Homeಮುಖಪುಟಭಾರತ್ ಜೋಡೋ ನ್ಯಾಯ್ ಯಾತ್ರೆ: 'ಆಹ್ವಾನವಿಲ್ಲ' ಎಂಬ ಅಖಿಲೇಶ್ ಆರೋಪಕ್ಕೆ ಕಾಂಗ್ರೆಸ್‌ ಪ್ರತಿಕ್ರಿಯೆ

ಭಾರತ್ ಜೋಡೋ ನ್ಯಾಯ್ ಯಾತ್ರೆ: ‘ಆಹ್ವಾನವಿಲ್ಲ’ ಎಂಬ ಅಖಿಲೇಶ್ ಆರೋಪಕ್ಕೆ ಕಾಂಗ್ರೆಸ್‌ ಪ್ರತಿಕ್ರಿಯೆ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಕುರಿತು ವಿರೋಧ ಪಕ್ಷಗಳು ಆಂತರಿಕ ಸವಾಲುಗಳನ್ನು ಎದುರಿಸುತ್ತಿರುವಾಗಲೇ, ‘ಇಂಡಿಯಾ’ ಬ್ಲಾಕ್ ಮೈತ್ರಿಕೂಟದ ಪ್ರಮುಖ ಪಾಲುದಾರರ ಪಕ್ಷವಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಉತ್ತರ ಪ್ರದೇಶದ ಕಾರ್ಯಕ್ರಮಗಳು ಇನ್ನೂ ಅಂತಿಮವಾಗಿಲ್ಲ ಎಂದು ಹೇಳಿದೆ.

ಯಾತ್ರೆಯು ಉತ್ತರ ಪ್ರದೇಶಕ್ಕೆ ಪ್ರವೇಶಿಸಿದಾಗ ತಾವು ಭಾಗವಹಿಸುವ ಬಗ್ಗೆ ಕೇಳಿದಾಗ, ‘ರಾಜ್ಯದಲ್ಲಿ ಹಲವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ, ನಮಗೆ ಆಹ್ವಾನವಿಲ್ಲ’ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆಯ ಮುಂದುವರಿದ ಭಾಗವು ಮಣಿಪುರದಿಂದ ಜನವರಿಯಲ್ಲಿ ಪ್ರಾರಂಭವಾಗಿದ್ದು, ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. ಪ್ರಸ್ತುತ ಯಾತ್ರೆಯು ಬಿಹಾರ ದಾಟಿ ಜಾರ್ಖಂಡ್‌ನಲ್ಲಿದೆ. ಈಗಾಗಲೇ ಐದು ರಾಜ್ಯಗಳಲ್ಲಿ ಯಾತ್ರೆ ಸಂಚರಿಸಿದೆ.

ಅಖಿಲೇಶ್ ಯಾದವ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಸ್ಪಷ್ಟನೆ ನೀಡಲು ಮುಂದಾಗಿದೆ. ಯಾತ್ರೆಯ ಮಾರ್ಗವು ಇನ್ನೂ ಅಂತಿಮಗೊಂಡಿಲ್ಲ, ಮೈತ್ರಿ ಪಾಲುದಾರರನ್ನು ಆಹ್ವಾನಿಸಲು ಪಕ್ಷ ಮುಕ್ತವಾಗಿದೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

‘ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಗಾಗಿ ವಿವರವಾದ ಮಾರ್ಗ ಮತ್ತು ಕಾರ್ಯಕ್ರಮವನ್ನು ಸಿದ್ಧಪಡಿಸಲಾಗುತ್ತಿದೆ. ಒಂದು ಅಥವಾ ಎರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು’ ಎಂದು ಜೈರಾಮ್ ರಮೇಶ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ಅಂತಿಮವಾದ ನಂತರ, ಕಾರ್ಯಕ್ರಮದ ವಿವರಗಳನ್ನು ಇಂಡಿಯಾ ಮೈತ್ರಿಕೂಟದ ಘಟಕ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುವುದು. ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಅಖಿಲೇಶ್ ಅವರ ಭಾಗವಹಿಸುವಿಕೆಯು ಇಂಡಿಯಾ ಮೈತ್ರಿಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಪಕ್ಷದ ಸಂವಹನ ಉಸ್ತುವಾರಿ ರಮೇಶ್ ಹೇಳಿದ್ದಾರೆ. ಯಾತ್ರೆಯು ಫೆಬ್ರವರಿ 16 ರ ಮಧ್ಯಾಹ್ನ ಯುಪಿ ಪ್ರವೇಶಿಸುವ ನಿರೀಕ್ಷೆಯಿದೆ.

‘ಇಂಡಿಯಾ ಬ್ಲಾಕ್‌ನಲ್ಲಿ ಎಲ್ಲವೂ ಸರಿಯಿಲ್ಲ’

ಜನತಾ ದಳ (ಯುನೈಟೆಡ್) ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರುಸೇರ್ಪಡೆಯಾದ ನಂತರ ಇಂಡಿಯಾ ಬಣವನ್ನು ಬಲಪಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿರುವಾಗ, ಎರಡು ನಿರ್ಣಾಯಕ ಮಿತ್ರಪಕ್ಷಗಳಾದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮೈತ್ರಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿವೆ. ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ ಎದು ಹೇಳಿವೆ.

ಈ ಬೆಳವಣಿಗೆಗಳ ನಡುವೆಯೆ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ 14 ರಂದು ಮಣಿಪುರದ ತೌಬಲ್‌ನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿತು, 110 ಜಿಲ್ಲೆಗಳಾದ್ಯಂತ 6,700 ಕಿಲೋಮೀಟರ್‌ಗಳನ್ನು ಒಳಗೊಂಡಿದೆ.

67 ದಿನಗಳ ಕಾಲ 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ತಲುಪುವ ಈ ಯಾತ್ರೆಯು ಹಿಂದಿನ ‘ಭಾರತ್ ಜೋಡೋ ಯಾತ್ರೆ’ಯನ್ನು ಅನುಸರಿಸುತ್ತದೆ. ಅಲ್ಲಿ ರಾಹುಲ್ ಗಾಂಧಿ 3,000 ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಕ್ರಮಿಸಿದರು.

ಇದನ್ನೂ ಓದಿ; ‘ಬಿಜೆಪಿ ಸೇರಿದರೆ ತೊಂದರೆ ಕೊಡುವುದಿಲ್ಲ ಎಂದಿದ್ದಾರೆ; ನಾನು ಅವರಿಗೆ ತಲೆಬಾಗುವುದಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...