Homeಮುಖಪುಟದೈಹಿಕ ತಪಸ್ಸು, ಮನದ ಸಾಧನೆ ಹಾಗೂ ವೈಚಾರಿಕ ಮಂಥನದ ಯಾತ್ರೆ

ದೈಹಿಕ ತಪಸ್ಸು, ಮನದ ಸಾಧನೆ ಹಾಗೂ ವೈಚಾರಿಕ ಮಂಥನದ ಯಾತ್ರೆ

- Advertisement -
- Advertisement -

ಐದು ತಿಂಗಳವರೆಗೆ ದೇಶದ ರಸ್ತೆಗಳಲ್ಲಿ 3700 ಕಿಲೊಮೀಟರ್ ಅಳೆದು ಈ ಭಾರತ್ ಜೋಡೊ ಯಾತ್ರೆ ಸಾಧಿಸುವುದಾದರೂ ಏನು? 7ನೆಯ ಸೆಪ್ಟೆಂಬರ್‌ನಂದು ಕನ್ಯಾಕುಮಾರಿಯಿಂದ ಈ ಯಾತ್ರೆ ಶುರುವಾದಾಗ ಈ ಪ್ರಶ್ನೆ ಎಲ್ಲಾ ಯಾತ್ರಿಗಳ ಎದುರಿಗೆ ಕಾಣಿಸಿಕೊಂಡಿತ್ತು. ಆದರೆ ಗಾಂಧೀಜಿಯ ಪುಣ್ಯತಿಥಿಯ ದಿನದಂದು, ಜೋರಾಗಿ ಸುರಿಯುತ್ತಿರುವ ಹಿಮದ ನಡುವೆಯೇ ಶ್ರೀನಗರದಲ್ಲಿ ಈ ಯಾತ್ರೆ ಮುಕ್ತಾಯವಾದಾಗ ಅದಕ್ಕೆ ಉತ್ತರ ಸ್ಪಷ್ಟವಾಗಿತ್ತು.

ನಮ್ಮ ಪರಂಪರೆಯಲ್ಲಿ ಯಾವುದೇ ಯಾತ್ರೆ ಕೇವಲ ರಸ್ತೆ ಅಳೆಯಲು ಅಥವಾ ಪಿಕ್ನಿಕ್‌ಗಾಗಿ ಅಥವಾ ಕಸರತ್ತು ಮಾಡಲು ಆಗಿರುವುದಿಲ್ಲ. ಗೌತಮ ಬುದ್ಧನಿಂದ ಹಿಡಿದು ಮಹಾತ್ಮ ಗಾಂಧಿಯ ತನಕ ಎಲ್ಲಾ ಯಾತ್ರೆಗಳು ಶರೀರವನ್ನು ದಂಡಿಸುವುದಕ್ಕಿಂತ ಹೆಚ್ಚಾಗಿ ವಿಚಾರದ ಹಾಗೂ ಮಾನಸ ಯಾತ್ರೆಗಳಾಗಿವೆ. ಶರೀರದ ಚಲನೆಯು ದೇಶ ಮತ್ತು ಸಮಾಜವನ್ನು ಅಲುಗಾಡಿಸುವ ಮಾಧ್ಯಮವಾಗಿರುತ್ತದೆ. ಭಾರತ ಜೋಡೊ ಯಾತ್ರೆಯ ಉದ್ದೇಶವೂ ಇದೇ ಆಗಿತ್ತು. ಇದು ಶಾರೀರಿಕ ತಪಸ್ಸಿನ ಮುಖಾಂತರ ವೈಚಾರಿಕ ಮಂಥನ ಹಾಗೂ ಮನಸ್ಸಿನ ಸಾಧನದ ಯಾತ್ರೆಯಾಗಿದೆ.

