Homeಮುಖಪುಟಪ್ರಯಾಗರಾಜ್ ತಲುಪಿದ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ನ್ಯಾಯ್ ಯಾತ್ರೆ'

ಪ್ರಯಾಗರಾಜ್ ತಲುಪಿದ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಭಾನುವಾರ ಸಂಜೆ 4.00 ರ ಸುಮಾರಿಗೆ ಉತ್ತರ ಪ್ರದೇಶದ ಪ್ರಯಾಗ್ರಾಜ್ ತಲುಪಿತು. ರಾಹುಲ್ ಗಾಂಧಿ, ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಮತ್ತು ಇತರ ಪಕ್ಷದ ನಾಯಕರು ಯಾತ್ರೆಯ ವೇಳೆ ತೆರೆದ ಜೀಪಿನಲ್ಲಿ ಚಲಿಸಿದರು.

ವಿಮಾನ ನಿಲ್ದಾಣದಿಂದ ನೇರವಾಗಿ ಸ್ವರಾಜ್ ಭವನ ತಲುಪಿದ ರಾಹುಲ್ ಗಾಂಧಿ, ಅಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದರು. ಯಾತ್ರೆಯು ನೇತ್ರಂ ಚೌರಾಹಾದ ಮೂಲಕ ಸಾಗಿ ಲಕ್ಷ್ಮಿ ಟಾಕೀಸ್ ತಲುಪಲಿದ್ದು, ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದು, ಇದಾದ ಬಳಿಕ ಯಾತ್ರೆ ಮುಂದುವರಿಯಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದರು.

ಆನೆ ದಾಳಿ ಸಂತ್ರದಸ್ತರನ್ನು ಭೇಟಿಯಾಗಲು ವಯನಾಡ್‌ಗೆ ತೆರಳಿದ್ದ ರಾಹುಲ್ ಗಾಂಧಿ, ಇಂದು ಪ್ರಯಾಗ್‌ರಾಜ್‌ನ ‘ಆನಂದ ಭವನ’ದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.

ವಯನಾಡಿನಲ್ಲಿ ಕಾಡು ಆನೆಗಳ ದಾಳಿಯಿಂದ ಸಾವನ್ನಪ್ಪಿದ ಸಾರ್ವಜನಿಕ ಪ್ರತಿಭಟನೆಯಿಂದಾಗಿ ವಾರಣಾಸಿಯಲ್ಲಿ ರಾಹುಲ್ ಗಾಂಧಿ ತಮ್ಮ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಹಠಾತ್ತನೆ ನಿಲ್ಲಿಸಿದ ನಂತರ, ಆನೆ ದಾಳಿಯಿಂದ ಸಾವನ್ನಪ್ಪಿದ ಅರಣ್ಯ ಇಲಾಖೆ ಸಿಬ್ಬಂದಿ ವಿಪಿ ಪಾಲ್ ಅವರ ಮನೆಗೆ ಭೇಟಿ ನೀಡಿದರು. ನಂತರ ಅವರು ಉತ್ತರ ಪ್ರದೇಶಕ್ಕೆ ಮರಳಿದ್ದು, ಆನಂದ ಭವನದಿಂದ ತಮ್ಮ ಯಾತ್ರೆಯನ್ನು ಪುನರಾರಂಭಿಸುತ್ತಾರೆ.

ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕೋರಿ ಸ್ಥಳೀಯರ ತೀವ್ರ ಪ್ರತಿಭಟನೆಯ ನಂತರ ವಾರಣಾಸಿಯಲ್ಲಿದ್ದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಹಠಾತ್ತನೆ ಸ್ಥಗಿತಗೊಳಿಸಿದ ನಂತರ ಅವರು ಕ್ಷೇತ್ರಕ್ಕೆ ಆಗಮಿಸಿದರು. ವಯನಾಡ್ ವೈದ್ಯಕೀಯ ಕಾಲೇಜಿನಲ್ಲಿ ಸೌಲಭ್ಯಗಳ ಕೊರತೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು; ಇದು ಗಮನಿಸಲೇಬಾಎಕಾದ ವಿಷಯವಾಗಿದೆ ಎಂದು ಹೇಳಿದರು.

