Homeಮುಖಪುಟದೈಹಿಕ ತಪಸ್ಸು, ಮನದ ಸಾಧನೆ ಹಾಗೂ ವೈಚಾರಿಕ ಮಂಥನದ ಯಾತ್ರೆ

ದೈಹಿಕ ತಪಸ್ಸು, ಮನದ ಸಾಧನೆ ಹಾಗೂ ವೈಚಾರಿಕ ಮಂಥನದ ಯಾತ್ರೆ

- Advertisement -
- Advertisement -

ಐದು ತಿಂಗಳವರೆಗೆ ದೇಶದ ರಸ್ತೆಗಳಲ್ಲಿ 3700 ಕಿಲೊಮೀಟರ್ ಅಳೆದು ಈ ಭಾರತ್ ಜೋಡೊ ಯಾತ್ರೆ ಸಾಧಿಸುವುದಾದರೂ ಏನು? 7ನೆಯ ಸೆಪ್ಟೆಂಬರ್‌ನಂದು ಕನ್ಯಾಕುಮಾರಿಯಿಂದ ಈ ಯಾತ್ರೆ ಶುರುವಾದಾಗ ಈ ಪ್ರಶ್ನೆ ಎಲ್ಲಾ ಯಾತ್ರಿಗಳ ಎದುರಿಗೆ ಕಾಣಿಸಿಕೊಂಡಿತ್ತು. ಆದರೆ ಗಾಂಧೀಜಿಯ ಪುಣ್ಯತಿಥಿಯ ದಿನದಂದು, ಜೋರಾಗಿ ಸುರಿಯುತ್ತಿರುವ ಹಿಮದ ನಡುವೆಯೇ ಶ್ರೀನಗರದಲ್ಲಿ ಈ ಯಾತ್ರೆ ಮುಕ್ತಾಯವಾದಾಗ ಅದಕ್ಕೆ ಉತ್ತರ ಸ್ಪಷ್ಟವಾಗಿತ್ತು.

ನಮ್ಮ ಪರಂಪರೆಯಲ್ಲಿ ಯಾವುದೇ ಯಾತ್ರೆ ಕೇವಲ ರಸ್ತೆ ಅಳೆಯಲು ಅಥವಾ ಪಿಕ್ನಿಕ್‌ಗಾಗಿ ಅಥವಾ ಕಸರತ್ತು ಮಾಡಲು ಆಗಿರುವುದಿಲ್ಲ. ಗೌತಮ ಬುದ್ಧನಿಂದ ಹಿಡಿದು ಮಹಾತ್ಮ ಗಾಂಧಿಯ ತನಕ ಎಲ್ಲಾ ಯಾತ್ರೆಗಳು ಶರೀರವನ್ನು ದಂಡಿಸುವುದಕ್ಕಿಂತ ಹೆಚ್ಚಾಗಿ ವಿಚಾರದ ಹಾಗೂ ಮಾನಸ ಯಾತ್ರೆಗಳಾಗಿವೆ. ಶರೀರದ ಚಲನೆಯು ದೇಶ ಮತ್ತು ಸಮಾಜವನ್ನು ಅಲುಗಾಡಿಸುವ ಮಾಧ್ಯಮವಾಗಿರುತ್ತದೆ. ಭಾರತ ಜೋಡೊ ಯಾತ್ರೆಯ ಉದ್ದೇಶವೂ ಇದೇ ಆಗಿತ್ತು. ಇದು ಶಾರೀರಿಕ ತಪಸ್ಸಿನ ಮುಖಾಂತರ ವೈಚಾರಿಕ ಮಂಥನ ಹಾಗೂ ಮನಸ್ಸಿನ ಸಾಧನದ ಯಾತ್ರೆಯಾಗಿದೆ.