ಈ ಯಾತ್ರೆಯ ಶಾರೀರಿಕ ತಪಸ್ಸಿನ ಬಗೆ ಅರ್ಥಮಾಡಿಕೊಳ್ಳಲು ದೇಶಕ್ಕೆ ಇನ್ನೂ ಸಮಯ ಹಿಡಿಯಲಿದೆ. ಜನತೆಗೆ ರಾಹುಲ್ ಗಾಂಧಿಯ ಟಿ-ಶರ್ಟ್ ಅಂತೂ ಕಾಣಿಸಿತು, ಆದರೆ ಈ ಸಂಪೂರ್ಣ ಪರಿಶ್ರಮದ ಹಿಂದೆ ಲಕ್ಷಾಂತರ ಜನರ ತಪಸ್ಸು ಇನ್ನೂ ಕಣ್ಣಿಗೆ ಬಿದ್ದಿಲ್ಲ. ಪ್ರತಿ ದಿನ ಸುಮಾರು 20ರಿಂದ 25 ಕಿಲೋಮೀಟರ್ ಕಾಲ್ನಡಿಗೆ, ಎಲ್ಲಾ ರೀತಿಯ ಹವಾಮಾನವನ್ನು ಎದುರಿಸುವುದು ಹಾಗೂ ಎಲ್ಲಾ ರೀತಿಯ ಮನಸ್ಥಿತಿ ಮತ್ತು ಸನ್ನಿವೇಶಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು, ಇವೆಲ್ಲವೂ ಸಣ್ಣ ವಿಷಯಗಳೇನಲ್ಲ. ಈ ಯಾತ್ರೆಯು ದೇಶದ ಎಲ್ಲಾ ರೀತಿಯ ಪ್ರದೇಶಗಳನ್ನು ಹಾಗೂ ಎಲ್ಲಾ ರೀತಿಯ ಹವಾಮಾನಗಳನ್ನು ನೋಡಿದೆ. ಸುಡು ಬಿಸಿಲು, ಮೈಕೊರೆಯುವ ಚಳಿ, ಧಾರಾಕಾರ ಮಳೆ ಹಾಗೂ ಜೋರಾದ ಹಿಮಪಾತ. ಈ ಯಾತ್ರೆಯ ಒಬ್ಬ ಸಹಯಾತ್ರಿಯಾಗಿ, ಪ್ರತಿಯೊಬ್ಬ ಯಾತ್ರಿಯ ಪಾದಗಳಲ್ಲಿ ಗುಳ್ಳೆಗಳು, ಎಲ್ಲಾ ರೀತಿಯ ರೋಗಗಳು, ಎಲುಬು ಕೊರೆಯುವ ಚಳಿಯ ನಡುವೆ ಉರುಳಿಹೋದ ಟೆಂಟ್‌ಗಳು- ಇವೆಲ್ಲವಕ್ಕೂ ನಾನು ಖುದ್ದು ಸಾಕ್ಷಿಯಾಗಿದ್ದೇನೆ. ಈ ದೈಹಿಕ ತಪಸ್ಸು, ಯಾತ್ರೆಯ ಸಂದೇಶವನ್ನು ಪ್ರಾಮಾಣಿಕವಾಗಿಸಿದೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಕಾಣಿಸದೇ ಇರುವ ಶ್ರದ್ಧೆಯನ್ನು ಸಾಮಾನ್ಯ ಜನರ ಮನಸ್ಸಿನಲ್ಲಿ ತುಂಬಿದೆ. ಪ್ರತಿದಿನ ಕಷ್ಟ ಸಹಿಸುವ ರೂಢಿಯು ಸ್ವತಃ ಯಾತ್ರಿಗಳನ್ನೂ ಒಳಗಿನಿಂದ ಬದಲಿಸಿದೆ, ಅವರನ್ನು ನಿಜವಾದ ಅರ್ಥದಲ್ಲಿ ಭಾರತ್ ಜೋಡೊದ ಸಂದೇಶವಾಹಕರನ್ನಾಗಿಸಿದೆ.

