Homeಮುಖಪುಟನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ: ರಾಹುಲ್ ಗಾಂಧಿ

ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಯಲಾಗಿದ್ದು, ಕೋಪೋದ್ರಿಕ್ತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬ್ಯಾರಿಕೇಡ್‌ಗಳನ್ನು ಮುರಿದು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಗುವಾಹಟಿಯ ಪ್ರಮುಖ ರಸ್ತೆಗಳ ಮೂಲಕ ಯಾತ್ರೆ ಚಲಿಸಲು ಅವಕಾಶ ನೀಡುವುದರಿಂದ ಸಂಚಾರ ದಟ್ಟಣೆಗೆ ಕಾರಣವಾಗಬಹುದು ಎಂದು ವಾದಿಸಿ, ರಾಜ್ಯ ಆಡಳಿತವು ಯಾತ್ರೆಯು ಕೆಳ ಅಸ್ಸಾಂ ಕಡೆಗೆ ಚಲಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದೆ. ನಗರದ ಸುತ್ತ ವರ್ತುಲ ರಸ್ತೆಯಂತೆ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ 27ರಲ್ಲಿ ಯಾತ್ರೆ ಕೈಗೊಳ್ಳುವಂತೆ ಕೋರಲಾಗಿದೆ.

ನಗರ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ ನಂತರ ಹೊರವಲಯದಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, ‘ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ’ ಎಂದು ಹೇಳಿದರು.

ಯಾತ್ರೆ ನಗರ ವ್ಯಾಪ್ತಿಗೆ ಬರದಂತೆ ಎರಡು ಕಡೆ ಬ್ಯಾರಿಕೇಡ್ ಹಾಕಿದ್ದ ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಬಲಪ್ರಯೋಗ ಮಾಡಬೇಕಾಯಿತು. ರಾಹುಲ್ ಗಾಂಧಿಯವರು ಗುವಾಹಟಿಯನ್ನು ಪ್ರವೇಶಿಸಲು ಪ್ರಯತ್ನಿಸಿದಾಗ. ದಾರಿಯುದ್ದಕ್ಕೂ ಅವರಿಗೆ ಸ್ವಾಗತವನ್ನು ನೀಡಲಾಯಿತು.

‘ನಾವು ದುರ್ಬಲರು ಎಂದು ನೀವು ಭಾವಿಸಬಾರದು. ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ’ ಎಂದು ಹೇಳಿದ ಅವರು, ತಮ್ಮ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು “ಬಬ್ಬರ್ ಶೇರ್” (ಸಿಂಹ) ಎಂದು ಕರೆದರು.

‘ಅವರು ವಿಶ್ವವಿದ್ಯಾನಿಲಯದಲ್ಲಿ ನನ್ನ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ, ನನ್ನ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಆದರೆ, ವಿದ್ಯಾರ್ಥಿಗಳು ನನ್ನ ಮಾತನ್ನು ಹೊರಗೆ ಕೇಳಿಸಿಕೊಂಡರು’ ಎಂದು ಅವರು ಹೇಳಿದರು.

‘ಕಾಂಗ್ರೆಸ್ ಕಾರ್ಯಕರ್ತರು ಯಾರಿಗೂ ಹೆದರುವುದಿಲ್ಲ’ ಎಂದ ಅವರು, ‘ಅಸ್ಸಾಂನಲ್ಲಿ ಬಿಜೆಪಿಯನ್ನು ಸೋಲಿಸಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ರಚಿಸುತ್ತೇವೆ’ ಪೊಲೀಸರು ತಮ್ಮ ಕೆಲಸವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.

‘ಪೊಲೀಸ್ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ, ಅವರು ಆದೇಶವನ್ನು ಪಾಲಿಸಿದ್ದಾರೆ ಎಂದು ನಮಗೆ ತಿಳಿದಿದೆ, ಒಬ್ಬ ವ್ಯಕ್ತಿ ಬಸ್‌ಗೆ ಮೊದಲು ಬಂದು ಮಲಗಿದ್ದಾನೆ. ನಾವು ನಿಮ್ಮ ವಿರುದ್ಧವಲ್ಲ, ನಾವು ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ವಿರುದ್ಧ. ನಮ್ಮ ಹೋರಾಟವು ಅವರೊಂದಿಗೆ ಇದೆ’ ಎಂದು ರಾಹುಲ್ ಗಾಂಧಿ ಹೇಳಿದರು.

‘ಬ್ಯಾರಿಕೇಡ್‌ಗಳನ್ನು ಮುರಿದಿದ್ದರಿಂದ ನಾವು ಗೆದ್ದಿದ್ದೇವೆ’ ಎಂದು ಅಸ್ಸಾಂನ ಎಐಸಿಸಿ ಉಸ್ತುವಾರಿ ಜಿತೇಂದ್ರ ಸಿಂಗ್ ಹೇಳಿದ್ದಾರೆ. ನಂತರ, ರಾಹುಲ್ ಗಾಂಧಿಯವರ ಯಾತ್ರೆ ರಿಂಗ್ ರಸ್ತೆಯಲ್ಲಿ ನಿಗದಿತ ಮಾರ್ಗದಿಂದ ತೆರಳಿತು.

ಸಂಚಾರ ದಟ್ಟಣೆ ತಪ್ಪಿಸಲು ಯಾತ್ರೆಯನ್ನು ನಗರಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು. ಸೋಮವಾರ ಮೇಘಾಲಯವನ್ನು ಪ್ರವೇಶಿಸಿದ ಯಾತ್ರೆ ತನ್ನ ಕೊನೆಯ ಹಂತಕ್ಕೆ ಅಸ್ಸಾಂಗೆ ಮರಳಿತು ಮತ್ತು ರಾಜ್ಯದ ಅತಿದೊಡ್ಡ ನಗರ ಗುವಾಹಟಿಯ ಹೊರವಲಯದಲ್ಲಿ ಪ್ರಯಾಣಿಸಲಿದೆ. ಗುರುವಾರದವರೆಗೆ ಯಾತ್ರೆ ಅಸ್ಸಾಂನಲ್ಲಿ ಸಂಚರಿಸಲಿದೆ.

ಇದನ್ನೂ ಓದಿ; ವಿದ್ಯಾರ್ಥಿಗಳನ್ನು ಭೇಟಿಯಾಗಲು ಬಿಜೆಪಿ ಸರ್ಕಾರ ನನಗೆ ಅವಕಾಶ ನೀಡ್ತಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...