ಈ ಯಾತ್ರೆಯ ಶಾರೀರಿಕ ತಪಸ್ಸಿನ ಬಗೆ ಅರ್ಥಮಾಡಿಕೊಳ್ಳಲು ದೇಶಕ್ಕೆ ಇನ್ನೂ ಸಮಯ ಹಿಡಿಯಲಿದೆ. ಜನತೆಗೆ ರಾಹುಲ್ ಗಾಂಧಿಯ ಟಿ-ಶರ್ಟ್ ಅಂತೂ ಕಾಣಿಸಿತು, ಆದರೆ ಈ ಸಂಪೂರ್ಣ ಪರಿಶ್ರಮದ ಹಿಂದೆ ಲಕ್ಷಾಂತರ ಜನರ ತಪಸ್ಸು ಇನ್ನೂ ಕಣ್ಣಿಗೆ ಬಿದ್ದಿಲ್ಲ. ಪ್ರತಿ ದಿನ ಸುಮಾರು 20ರಿಂದ 25 ಕಿಲೋಮೀಟರ್ ಕಾಲ್ನಡಿಗೆ, ಎಲ್ಲಾ ರೀತಿಯ ಹವಾಮಾನವನ್ನು ಎದುರಿಸುವುದು ಹಾಗೂ ಎಲ್ಲಾ ರೀತಿಯ ಮನಸ್ಥಿತಿ ಮತ್ತು ಸನ್ನಿವೇಶಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು, ಇವೆಲ್ಲವೂ ಸಣ್ಣ ವಿಷಯಗಳೇನಲ್ಲ. ಈ ಯಾತ್ರೆಯು ದೇಶದ ಎಲ್ಲಾ ರೀತಿಯ ಪ್ರದೇಶಗಳನ್ನು ಹಾಗೂ ಎಲ್ಲಾ ರೀತಿಯ ಹವಾಮಾನಗಳನ್ನು ನೋಡಿದೆ. ಸುಡು ಬಿಸಿಲು, ಮೈಕೊರೆಯುವ ಚಳಿ, ಧಾರಾಕಾರ ಮಳೆ ಹಾಗೂ ಜೋರಾದ ಹಿಮಪಾತ. ಈ ಯಾತ್ರೆಯ ಒಬ್ಬ ಸಹಯಾತ್ರಿಯಾಗಿ, ಪ್ರತಿಯೊಬ್ಬ ಯಾತ್ರಿಯ ಪಾದಗಳಲ್ಲಿ ಗುಳ್ಳೆಗಳು, ಎಲ್ಲಾ ರೀತಿಯ ರೋಗಗಳು, ಎಲುಬು ಕೊರೆಯುವ ಚಳಿಯ ನಡುವೆ ಉರುಳಿಹೋದ ಟೆಂಟ್‌ಗಳು- ಇವೆಲ್ಲವಕ್ಕೂ ನಾನು ಖುದ್ದು ಸಾಕ್ಷಿಯಾಗಿದ್ದೇನೆ. ಈ ದೈಹಿಕ ತಪಸ್ಸು, ಯಾತ್ರೆಯ ಸಂದೇಶವನ್ನು ಪ್ರಾಮಾಣಿಕವಾಗಿಸಿದೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಕಾಣಿಸದೇ ಇರುವ ಶ್ರದ್ಧೆಯನ್ನು ಸಾಮಾನ್ಯ ಜನರ ಮನಸ್ಸಿನಲ್ಲಿ ತುಂಬಿದೆ. ಪ್ರತಿದಿನ ಕಷ್ಟ ಸಹಿಸುವ ರೂಢಿಯು ಸ್ವತಃ ಯಾತ್ರಿಗಳನ್ನೂ ಒಳಗಿನಿಂದ ಬದಲಿಸಿದೆ, ಅವರನ್ನು ನಿಜವಾದ ಅರ್ಥದಲ್ಲಿ ಭಾರತ್ ಜೋಡೊದ ಸಂದೇಶವಾಹಕರನ್ನಾಗಿಸಿದೆ.