ಕಾಲ್ನಡಿಗೆಯ ಈ ಯಾತ್ರೆಯ ಜೊತೆಜೊತೆಗೇ ಒಂದು ವಿಚಾರದ ಯಾತ್ರೆಯೂ ನಡೆಯುತ್ತಲಿತ್ತು. ಸ್ವತಃ ರಾಹುಲ್ ಗಾಂಧಿ ಈ ವೈಚಾರಿಕ ಮಂಥನದ ಪ್ರಮುಖ ವಾಹಕ ಹಾಗೂ ಉದ್ಘೋಷಕರಾದರು. “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ಬಂದಿದ್ದೇನೆ”- ಈ ಮಾತಂತೂ ಒಂದು ಸಿನೆಮಾ ಡಯಲಾಗ್‌ನಷ್ಟು ಜನಪ್ರಿಯವಾಗಿದೆ. ಶ್ರೀನಗರದಲ್ಲಿ ಅವರ ಸಮಾರೋಪ ಮಾತುಗಳು ಈ ಡಯಲಾಗ್‌ನ ತಾತ್ವಿಕತೆಯನ್ನು ಬಹಿರಂಗಪಡಿಸುತ್ತದೆ. ಇದನ್ನು ಗಂಗಾ-ಜಮುನಾ ಶಿಷ್ಟಾಚಾರ ಅಂದುಕೊಳ್ಳಿ ಅಥವಾ ಕಶ್ಮೀರಿಯತ್ ಅನ್ನಿ. ಬೇಕಾದರೆ ಸಂತರ ಪರಂಪರೆಯಿಂದ ನೋಡಿ ಕಲಿತುಕೊಳ್ಳಿ ಅಥವಾ ಮಹಾತ್ಮಾ ಗಾಂಧಿಯ ಪರಂಪರೆಯಿಂದಾಗಲೂ- ನಮ್ಮ ಸಾಂಸ್ಕೃತಿಕ ಪರಂಪರೆ ಜೋಡಿಸುವುದಾಗಿದೆಯೇ ಹೊರತು ಒಡೆಯುವುದಲ್ಲ. ನಮ್ಮ ಸಂವಿಧಾನದ ಪ್ರಸ್ತಾವನೆಯ ’ಬಂಧುತ್ವ’ವು ಇದೇ ತತ್ವವನ್ನು ಬರಹರೂಪದಲ್ಲಿ ಇಳಿಸಿದೆ. ತನ್ನ ಅಜ್ಜಿ ಮತ್ತು ತಂದೆಯ ಹತ್ಯೆ ಆದಾಗ ಬಂದ ದೂರವಾಣಿ ಕರೆಗಳನ್ನು ಉಲ್ಲೇಖಿಸುತ್ತ ರಾಹುಲ್ ಗಾಂಧಿ ಮಾರ್ಮಿಕವಾಗಿ ಈ ಯಾತ್ರೆಯ ಉದ್ದೇಶವನ್ನು ತಿಳಿಸಿದ್ದಾರೆ: ಇನ್ನು ಮುಂದೆ ಯಾವುದೇ ಮಗುವಿಗೆ ಇಂತಹ ದೂರವಾಣಿ ಕರೆಗಳು ಬರದೇ ಇರಲಿ ಎಂಬುದಕ್ಕೇ ಈ ಯಾತ್ರೆ. ದ್ವೇಷ, ಹಿಂಸೆ ಹಾಗೂ ಆತಂಕದ ರಾಜಕೀಯದ ವಿರುದ್ಧದ ಆಳವಾದ ಹೇಳಿಕೆ ಇದಾಗಿದೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ಸ್ನೇಹದ ಈ ಭಾವನೆಯ ಜೊತೆಜೊತೆಗೆ ಭಾರತ ಜೋಡೊ ಯಾತ್ರೆಯು ಸಮಾನತೆಯ ತತ್ವವನ್ನೂ ಪದೇ ಪದೇ ಸ್ಪಷ್ಟಪಡಿಸಿದೆ. ದೀರ್ಘ ಸಮಯದ ನಂತರ ದೇಶದಲ್ಲಿ ಹೆಚ್ಚುತ್ತಿರುವ ವಿಷಮತೆಯ ಬಗ್ಗೆ ರಾಜಕೀಯ ಮುಖ್ಯವಾಹಿನಿಯಲ್ಲಿ ಕಾಳಜಿ ವ್ಯಕ್ತಪಡಿಸಲಾಗಿದೆ. ಬಹುಶಃ ಮೊದಲ ಬಾರಿ ಒಂದು ದೊಡ್ಡ ಪಕ್ಷದ ನಾಯಕನೊಬ್ಬ ಅದಾನಿ ಹಾಗೂ ಅಂಬಾನಿಯ ಹೆಸರನ್ನು ಎತ್ತುವ ಧೈರ್ಯ ತೋರಿಸಿದ್ದಾರೆ. ದಲಿತ, ಆದಿವಾಸಿ ಹಾಗೂ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕಾಳಜಿಯು ತೋರಿಕೆಯ ಮಾತು ಅಥವಾ ಜುಮ್ಲೆಬಾಜಿಯನ್ನು ಮೀರಿ ಕೆಲವು ಗಟ್ಟಿಯಾದ ಕಾಂಕ್ರೀಟ್ ಪ್ರಸ್ತಾಪಗಳಲ್ಲಿ ವ್ಯಕ್ತಗೊಂಡಿದೆ. ಮಹಿಳೆಯರ ಮತ್ತು ಲೈಂಗಿಕ ಭೇದಭಾವದ ಬಲಿಪಶುಗಳಾದ ಎಲ್ಲಾ ವರ್ಗಗಳ ನೋವು ಪ್ರತಿಯೊಂದು ಹೆಜ್ಜೆಯಲ್ಲಿ ದಾಖಲಿಸಲಾಗಿದೆ. ನೋವಿನಿಂದ ನೋವಿನ ಸಂಬಂಧ ಬೆಸೆದ ಈ ವಿಚಾರ ಯಾತ್ರೆಯು ಒಂದು ವೈಚಾರಿಕ ದಿಕ್ಕು ನೀಡುವ ಕೆಲಸವನ್ನು ಮಾಡಿದೆ. ಈ ದಿಕ್ಕು ಅತ್ಯಂತ ಹೊಸದು ಅಥವಾ ವಿಶಿಷ್ಟ ಅಂತೇನೂ ಅಲ್ಲ. ಇದು ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಸ್ವಧರ್ಮಕ್ಕೆ ಒಂದು ಹೊಸ ಸಂದರ್ಭ ತೋರಿಸಿದೆ.

