Homeಚಳವಳಿರೈತರ ಹೋರಾಟ ಬೆಂಬಲಿಸಿ ಪ್ರಶಸ್ತಿ ಹಿಂತಿರುಗಿಸಲು ಪಂಜಾಬ್ ಕ್ರೀಡಾಪಟುಗಳ ರ್‍ಯಾಲಿ: ಪೊಲೀಸರಿಂದ ತಡೆ

ರೈತರ ಹೋರಾಟ ಬೆಂಬಲಿಸಿ ಪ್ರಶಸ್ತಿ ಹಿಂತಿರುಗಿಸಲು ಪಂಜಾಬ್ ಕ್ರೀಡಾಪಟುಗಳ ರ್‍ಯಾಲಿ: ಪೊಲೀಸರಿಂದ ತಡೆ

'ರೈತರಿಗೆ ಬೆಂಬಲವಾಗಿ ಪದ್ಮಶ್ರೀ ಅನ್ನು ಹಿಂದಿರುಗಿಸಲು ನಾನು ನಿರ್ಧರಿಸಿದ್ದೇನೆ’ ಎಂದು ಪಂಜಾಬಿ ಬರಹಗಾರ ಮತ್ತು ಕವಿ ಸುರ್ಜಿತ್ ಪತಾರ್ ಹೇಳಿದ್ದಾರೆ.

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಪಂಜಾಬ್‌ನ 30ಕ್ಕೂ ಹೆಚ್ಚು ಕ್ರೀಡಾಪಟುಗಳು ಮತ್ತು ಇತರರು ತಮ್ಮ ಪ್ರಶಸ್ತಿ ಹಿಂತಿರುಗಿಸಲು ನಿರ್ಧರಿಸಿ ಬೆಂಬಲ ಸೂಚಿಸಿದ್ದಾರೆ.

ಕರಾಳ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕ್ರೀಡಾಪಟುಗಳು ಮತ್ತು ಹಲವು ಪ್ರಶಸ್ತಿ ಪುರಸ್ಕೃತರು ರಾಷ್ಟ್ರಪತಿ ಭವನದತ್ತ ಮೆರವಣಿಗೆ ಹೊರಟಿದ್ದರು. ಆದರೆ, ರಸ್ತೆ ಮಧ್ಯೆಯೇ ಇವರನ್ನು ದೆಹಲಿ ಪೊಲೀಸರು ತಡೆದಿದ್ದಾರೆ.

“ಪಂಜಾಬ್‌ನ 30 ಕ್ರೀಡಾಪಟುಗಳು ಮತ್ತು ಇತರರು ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತಮ್ಮ ಪ್ರಶಸ್ತಿಯನ್ನು  ಹಿಂತಿರುಗಿಸಲು ಬಯಸುತ್ತಾರೆ” ಎಂದು ಕುಸ್ತಿಪಟು ಕರ್ತಾರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ನಿನ್ನೆ ಕೂಡ ಒಲಂಪಿಕ್ ಬಾಕ್ಸಿಂಗ್ ಚಾಂಪಿಯನ್ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ವಿಜೇಂದರ್‌ ಸಿಂಗ್ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ನೀಡಿದ್ದಾರೆ. ಕರಾಳ ಕೃಷಿ ನೀತಿಯನ್ನು ಹಿಂಪಡೆಯದಿದ್ದರೆ ತನಗೆ ಸಿಕ್ಕಿರುವ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನವನ್ನು ಹಿಂದಿರುಗಿಸುವುದಾಗಿ ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನು ಹಿಂಪಡೆಯದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಾಸ್: ಬಾಕ್ಸರ್‌ ವಿಜೇಂದರ್‌ ಸಿಂಗ್

ಪಂಜಾಬ್, ಹರಿಯಾಣದ ಕ್ರೀಡಾಪಟುಗಳ ಜೊತೆಗೆ ಕವಿಗಳು, ಸಾಹಿತಿಗಳು ಕೃಷಿ ಮಸೂದೆಗಳಿಗೆ ತಮ್ಮ ಪ್ರತಿರೋಧ ತೋರಿ, ರೈತರ ಜೊತೆಗೆ ನಿಲ್ಲುತ್ತಿದ್ದಾರೆ. ಪಂಜಾಬ್‌ ಕವಿ, ಪದ್ಮಶ್ರೀ ಪುರಸ್ಕೃತ ಸುರ್ಜಿತ್ ಪತಾರ್‌ ಅನ್ನದಾತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ತೋರುತ್ತಿರುವ ವರ್ತನೆಯಿಂದ ನೋವಾಗಿದೆ ಎಂದಿದ್ದಾರೆ.

“ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವಾಗ ಕೇಂದ್ರದ ವರ್ತನೆಯಿಂದ ನನಗೆ ತೀವ್ರ ನೋವಾಗಿದೆ. ಹಲವು ಬಾರಿ ಪ್ರಯತ್ನಗಳನ್ನು ಮಾಡಿದರೂ, ರೈತರ ಬೇಡಿಕೆಗಳನ್ನು ಪೂರೈಸಲು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಯಾವುದೇ ಪ್ರಯತ್ನ ಮಾಡಲಾಗಿಲ್ಲ. ರೈತರಿಗೆ ಬೆಂಬಲವಾಗಿ ಪದ್ಮಶ್ರೀ ಅನ್ನು ಹಿಂದಿರುಗಿಸಲು ನಾನು ನಿರ್ಧರಿಸಿದ್ದೇನೆ’ ಎಂದು ಪಂಜಾಬಿ ಬರಹಗಾರ ಮತ್ತು ಕವಿ ಸುರ್ಜಿತ್ ಪತಾರ್ ಹೇಳಿದ್ದಾರೆ.

ಈ ಹಿಂದೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು. ರೈತರ ಪ್ರತಿಭಟನೆಗೆ ಇಡೀ ಪಂಜಾಬ್ ಒಟ್ಟಾಗಿ ನಿಂತಿದೆ. ಪಂಜಾಬ್ ಚಿತ್ರರಂಗ, ನಟ-ನಟಿಯರು, ಕ್ರೀಡಾಪಟುಗಳು, ಜೊತೆಗೆ ಬಾಲಿವುಡ್ ಕಲಾವಿದರು ರೈತರ ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ಬಾಲಿವುಡ್ ಗಾಯಕ, ನಟ ದಿಲ್ಜಿತ್ ದೋಸಾಂಜ್ ಪ್ರತಿಭಟನಾಕಾರರಿಗೆ ಚಳಿಗಾಲದ ಉಡುಪುಗಳನ್ನು ಕೊಳ್ಳಲು ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದರು. ರೈತರ ಪ್ರತಿಭಟನೆ ವಿಚಾರವಾಗಿ ಅವಹೇಳನ ಮಾಡಿದ್ದ ನಟಿ ಕಂಗನಾ ರಣಾವತ್ ವಿರುದ್ಧ ದಿಲ್ಜಿತ್ ಟೀಕೆಗಳು ಟ್ವಿಟರ್‌ ಸಮರಕ್ಕೆ ಕಾರಣವಾಗಿದ್ದವು.


ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....