ಕಾಲ್ನಡಿಗೆಯ ಈ ಯಾತ್ರೆಯ ಜೊತೆಜೊತೆಗೇ ಒಂದು ವಿಚಾರದ ಯಾತ್ರೆಯೂ ನಡೆಯುತ್ತಲಿತ್ತು. ಸ್ವತಃ ರಾಹುಲ್ ಗಾಂಧಿ ಈ ವೈಚಾರಿಕ ಮಂಥನದ ಪ್ರಮುಖ ವಾಹಕ ಹಾಗೂ ಉದ್ಘೋಷಕರಾದರು. “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ಬಂದಿದ್ದೇನೆ”- ಈ ಮಾತಂತೂ ಒಂದು ಸಿನೆಮಾ ಡಯಲಾಗ್‌ನಷ್ಟು ಜನಪ್ರಿಯವಾಗಿದೆ. ಶ್ರೀನಗರದಲ್ಲಿ ಅವರ ಸಮಾರೋಪ ಮಾತುಗಳು ಈ ಡಯಲಾಗ್‌ನ ತಾತ್ವಿಕತೆಯನ್ನು ಬಹಿರಂಗಪಡಿಸುತ್ತದೆ. ಇದನ್ನು ಗಂಗಾ-ಜಮುನಾ ಶಿಷ್ಟಾಚಾರ ಅಂದುಕೊಳ್ಳಿ ಅಥವಾ ಕಶ್ಮೀರಿಯತ್ ಅನ್ನಿ. ಬೇಕಾದರೆ ಸಂತರ ಪರಂಪರೆಯಿಂದ ನೋಡಿ ಕಲಿತುಕೊಳ್ಳಿ ಅಥವಾ ಮಹಾತ್ಮಾ ಗಾಂಧಿಯ ಪರಂಪರೆಯಿಂದಾಗಲೂ- ನಮ್ಮ ಸಾಂಸ್ಕೃತಿಕ ಪರಂಪರೆ ಜೋಡಿಸುವುದಾಗಿದೆಯೇ ಹೊರತು ಒಡೆಯುವುದಲ್ಲ. ನಮ್ಮ ಸಂವಿಧಾನದ ಪ್ರಸ್ತಾವನೆಯ ’ಬಂಧುತ್ವ’ವು ಇದೇ ತತ್ವವನ್ನು ಬರಹರೂಪದಲ್ಲಿ ಇಳಿಸಿದೆ. ತನ್ನ ಅಜ್ಜಿ ಮತ್ತು ತಂದೆಯ ಹತ್ಯೆ ಆದಾಗ ಬಂದ ದೂರವಾಣಿ ಕರೆಗಳನ್ನು ಉಲ್ಲೇಖಿಸುತ್ತ ರಾಹುಲ್ ಗಾಂಧಿ ಮಾರ್ಮಿಕವಾಗಿ ಈ ಯಾತ್ರೆಯ ಉದ್ದೇಶವನ್ನು ತಿಳಿಸಿದ್ದಾರೆ: ಇನ್ನು ಮುಂದೆ ಯಾವುದೇ ಮಗುವಿಗೆ ಇಂತಹ ದೂರವಾಣಿ ಕರೆಗಳು ಬರದೇ ಇರಲಿ ಎಂಬುದಕ್ಕೇ ಈ ಯಾತ್ರೆ. ದ್ವೇಷ, ಹಿಂಸೆ ಹಾಗೂ ಆತಂಕದ ರಾಜಕೀಯದ ವಿರುದ್ಧದ ಆಳವಾದ ಹೇಳಿಕೆ ಇದಾಗಿದೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ಸ್ನೇಹದ ಈ ಭಾವನೆಯ ಜೊತೆಜೊತೆಗೆ ಭಾರತ ಜೋಡೊ ಯಾತ್ರೆಯು ಸಮಾನತೆಯ ತತ್ವವನ್ನೂ ಪದೇ ಪದೇ ಸ್ಪಷ್ಟಪಡಿಸಿದೆ. ದೀರ್ಘ ಸಮಯದ ನಂತರ ದೇಶದಲ್ಲಿ ಹೆಚ್ಚುತ್ತಿರುವ ವಿಷಮತೆಯ ಬಗ್ಗೆ ರಾಜಕೀಯ ಮುಖ್ಯವಾಹಿನಿಯಲ್ಲಿ ಕಾಳಜಿ ವ್ಯಕ್ತಪಡಿಸಲಾಗಿದೆ. ಬಹುಶಃ ಮೊದಲ ಬಾರಿ ಒಂದು ದೊಡ್ಡ ಪಕ್ಷದ ನಾಯಕನೊಬ್ಬ ಅದಾನಿ ಹಾಗೂ ಅಂಬಾನಿಯ ಹೆಸರನ್ನು ಎತ್ತುವ ಧೈರ್ಯ ತೋರಿಸಿದ್ದಾರೆ. ದಲಿತ, ಆದಿವಾಸಿ ಹಾಗೂ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕಾಳಜಿಯು ತೋರಿಕೆಯ ಮಾತು ಅಥವಾ ಜುಮ್ಲೆಬಾಜಿಯನ್ನು ಮೀರಿ ಕೆಲವು ಗಟ್ಟಿಯಾದ ಕಾಂಕ್ರೀಟ್ ಪ್ರಸ್ತಾಪಗಳಲ್ಲಿ ವ್ಯಕ್ತಗೊಂಡಿದೆ. ಮಹಿಳೆಯರ ಮತ್ತು ಲೈಂಗಿಕ ಭೇದಭಾವದ ಬಲಿಪಶುಗಳಾದ ಎಲ್ಲಾ ವರ್ಗಗಳ ನೋವು ಪ್ರತಿಯೊಂದು ಹೆಜ್ಜೆಯಲ್ಲಿ ದಾಖಲಿಸಲಾಗಿದೆ. ನೋವಿನಿಂದ ನೋವಿನ ಸಂಬಂಧ ಬೆಸೆದ ಈ ವಿಚಾರ ಯಾತ್ರೆಯು ಒಂದು ವೈಚಾರಿಕ ದಿಕ್ಕು ನೀಡುವ ಕೆಲಸವನ್ನು ಮಾಡಿದೆ. ಈ ದಿಕ್ಕು ಅತ್ಯಂತ ಹೊಸದು ಅಥವಾ ವಿಶಿಷ್ಟ ಅಂತೇನೂ ಅಲ್ಲ. ಇದು ನಮ್ಮ ಸಂವಿಧಾನದಲ್ಲಿ ಅಂತರ್ಗತವಾದ ಸ್ವಧರ್ಮಕ್ಕೆ ಒಂದು ಹೊಸ ಸಂದರ್ಭ ತೋರಿಸಿದೆ.