ದೇಹ ಮತ್ತು ವಿಚಾರದ ಯಾತ್ರೆಯಿಂದಲೂ ಮುಂದೆ ಹೋಗಿ ಭಾರತ ಜೋಡೊ ಯಾತ್ರೆಯು ಆಧ್ಯಾತ್ಮಿಕ ಯಾತ್ರೆಯೂ ಆಗಿತ್ತು. ಪಾದಯಾತ್ರೆಯು ಮನಸ್ಸಿನ ಸಾಧನೆಯ ಅತ್ಯುತ್ತಮ ಸಹಜ ಮಾರ್ಗವಾಗಿದೆ. ಈ ಯಾತ್ರೆಯು ದೇಶದಲ್ಲಿ ಆವರಿಸಿದ ನಿರಾಸೆ, ಅಸಹಾಯಕತೆ ಮತ್ತು ಒಬ್ಬಂಟಿತನದ ಭಾವನೆಯನ್ನು ಒಡೆದುಹಾಕಿದೆ. ಸುಳ್ಳು ಮತ್ತು ದ್ವೇಷದ ವಿರುದ್ಧ ಶಸ್ತ್ರತ್ಯಾಗ ಮಾಡಿದ ನಾಗರಿಕರಿಗೆ ಇನ್ನೊಮ್ಮೆ ಧೈರ್ಯ ತುಂಬಿದೆ. “ಹೆದರಬೇಡಿ” ಎಂಬ ಸರಳ ಮಂತ್ರವು ಕೋಟ್ಯಂತರ ಭಾರತೀಯರ ಮನದಲ್ಲಿ ಶಕ್ತಿ ತುಂಬಿದೆ. ಕಾಶ್ಮೀರ ಕಣಿವೆಯಲ್ಲಿ ಸಿಕ್ಕ ಅಪಾರ ಸ್ನೇಹವು, ಈ ದೇಶದಲ್ಲಿ ಹೊಸ ಭರವಸೆಯ ಸಂಚಲನವನ್ನು ಸಾಧ್ಯವಾಗಿಸಿತು ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಇದು ಕೇವಲ ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ಪಕ್ಷಕ್ಕಲ್ಲದೇ ಭಾರತಕ್ಕೂ ಒಂದು ಒಳ್ಳೆಯ ಸುದ್ದಿ. ನಂಬಿಕೆ, ನಿರೀಕ್ಷೆಯ ಮೇಲೆಯೇ ಈ ಜಗತ್ತು ಉಳಿದುಕೊಂಡಿದೆ ಎನ್ನಲಾಗುತ್ತದೆ; ಯಾವುದೇ ಸಮಾಜಕ್ಕೆ ಈ ನಂಬಿಕೆ ಎಲ್ಲಕ್ಕಿಂತ ದೊಡ್ಡ ಬಂಡವಾಳ.