ನಂತರ, ಜಿಲ್ಲೆಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿದರು ಮತ್ತು ಸಂತ್ರಸ್ತರಿಗೆ ಖಚಿತವಾದ ಪರಿಹಾರವನ್ನು ಹೆಚ್ಚು ವಿಳಂಬವಿಲ್ಲದೆ ಹಸ್ತಾಂತರಿಸಲು ಪ್ರಯತ್ನಿಸಿದರು. ರಾಹುಲ್ ಗಾಂಧಿ ಅವರು  ವಯನಾಡು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಮಂಗಳವಾರ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೇರಲಿದ್ದಾರೆ. ಕಾಂಗ್ರೆಸ್ ಮತ್ತು ಎಸ್‌ಪಿ ಶೀಘ್ರದಲ್ಲೆ ರಾಜ್ಯದಲ್ಲಿ ತಮ್ಮ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಖಿಲೇಶ್ ಅವರು ಕಾಂಗ್ರೆಸ್‌ಗೆ 11 ಸ್ಥಾನಗಳನ್ನು ಘೋಷಿಸಿದಾಗ ಜನವರಿ 27 ರಿಂದ ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರ ಚರ್ಚಾ ವಿಷಯವಾಗಿದೆ.

ರಾಹುಲ್ ಅವರ ಯಾತ್ರೆ ಸಂಜೆ ಹರಿಸೆಂಗಂಜ್‌ನಲ್ಲಿ ನಿಲ್ಲುತ್ತದೆ ಮತ್ತು ಮೌಯಿಮಾದ ಸಕ್ರಮೌದಲ್ಲಿ ರಾತ್ರಿ ತಂಗುವ ನಂತರ ಯಾತ್ರೆ ಮರುದಿನ ಪ್ರತಾಪ್‌ಗಢ ಜಿಲ್ಲೆಯನ್ನು ಪ್ರವೇಶಿಸಲಿದೆ. ಶನಿವಾರ, ವಾರಣಾಸಿಯಲ್ಲಿ ಪಕ್ಷದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುವಾಗ ರಾಹುಲ್ ಗಾಂಧಿ ಒಟ್ಟಾಗಿ ಕೆಲಸ ಮಾಡುವ ಶಕ್ತಿಯನ್ನು ಒತ್ತಿ ಹೇಳಿದರು.

ಇಂದು ಮಧ್ಯಾಹ್ನ 3 ಗಂಟೆಗೆ ನೆಹರು ಕುಟುಂಬದ ಪೂರ್ವಿಕರ ಮನೆಯಾದ ಆನಂದ ಭವನದಿಂದ ರಾಹುಲ್ ಗಾಂಧಿ ಅವರು ಯಾತ್ರೆಯ ನೇತೃತ್ವ ವಹಿಸಲಿದ್ದು, ನಗರದ ಕತ್ರಾ, ನೇತ್ರಂ, ಲಕ್ಷ್ಮಿ ಟಾಕೀಸ್, ತೇಲಿಯಾರ್‌ಗಂಜ್ ಮತ್ತು ಮಲಕಾ, ಸೊರಾನ್ ಪ್ರದೇಶದ ಮೂಲಕ ಸಾಗಲಿದ್ದಾರೆ.

ಇದನ್ನೂ ಓದಿ; ಇಂಡಿಯಾ ಬ್ಲಾಕ್‌ ಸೇರುವಂತೆ ಮಾಯಾವತಿ ನೇತೃತ್ವದ ಬಿಎಸ್‌ಪಿಗೆ ಕಾಂಗ್ರೆಸ್ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...