ದೇಹ ಮತ್ತು ವಿಚಾರದ ಯಾತ್ರೆಯಿಂದಲೂ ಮುಂದೆ ಹೋಗಿ ಭಾರತ ಜೋಡೊ ಯಾತ್ರೆಯು ಆಧ್ಯಾತ್ಮಿಕ ಯಾತ್ರೆಯೂ ಆಗಿತ್ತು. ಪಾದಯಾತ್ರೆಯು ಮನಸ್ಸಿನ ಸಾಧನೆಯ ಅತ್ಯುತ್ತಮ ಸಹಜ ಮಾರ್ಗವಾಗಿದೆ. ಈ ಯಾತ್ರೆಯು ದೇಶದಲ್ಲಿ ಆವರಿಸಿದ ನಿರಾಸೆ, ಅಸಹಾಯಕತೆ ಮತ್ತು ಒಬ್ಬಂಟಿತನದ ಭಾವನೆಯನ್ನು ಒಡೆದುಹಾಕಿದೆ. ಸುಳ್ಳು ಮತ್ತು ದ್ವೇಷದ ವಿರುದ್ಧ ಶಸ್ತ್ರತ್ಯಾಗ ಮಾಡಿದ ನಾಗರಿಕರಿಗೆ ಇನ್ನೊಮ್ಮೆ ಧೈರ್ಯ ತುಂಬಿದೆ. “ಹೆದರಬೇಡಿ” ಎಂಬ ಸರಳ ಮಂತ್ರವು ಕೋಟ್ಯಂತರ ಭಾರತೀಯರ ಮನದಲ್ಲಿ ಶಕ್ತಿ ತುಂಬಿದೆ. ಕಾಶ್ಮೀರ ಕಣಿವೆಯಲ್ಲಿ ಸಿಕ್ಕ ಅಪಾರ ಸ್ನೇಹವು, ಈ ದೇಶದಲ್ಲಿ ಹೊಸ ಭರವಸೆಯ ಸಂಚಲನವನ್ನು ಸಾಧ್ಯವಾಗಿಸಿತು ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಇದು ಕೇವಲ ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ಪಕ್ಷಕ್ಕಲ್ಲದೇ ಭಾರತಕ್ಕೂ ಒಂದು ಒಳ್ಳೆಯ ಸುದ್ದಿ. ನಂಬಿಕೆ, ನಿರೀಕ್ಷೆಯ ಮೇಲೆಯೇ ಈ ಜಗತ್ತು ಉಳಿದುಕೊಂಡಿದೆ ಎನ್ನಲಾಗುತ್ತದೆ; ಯಾವುದೇ ಸಮಾಜಕ್ಕೆ ಈ ನಂಬಿಕೆ ಎಲ್ಲಕ್ಕಿಂತ ದೊಡ್ಡ ಬಂಡವಾಳ.