ನಂಬಿಕೆಯ/ಆಸೆಯ ದೀಪ ಬೆಳಗಿಸುವುದು ದೊಡ್ಡ ಕೆಲಸವೇ ಸರಿ. ಆದರೆ ಅದಕ್ಕಿಂತ ದೊಡ್ಡ ಕೆಲಸ ಆ ನಂಬಿಕೆಯನ್ನು ಜೀವಂತವಾಗಿಟ್ಟುಕೊಳ್ಳುವುದು. ಈ ನಿಟ್ಟಿನಲ್ಲಿ ಭಾರತ ಜೋಡೊದ ಈ ಅಭೂತಪೂರ್ವ ಯಶಸ್ಸು ಈ ಯಾತ್ರೆಯೊಂದಿಗೆ ಸಂಬಂಧಿಸಿದ ಪ್ರತಿಯೊಬ್ಬ ಭಾರತೀಯರ ಹೆಗಲಿನ ಮೇಲೆ ದೊಡ್ಡ ಜವಾಬ್ದಾರಿಯನ್ನು ಹಾಕಿದೆ. ಈ ಯಾತ್ರೆಯು ಬಂಜರು ಭೂಮಿಯಲ್ಲಿ ನೇಗಿಲನ್ನು ಎಳೆದಿದೆ; ಆದರೆ ಈಗ ಜವಾಬ್ದಾರಿ ಇರುವುದು ಇದರಲ್ಲಿ ಬೀಜ ಬಿತ್ತುವುದು ಹಾಗೂ ನೀರು ಗೊಬ್ಬರ ಎರೆಯುವುದು. ದೇಶದ ಪ್ರತಿಯೊಂದು ಬಾಗಿಲ ಮೇಲೆ ಈ ವಿಚಾರ ತಟ್ಟುವವರೆಗೆ, ದೇಶದ ಪ್ರತಿಯೊಂದು ಹೃದಯವನ್ನು ಮುಟ್ಟುವ ತನಕ ಈ ಯಾತ್ರೆಯ ಉದ್ದೇಶ ಸಫಲವಾಗುವುದಿಲ್ಲ. ಯಾವತ್ತು ಪ್ರತಿಯೊಬ್ಬ ಭಾರತೀಯ ಸುಳ್ಳನ್ನು ಸುಳ್ಳು ಎಂದು ಹೇಳಲು ಕಲಿಯುವಳೋ/ನೋ ಹಾಗೂ ದ್ವೇಷವನ್ನು ತಿರಸ್ಕರಿಸುತ್ತಾಳೋ/ನೋ ಅಂದು ಭಾರತ ಜೋಡೊ ಯಾತ್ರೆ ಸಫಲವಾಗುವುದು. ಈ ನಿಟ್ಟಿನಲ್ಲಿ ಶ್ರೀನಗರದಲ್ಲಿ ಈ ಯಾತ್ರೆ ಮುಕ್ತಾಯಗೊಂಡಿಲ್ಲ, ಬದಲಿಗೆ ನಿಜವಾದ ಅರ್ಥದಲ್ಲಿ ಭಾರತವನ್ನು ತನ್ನ ಸ್ವಧರ್ಮದೊಂದಿಗೆ ಪುನಃ ಜೋಡಿಸುವ ಯಾತ್ರೆಯನ್ನು ಪ್ರಾರಂಭಿಸಿದೆ.

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ರಾಜಕೀಯ ಚಿಂತಕರು. ಸ್ವರಾಜ್ ಇಂಡಿಯಾದ ಸಂಸ್ಥಾಪಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...