Homeಮುಖಪುಟಭಾರತ್ ಜೋಡೋ ನ್ಯಾಯ್ ಯಾತ್ರೆ: 'ಆಹ್ವಾನವಿಲ್ಲ' ಎಂಬ ಅಖಿಲೇಶ್ ಆರೋಪಕ್ಕೆ ಕಾಂಗ್ರೆಸ್‌ ಪ್ರತಿಕ್ರಿಯೆ

ಭಾರತ್ ಜೋಡೋ ನ್ಯಾಯ್ ಯಾತ್ರೆ: ‘ಆಹ್ವಾನವಿಲ್ಲ’ ಎಂಬ ಅಖಿಲೇಶ್ ಆರೋಪಕ್ಕೆ ಕಾಂಗ್ರೆಸ್‌ ಪ್ರತಿಕ್ರಿಯೆ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಕುರಿತು ವಿರೋಧ ಪಕ್ಷಗಳು ಆಂತರಿಕ ಸವಾಲುಗಳನ್ನು ಎದುರಿಸುತ್ತಿರುವಾಗಲೇ, ‘ಇಂಡಿಯಾ’ ಬ್ಲಾಕ್ ಮೈತ್ರಿಕೂಟದ ಪ್ರಮುಖ ಪಾಲುದಾರರ ಪಕ್ಷವಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಉತ್ತರ ಪ್ರದೇಶದ ಕಾರ್ಯಕ್ರಮಗಳು ಇನ್ನೂ ಅಂತಿಮವಾಗಿಲ್ಲ ಎಂದು ಹೇಳಿದೆ.

ಯಾತ್ರೆಯು ಉತ್ತರ ಪ್ರದೇಶಕ್ಕೆ ಪ್ರವೇಶಿಸಿದಾಗ ತಾವು ಭಾಗವಹಿಸುವ ಬಗ್ಗೆ ಕೇಳಿದಾಗ, ‘ರಾಜ್ಯದಲ್ಲಿ ಹಲವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ, ನಮಗೆ ಆಹ್ವಾನವಿಲ್ಲ’ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆಯ ಮುಂದುವರಿದ ಭಾಗವು ಮಣಿಪುರದಿಂದ ಜನವರಿಯಲ್ಲಿ ಪ್ರಾರಂಭವಾಗಿದ್ದು, ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. ಪ್ರಸ್ತುತ ಯಾತ್ರೆಯು ಬಿಹಾರ ದಾಟಿ ಜಾರ್ಖಂಡ್‌ನಲ್ಲಿದೆ. ಈಗಾಗಲೇ ಐದು ರಾಜ್ಯಗಳಲ್ಲಿ ಯಾತ್ರೆ ಸಂಚರಿಸಿದೆ.

ಅಖಿಲೇಶ್ ಯಾದವ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಸ್ಪಷ್ಟನೆ ನೀಡಲು ಮುಂದಾಗಿದೆ. ಯಾತ್ರೆಯ ಮಾರ್ಗವು ಇನ್ನೂ ಅಂತಿಮಗೊಂಡಿಲ್ಲ, ಮೈತ್ರಿ ಪಾಲುದಾರರನ್ನು ಆಹ್ವಾನಿಸಲು ಪಕ್ಷ ಮುಕ್ತವಾಗಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

‘ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಗಾಗಿ ವಿವರವಾದ ಮಾರ್ಗ ಮತ್ತು ಕಾರ್ಯಕ್ರಮವನ್ನು ಸಿದ್ಧಪಡಿಸಲಾಗುತ್ತಿದೆ. ಒಂದು ಅಥವಾ ಎರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು’ ಎಂದು ಜೈರಾಮ್ ರಮೇಶ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ಅಂತಿಮವಾದ ನಂತರ, ಕಾರ್ಯಕ್ರಮದ ವಿವರಗಳನ್ನು ಇಂಡಿಯಾ ಮೈತ್ರಿಕೂಟದ ಘಟಕ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುವುದು. ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಅಖಿಲೇಶ್ ಅವರ ಭಾಗವಹಿಸುವಿಕೆಯು ಇಂಡಿಯಾ ಮೈತ್ರಿಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಪಕ್ಷದ ಸಂವಹನ ಉಸ್ತುವಾರಿ ರಮೇಶ್ ಹೇಳಿದ್ದಾರೆ. ಯಾತ್ರೆಯು ಫೆಬ್ರವರಿ 16 ರ ಮಧ್ಯಾಹ್ನ ಯುಪಿ ಪ್ರವೇಶಿಸುವ ನಿರೀಕ್ಷೆಯಿದೆ.

‘ಇಂಡಿಯಾ ಬ್ಲಾಕ್‌ನಲ್ಲಿ ಎಲ್ಲವೂ ಸರಿಯಿಲ್ಲ’

ಜನತಾ ದಳ (ಯುನೈಟೆಡ್) ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರುಸೇರ್ಪಡೆಯಾದ ನಂತರ ಇಂಡಿಯಾ ಬಣವನ್ನು ಬಲಪಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿರುವಾಗ, ಎರಡು ನಿರ್ಣಾಯಕ ಮಿತ್ರಪಕ್ಷಗಳಾದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮೈತ್ರಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿವೆ. ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ ಎದು ಹೇಳಿವೆ.

ಈ ಬೆಳವಣಿಗೆಗಳ ನಡುವೆಯೆ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ 14 ರಂದು ಮಣಿಪುರದ ತೌಬಲ್‌ನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿತು, 110 ಜಿಲ್ಲೆಗಳಾದ್ಯಂತ 6,700 ಕಿಲೋಮೀಟರ್‌ಗಳನ್ನು ಒಳಗೊಂಡಿದೆ.

67 ದಿನಗಳ ಕಾಲ 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ತಲುಪುವ ಈ ಯಾತ್ರೆಯು ಹಿಂದಿನ ‘ಭಾರತ್ ಜೋಡೋ ಯಾತ್ರೆ’ಯನ್ನು ಅನುಸರಿಸುತ್ತದೆ. ಅಲ್ಲಿ ರಾಹುಲ್ ಗಾಂಧಿ 3,000 ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಕ್ರಮಿಸಿದರು.

ಇದನ್ನೂ ಓದಿ; ‘ಬಿಜೆಪಿ ಸೇರಿದರೆ ತೊಂದರೆ ಕೊಡುವುದಿಲ್ಲ ಎಂದಿದ್ದಾರೆ; ನಾನು ಅವರಿಗೆ ತಲೆಬಾಗುವುದಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...