Homeಚಳವಳಿಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್‌

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದ್ದ  ಭಾರತ್‌ ಬಂದ್‌ ಯಶಸ್ವಿಯಾಗಿದೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖ್ಯಸ್ಥ ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶದಾದ್ಯಂತ ಭಾರತ್‌ ಬಂದ್‌ ಆಚರಿಸಲಾಯಿತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರೈತ ನಾಯಕ ರಾಕೇಶ್‌ ಟಿಕಾಯತ್‌, “ನಮ್ಮ ಭಾರತ್‌ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ಬಂದ್‌ಗೆ ದೇಶವ್ಯಾಪಿಯಾಗಿ ರೈತರು ದೊಡ್ಡ ಪ್ರಮಾಣದಲ್ಲಿ ಬೆಂಬಲ ವ್ಯಕ್ತ ಪಡಿಸಿದ್ದಾರೆ” ಎಂದರು.

’ಭಾರತ್‌ ಬಂದ್ ಎಂದು ನಾವು ಎಲ್ಲವನ್ನೂ ಮುಚ್ಚುವುದಿಕ್ಕೆ ಸಾಧ್ಯವಾಗುವುದಿಲ್ಲ. ಜನರ ಓಡಾಟಕ್ಕೆ ಅನುವು ಮಾಡಿಕೊಡಲೇಬೇಕು. ಇದೆಲ್ಲದರ ಹೊರತಾಗಿ ಇಂದಿನ ಭಾರತ್‌ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ನಾವು ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಸರ್ಕಾರದ ಪ್ರತಿನಿಧಿಗಳೇ ನಮ್ಮೊಂದಿಗೆ ಚರ್ಚೆ ನಡೆಸಲು ಮುಂದೆ ಬರುತ್ತಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಭಾರತ್‌ ಬಂದ್‌: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು

ಮುಂದುವರೆದು ಉತ್ತರ ಪ್ರದೇಶ ಸರ್ಕಾರ ಕಬ್ಬಿನ ಖರೀದಿ ದರವನ್ನು ಹೆಚ್ಚಿಸಿರುವ ಬಗ್ಗೆ ವ್ಯಂಗ್ಯವಾಡಿ ಅವರು, “ಯು.ಪಿ ಸರ್ಕಾರ ಪ್ರತಿ ಕ್ವಿಂಟಾಲ್‌ ಕಬ್ಬಿಗೆ 25 ರೂಪಾಯಿ ಹೆಚ್ಚಳ ಮಾಡಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಷ್ಟು ಕಡಿಮೆ ಪ್ರಮಾಣದಲ್ಲಿ ದರ ಹೆಚ್ಚಳ ಮಾಡುವ ಮೂಲಕ ಯೋಗಿ ಸರ್ಕಾರ ರೈತರ ವಿಚಾರದಲ್ಲಿ ತಮಾಷೆ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿಯೂ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ಬೆಂಗಳೂರಿನಲ್ಲಿ ಟೌನ್‌ಹಾಲ್‌‌ನಿಂದ ಮೈಸೂರು ಬ್ಯಾಂಕ್‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು. ಆನಂದರಾವ್ ವತ್ತದ ಬಳಿಯ ಗಾಂಧಿ ಪ್ರತಿಮೆ, ಸ್ವಾತಂತ್ರ್ಯ ಉದ್ಯಾನ, ಕೆ.ಆರ್‌.ವೃತ್ತ, ನೃಪತುಂಗ ವೃತದ ಮೂಲಕ ತೆರಳಿದ ಮೆರವಣಿಗೆ ಮೈಸೂರು ಬ್ಯಾಂಕ್‌ ವೃತ್ತಕ್ಕೆ ತಲುಪಿತು. ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಮೆಜಸ್ಟಿಕ್‌, ಕಾರ್ಪೋರೇಷನ್‌ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.


ಇದನ್ನೂ ಓದಿ: ಭಾರತ್ ಬಂದ್: ದೇಶದಾದ್ಯಂತ ಆರಂಭಗೊಂಡ ಪ್ರತಿಭಟನೆ, ಪಂಜಾಬ್, ಹರಿಯಾಣ ಸಂಪೂರ್ಣ ಬಂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...