ನಂಬಿಕೆಯ/ಆಸೆಯ ದೀಪ ಬೆಳಗಿಸುವುದು ದೊಡ್ಡ ಕೆಲಸವೇ ಸರಿ. ಆದರೆ ಅದಕ್ಕಿಂತ ದೊಡ್ಡ ಕೆಲಸ ಆ ನಂಬಿಕೆಯನ್ನು ಜೀವಂತವಾಗಿಟ್ಟುಕೊಳ್ಳುವುದು. ಈ ನಿಟ್ಟಿನಲ್ಲಿ ಭಾರತ ಜೋಡೊದ ಈ ಅಭೂತಪೂರ್ವ ಯಶಸ್ಸು ಈ ಯಾತ್ರೆಯೊಂದಿಗೆ ಸಂಬಂಧಿಸಿದ ಪ್ರತಿಯೊಬ್ಬ ಭಾರತೀಯರ ಹೆಗಲಿನ ಮೇಲೆ ದೊಡ್ಡ ಜವಾಬ್ದಾರಿಯನ್ನು ಹಾಕಿದೆ. ಈ ಯಾತ್ರೆಯು ಬಂಜರು ಭೂಮಿಯಲ್ಲಿ ನೇಗಿಲನ್ನು ಎಳೆದಿದೆ; ಆದರೆ ಈಗ ಜವಾಬ್ದಾರಿ ಇರುವುದು ಇದರಲ್ಲಿ ಬೀಜ ಬಿತ್ತುವುದು ಹಾಗೂ ನೀರು ಗೊಬ್ಬರ ಎರೆಯುವುದು. ದೇಶದ ಪ್ರತಿಯೊಂದು ಬಾಗಿಲ ಮೇಲೆ ಈ ವಿಚಾರ ತಟ್ಟುವವರೆಗೆ, ದೇಶದ ಪ್ರತಿಯೊಂದು ಹೃದಯವನ್ನು ಮುಟ್ಟುವ ತನಕ ಈ ಯಾತ್ರೆಯ ಉದ್ದೇಶ ಸಫಲವಾಗುವುದಿಲ್ಲ. ಯಾವತ್ತು ಪ್ರತಿಯೊಬ್ಬ ಭಾರತೀಯ ಸುಳ್ಳನ್ನು ಸುಳ್ಳು ಎಂದು ಹೇಳಲು ಕಲಿಯುವಳೋ/ನೋ ಹಾಗೂ ದ್ವೇಷವನ್ನು ತಿರಸ್ಕರಿಸುತ್ತಾಳೋ/ನೋ ಅಂದು ಭಾರತ ಜೋಡೊ ಯಾತ್ರೆ ಸಫಲವಾಗುವುದು. ಈ ನಿಟ್ಟಿನಲ್ಲಿ ಶ್ರೀನಗರದಲ್ಲಿ ಈ ಯಾತ್ರೆ ಮುಕ್ತಾಯಗೊಂಡಿಲ್ಲ, ಬದಲಿಗೆ ನಿಜವಾದ ಅರ್ಥದಲ್ಲಿ ಭಾರತವನ್ನು ತನ್ನ ಸ್ವಧರ್ಮದೊಂದಿಗೆ ಪುನಃ ಜೋಡಿಸುವ ಯಾತ್ರೆಯನ್ನು ಪ್ರಾರಂಭಿಸಿದೆ.

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ರಾಜಕೀಯ ಚಿಂತಕರು. ಸ್ವರಾಜ್ ಇಂಡಿಯಾದ ಸಂಸ್ಥಾಪಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....