ಆ ಸಂದರ್ಭದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳಿಂದ ರೈತ ಹೋರಾಟಕ್ಕೆ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ರಾಕೆಶ್ ಟಿಕಾಯತ್ ಭಾವನಾತ್ಮಕ ಭಾಷಣ ಮಾಡಿದ ನಂತರ ಉತ್ತರ ಭಾರತದಾದ್ಯಂತ ಪ್ರತಿ ಹಳ್ಳಿಗಳಲ್ಲೂ ಮಹಾ ಪಂಚಾಯತ್‌ಗಳನ್ನು ನಡೆಸಿ ಲಕ್ಷಾಂತರ ರೈತ ಬೆಂಬಲಿಗರನ್ನು ಒಟ್ಟಗೂಡಿಸಲಾಗುತ್ತಿದೆ. ಅಂದಿನಿಂದ ರೈತ ಹೋರಾಟ ಮತ್ತಷ್ಟು ಚುರುಕು ಪಡೆದುಕೊಂಡಿದೆ.

ರೈತ ಹೋರಾಟವನ್ನು ಹತ್ತಿಕ್ಕಲು ಸರ್ಕಾರವು ಹಲವು ಅನೈತಿಕ ಮಾರ್ಗಗಳನ್ನು ಪರೋಕ್ಷವಾಗಿ ಅನುಸರಿಸುತ್ತಿದೆ. ಆದರೆ ಹೋರಾಟವನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಿಲ್ಲ. ಈಗ ರೈತರು ಮತ್ತೊಮ್ಮೆ ದೇಶದಾದ್ಯಂತ ಬಂದ್ ಮಾಡಲು ಕರೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...