Homeಮುಖಪುಟನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ: ರಾಹುಲ್ ಗಾಂಧಿ

ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ಗುವಾಹಟಿ ನಗರಕ್ಕೆ ಪ್ರವೇಶಿಸದಂತೆ ತಡೆಯಲಾಗಿದ್ದು, ಕೋಪೋದ್ರಿಕ್ತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬ್ಯಾರಿಕೇಡ್‌ಗಳನ್ನು ಮುರಿದು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಗುವಾಹಟಿಯ ಪ್ರಮುಖ ರಸ್ತೆಗಳ ಮೂಲಕ ಯಾತ್ರೆ ಚಲಿಸಲು ಅವಕಾಶ ನೀಡುವುದರಿಂದ ಸಂಚಾರ ದಟ್ಟಣೆಗೆ ಕಾರಣವಾಗಬಹುದು ಎಂದು ವಾದಿಸಿ, ರಾಜ್ಯ ಆಡಳಿತವು ಯಾತ್ರೆಯು ಕೆಳ ಅಸ್ಸಾಂ ಕಡೆಗೆ ಚಲಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದೆ. ನಗರದ ಸುತ್ತ ವರ್ತುಲ ರಸ್ತೆಯಂತೆ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ 27ರಲ್ಲಿ ಯಾತ್ರೆ ಕೈಗೊಳ್ಳುವಂತೆ ಕೋರಲಾಗಿದೆ.

ನಗರ ಪ್ರವೇಶಕ್ಕೆ ಅನುಮತಿ ನಿರಾಕರಿಸಿದ ನಂತರ ಹೊರವಲಯದಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, ‘ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ’ ಎಂದು ಹೇಳಿದರು.

ಯಾತ್ರೆ ನಗರ ವ್ಯಾಪ್ತಿಗೆ ಬರದಂತೆ ಎರಡು ಕಡೆ ಬ್ಯಾರಿಕೇಡ್ ಹಾಕಿದ್ದ ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಬಲಪ್ರಯೋಗ ಮಾಡಬೇಕಾಯಿತು. ರಾಹುಲ್ ಗಾಂಧಿಯವರು ಗುವಾಹಟಿಯನ್ನು ಪ್ರವೇಶಿಸಲು ಪ್ರಯತ್ನಿಸಿದಾಗ. ದಾರಿಯುದ್ದಕ್ಕೂ ಅವರಿಗೆ ಸ್ವಾಗತವನ್ನು ನೀಡಲಾಯಿತು.

‘ನಾವು ದುರ್ಬಲರು ಎಂದು ನೀವು ಭಾವಿಸಬಾರದು. ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ’ ಎಂದು ಹೇಳಿದ ಅವರು, ತಮ್ಮ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು “ಬಬ್ಬರ್ ಶೇರ್” (ಸಿಂಹ) ಎಂದು ಕರೆದರು.

‘ಅವರು ವಿಶ್ವವಿದ್ಯಾನಿಲಯದಲ್ಲಿ ನನ್ನ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ, ನನ್ನ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಆದರೆ, ವಿದ್ಯಾರ್ಥಿಗಳು ನನ್ನ ಮಾತನ್ನು ಹೊರಗೆ ಕೇಳಿಸಿಕೊಂಡರು’ ಎಂದು ಅವರು ಹೇಳಿದರು.

‘ಕಾಂಗ್ರೆಸ್ ಕಾರ್ಯಕರ್ತರು ಯಾರಿಗೂ ಹೆದರುವುದಿಲ್ಲ’ ಎಂದ ಅವರು, ‘ಅಸ್ಸಾಂನಲ್ಲಿ ಬಿಜೆಪಿಯನ್ನು ಸೋಲಿಸಿ ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ರಚಿಸುತ್ತೇವೆ’ ಪೊಲೀಸರು ತಮ್ಮ ಕೆಲಸವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.

‘ಪೊಲೀಸ್ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ, ಅವರು ಆದೇಶವನ್ನು ಪಾಲಿಸಿದ್ದಾರೆ ಎಂದು ನಮಗೆ ತಿಳಿದಿದೆ, ಒಬ್ಬ ವ್ಯಕ್ತಿ ಬಸ್‌ಗೆ ಮೊದಲು ಬಂದು ಮಲಗಿದ್ದಾನೆ. ನಾವು ನಿಮ್ಮ ವಿರುದ್ಧವಲ್ಲ, ನಾವು ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ವಿರುದ್ಧ. ನಮ್ಮ ಹೋರಾಟವು ಅವರೊಂದಿಗೆ ಇದೆ’ ಎಂದು ರಾಹುಲ್ ಗಾಂಧಿ ಹೇಳಿದರು.

‘ಬ್ಯಾರಿಕೇಡ್‌ಗಳನ್ನು ಮುರಿದಿದ್ದರಿಂದ ನಾವು ಗೆದ್ದಿದ್ದೇವೆ’ ಎಂದು ಅಸ್ಸಾಂನ ಎಐಸಿಸಿ ಉಸ್ತುವಾರಿ ಜಿತೇಂದ್ರ ಸಿಂಗ್ ಹೇಳಿದ್ದಾರೆ. ನಂತರ, ರಾಹುಲ್ ಗಾಂಧಿಯವರ ಯಾತ್ರೆ ರಿಂಗ್ ರಸ್ತೆಯಲ್ಲಿ ನಿಗದಿತ ಮಾರ್ಗದಿಂದ ತೆರಳಿತು.

ಸಂಚಾರ ದಟ್ಟಣೆ ತಪ್ಪಿಸಲು ಯಾತ್ರೆಯನ್ನು ನಗರಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಹಿಂದೆ ಹೇಳಿದ್ದರು. ಸೋಮವಾರ ಮೇಘಾಲಯವನ್ನು ಪ್ರವೇಶಿಸಿದ ಯಾತ್ರೆ ತನ್ನ ಕೊನೆಯ ಹಂತಕ್ಕೆ ಅಸ್ಸಾಂಗೆ ಮರಳಿತು ಮತ್ತು ರಾಜ್ಯದ ಅತಿದೊಡ್ಡ ನಗರ ಗುವಾಹಟಿಯ ಹೊರವಲಯದಲ್ಲಿ ಪ್ರಯಾಣಿಸಲಿದೆ. ಗುರುವಾರದವರೆಗೆ ಯಾತ್ರೆ ಅಸ್ಸಾಂನಲ್ಲಿ ಸಂಚರಿಸಲಿದೆ.

ಇದನ್ನೂ ಓದಿ; ವಿದ್ಯಾರ್ಥಿಗಳನ್ನು ಭೇಟಿಯಾಗಲು ಬಿಜೆಪಿ ಸರ್ಕಾರ ನನಗೆ ಅವಕಾಶ ನೀಡ್ತಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...