Homeಚಳವಳಿಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದ್ದ  ಭಾರತ್‌ ಬಂದ್‌ ಯಶಸ್ವಿಯಾಗಿದೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖ್ಯಸ್ಥ ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶದಾದ್ಯಂತ ಭಾರತ್‌ ಬಂದ್‌ ಆಚರಿಸಲಾಯಿತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರೈತ ನಾಯಕ ರಾಕೇಶ್‌ ಟಿಕಾಯತ್‌, “ನಮ್ಮ ಭಾರತ್‌ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ಬಂದ್‌ಗೆ ದೇಶವ್ಯಾಪಿಯಾಗಿ ರೈತರು ದೊಡ್ಡ ಪ್ರಮಾಣದಲ್ಲಿ ಬೆಂಬಲ ವ್ಯಕ್ತ ಪಡಿಸಿದ್ದಾರೆ” ಎಂದರು.

’ಭಾರತ್‌ ಬಂದ್ ಎಂದು ನಾವು ಎಲ್ಲವನ್ನೂ ಮುಚ್ಚುವುದಿಕ್ಕೆ ಸಾಧ್ಯವಾಗುವುದಿಲ್ಲ. ಜನರ ಓಡಾಟಕ್ಕೆ ಅನುವು ಮಾಡಿಕೊಡಲೇಬೇಕು. ಇದೆಲ್ಲದರ ಹೊರತಾಗಿ ಇಂದಿನ ಭಾರತ್‌ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ನಾವು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಸರ್ಕಾರದ ಪ್ರತಿನಿಧಿಗಳೇ ನಮ್ಮೊಂದಿಗೆ ಚರ್ಚೆ ನಡೆಸಲು ಮುಂದೆ ಬರುತ್ತಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಭಾರತ್‌ ಬಂದ್‌: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು

ಮುಂದುವರೆದು ಉತ್ತರ ಪ್ರದೇಶ ಸರ್ಕಾರ ಕಬ್ಬಿನ ಖರೀದಿ ದರವನ್ನು ಹೆಚ್ಚಿಸಿರುವ ಬಗ್ಗೆ ವ್ಯಂಗ್ಯವಾಡಿ ಅವರು, “ಯು.ಪಿ ಸರ್ಕಾರ ಪ್ರತಿ ಕ್ವಿಂಟಾಲ್‌ ಕಬ್ಬಿಗೆ 25 ರೂಪಾಯಿ ಹೆಚ್ಚಳ ಮಾಡಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಷ್ಟು ಕಡಿಮೆ ಪ್ರಮಾಣದಲ್ಲಿ ದರ ಹೆಚ್ಚಳ ಮಾಡುವ ಮೂಲಕ ಯೋಗಿ ಸರ್ಕಾರ ರೈತರ ವಿಚಾರದಲ್ಲಿ ತಮಾಷೆ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿಯೂ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ಬೆಂಗಳೂರಿನಲ್ಲಿ ಟೌನ್‌ಹಾಲ್‌‌ನಿಂದ ಮೈಸೂರು ಬ್ಯಾಂಕ್‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು. ಆನಂದರಾವ್ ವತ್ತದ ಬಳಿಯ ಗಾಂಧಿ ಪ್ರತಿಮೆ, ಸ್ವಾತಂತ್ರ್ಯ ಉದ್ಯಾನ, ಕೆ.ಆರ್‌.ವೃತ್ತ, ನೃಪತುಂಗ ವೃತದ ಮೂಲಕ ತೆರಳಿದ ಮೆರವಣಿಗೆ ಮೈಸೂರು ಬ್ಯಾಂಕ್‌ ವೃತ್ತಕ್ಕೆ ತಲುಪಿತು. ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಮೆಜಸ್ಟಿಕ್‌, ಕಾರ್ಪೋರೇಷನ್‌ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.


ಇದನ್ನೂ ಓದಿ: ಭಾರತ್ ಬಂದ್: ದೇಶದಾದ್ಯಂತ ಆರಂಭಗೊಂಡ ಪ್ರತಿಭಟನೆ, ಪಂಜಾಬ್, ಹರಿಯಾಣ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...