Homeಚಳವಳಿರೈತರ ಹೋರಾಟ ಬೆಂಬಲಿಸಿ ಪ್ರಶಸ್ತಿ ಹಿಂತಿರುಗಿಸಲು ಪಂಜಾಬ್ ಕ್ರೀಡಾಪಟುಗಳ ರ್‍ಯಾಲಿ: ಪೊಲೀಸರಿಂದ ತಡೆ

ರೈತರ ಹೋರಾಟ ಬೆಂಬಲಿಸಿ ಪ್ರಶಸ್ತಿ ಹಿಂತಿರುಗಿಸಲು ಪಂಜಾಬ್ ಕ್ರೀಡಾಪಟುಗಳ ರ್‍ಯಾಲಿ: ಪೊಲೀಸರಿಂದ ತಡೆ

'ರೈತರಿಗೆ ಬೆಂಬಲವಾಗಿ ಪದ್ಮಶ್ರೀ ಅನ್ನು ಹಿಂದಿರುಗಿಸಲು ನಾನು ನಿರ್ಧರಿಸಿದ್ದೇನೆ’ ಎಂದು ಪಂಜಾಬಿ ಬರಹಗಾರ ಮತ್ತು ಕವಿ ಸುರ್ಜಿತ್ ಪತಾರ್ ಹೇಳಿದ್ದಾರೆ.

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟಕ್ಕೆ ಪಂಜಾಬ್‌ನ 30ಕ್ಕೂ ಹೆಚ್ಚು ಕ್ರೀಡಾಪಟುಗಳು ಮತ್ತು ಇತರರು ತಮ್ಮ ಪ್ರಶಸ್ತಿ ಹಿಂತಿರುಗಿಸಲು ನಿರ್ಧರಿಸಿ ಬೆಂಬಲ ಸೂಚಿಸಿದ್ದಾರೆ.

ಕರಾಳ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕ್ರೀಡಾಪಟುಗಳು ಮತ್ತು ಹಲವು ಪ್ರಶಸ್ತಿ ಪುರಸ್ಕೃತರು ರಾಷ್ಟ್ರಪತಿ ಭವನದತ್ತ ಮೆರವಣಿಗೆ ಹೊರಟಿದ್ದರು. ಆದರೆ, ರಸ್ತೆ ಮಧ್ಯೆಯೇ ಇವರನ್ನು ದೆಹಲಿ ಪೊಲೀಸರು ತಡೆದಿದ್ದಾರೆ.

“ಪಂಜಾಬ್‌ನ 30 ಕ್ರೀಡಾಪಟುಗಳು ಮತ್ತು ಇತರರು ರೈತರ ಪ್ರತಿಭಟನೆಯನ್ನು ಬೆಂಬಲಿಸಿ ತಮ್ಮ ಪ್ರಶಸ್ತಿಯನ್ನು  ಹಿಂತಿರುಗಿಸಲು ಬಯಸುತ್ತಾರೆ” ಎಂದು ಕುಸ್ತಿಪಟು ಕರ್ತಾರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ’ಈ ಹೋರಾಟ ಕೇವಲ ರೈತರದ್ದಲ್ಲ, ಎಲ್ಲಾ ದೇಶವಾಸಿಗಳದ್ದು’: ಭಾರತ್ ಬಂದ್ ಬೆಂಬಲಿಸಿದ ಆಪ್

ನಿನ್ನೆ ಕೂಡ ಒಲಂಪಿಕ್ ಬಾಕ್ಸಿಂಗ್ ಚಾಂಪಿಯನ್ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ವಿಜೇಂದರ್‌ ಸಿಂಗ್ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ನೀಡಿದ್ದಾರೆ. ಕರಾಳ ಕೃಷಿ ನೀತಿಯನ್ನು ಹಿಂಪಡೆಯದಿದ್ದರೆ ತನಗೆ ಸಿಕ್ಕಿರುವ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನವನ್ನು ಹಿಂದಿರುಗಿಸುವುದಾಗಿ ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನು ಹಿಂಪಡೆಯದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಾಸ್: ಬಾಕ್ಸರ್‌ ವಿಜೇಂದರ್‌ ಸಿಂಗ್

ಪಂಜಾಬ್, ಹರಿಯಾಣದ ಕ್ರೀಡಾಪಟುಗಳ ಜೊತೆಗೆ ಕವಿಗಳು, ಸಾಹಿತಿಗಳು ಕೃಷಿ ಮಸೂದೆಗಳಿಗೆ ತಮ್ಮ ಪ್ರತಿರೋಧ ತೋರಿ, ರೈತರ ಜೊತೆಗೆ ನಿಲ್ಲುತ್ತಿದ್ದಾರೆ. ಪಂಜಾಬ್‌ ಕವಿ, ಪದ್ಮಶ್ರೀ ಪುರಸ್ಕೃತ ಸುರ್ಜಿತ್ ಪತಾರ್‌ ಅನ್ನದಾತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ತೋರುತ್ತಿರುವ ವರ್ತನೆಯಿಂದ ನೋವಾಗಿದೆ ಎಂದಿದ್ದಾರೆ.

“ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವಾಗ ಕೇಂದ್ರದ ವರ್ತನೆಯಿಂದ ನನಗೆ ತೀವ್ರ ನೋವಾಗಿದೆ. ಹಲವು ಬಾರಿ ಪ್ರಯತ್ನಗಳನ್ನು ಮಾಡಿದರೂ, ರೈತರ ಬೇಡಿಕೆಗಳನ್ನು ಪೂರೈಸಲು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಯಾವುದೇ ಪ್ರಯತ್ನ ಮಾಡಲಾಗಿಲ್ಲ. ರೈತರಿಗೆ ಬೆಂಬಲವಾಗಿ ಪದ್ಮಶ್ರೀ ಅನ್ನು ಹಿಂದಿರುಗಿಸಲು ನಾನು ನಿರ್ಧರಿಸಿದ್ದೇನೆ’ ಎಂದು ಪಂಜಾಬಿ ಬರಹಗಾರ ಮತ್ತು ಕವಿ ಸುರ್ಜಿತ್ ಪತಾರ್ ಹೇಳಿದ್ದಾರೆ.

ಈ ಹಿಂದೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು. ರೈತರ ಪ್ರತಿಭಟನೆಗೆ ಇಡೀ ಪಂಜಾಬ್ ಒಟ್ಟಾಗಿ ನಿಂತಿದೆ. ಪಂಜಾಬ್ ಚಿತ್ರರಂಗ, ನಟ-ನಟಿಯರು, ಕ್ರೀಡಾಪಟುಗಳು, ಜೊತೆಗೆ ಬಾಲಿವುಡ್ ಕಲಾವಿದರು ರೈತರ ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ಬಾಲಿವುಡ್ ಗಾಯಕ, ನಟ ದಿಲ್ಜಿತ್ ದೋಸಾಂಜ್ ಪ್ರತಿಭಟನಾಕಾರರಿಗೆ ಚಳಿಗಾಲದ ಉಡುಪುಗಳನ್ನು ಕೊಳ್ಳಲು ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದರು. ರೈತರ ಪ್ರತಿಭಟನೆ ವಿಚಾರವಾಗಿ ಅವಹೇಳನ ಮಾಡಿದ್ದ ನಟಿ ಕಂಗನಾ ರಣಾವತ್ ವಿರುದ್ಧ ದಿಲ್ಜಿತ್ ಟೀಕೆಗಳು ಟ್ವಿಟರ್‌ ಸಮರಕ್ಕೆ ಕಾರಣವಾಗಿದ್ದವು.


ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...