Homeಮುಖಪುಟಪ್ರಯಾಗರಾಜ್ ತಲುಪಿದ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ನ್ಯಾಯ್ ಯಾತ್ರೆ'

ಪ್ರಯಾಗರಾಜ್ ತಲುಪಿದ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಭಾನುವಾರ ಸಂಜೆ 4.00 ರ ಸುಮಾರಿಗೆ ಉತ್ತರ ಪ್ರದೇಶದ ಪ್ರಯಾಗ್ರಾಜ್ ತಲುಪಿತು. ರಾಹುಲ್ ಗಾಂಧಿ, ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಮತ್ತು ಇತರ ಪಕ್ಷದ ನಾಯಕರು ಯಾತ್ರೆಯ ವೇಳೆ ತೆರೆದ ಜೀಪಿನಲ್ಲಿ ಚಲಿಸಿದರು.

ವಿಮಾನ ನಿಲ್ದಾಣದಿಂದ ನೇರವಾಗಿ ಸ್ವರಾಜ್ ಭವನ ತಲುಪಿದ ರಾಹುಲ್ ಗಾಂಧಿ, ಅಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದರು. ಯಾತ್ರೆಯು ನೇತ್ರಂ ಚೌರಾಹಾದ ಮೂಲಕ ಸಾಗಿ ಲಕ್ಷ್ಮಿ ಟಾಕೀಸ್ ತಲುಪಲಿದ್ದು, ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದು, ಇದಾದ ಬಳಿಕ ಯಾತ್ರೆ ಮುಂದುವರಿಯಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದರು.

ಆನೆ ದಾಳಿ ಸಂತ್ರದಸ್ತರನ್ನು ಭೇಟಿಯಾಗಲು ವಯನಾಡ್‌ಗೆ ತೆರಳಿದ್ದ ರಾಹುಲ್ ಗಾಂಧಿ, ಇಂದು ಪ್ರಯಾಗ್‌ರಾಜ್‌ನ ‘ಆನಂದ ಭವನ’ದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.

ವಯನಾಡಿನಲ್ಲಿ ಕಾಡು ಆನೆಗಳ ದಾಳಿಯಿಂದ ಸಾವನ್ನಪ್ಪಿದ ಸಾರ್ವಜನಿಕ ಪ್ರತಿಭಟನೆಯಿಂದಾಗಿ ವಾರಣಾಸಿಯಲ್ಲಿ ರಾಹುಲ್ ಗಾಂಧಿ ತಮ್ಮ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಹಠಾತ್ತನೆ ನಿಲ್ಲಿಸಿದ ನಂತರ, ಆನೆ ದಾಳಿಯಿಂದ ಸಾವನ್ನಪ್ಪಿದ ಅರಣ್ಯ ಇಲಾಖೆ ಸಿಬ್ಬಂದಿ ವಿಪಿ ಪಾಲ್ ಅವರ ಮನೆಗೆ ಭೇಟಿ ನೀಡಿದರು. ನಂತರ ಅವರು ಉತ್ತರ ಪ್ರದೇಶಕ್ಕೆ ಮರಳಿದ್ದು, ಆನಂದ ಭವನದಿಂದ ತಮ್ಮ ಯಾತ್ರೆಯನ್ನು ಪುನರಾರಂಭಿಸುತ್ತಾರೆ.

ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕೋರಿ ಸ್ಥಳೀಯರ ತೀವ್ರ ಪ್ರತಿಭಟನೆಯ ನಂತರ ವಾರಣಾಸಿಯಲ್ಲಿದ್ದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಹಠಾತ್ತನೆ ಸ್ಥಗಿತಗೊಳಿಸಿದ ನಂತರ ಅವರು ಕ್ಷೇತ್ರಕ್ಕೆ ಆಗಮಿಸಿದರು. ವಯನಾಡ್ ವೈದ್ಯಕೀಯ ಕಾಲೇಜಿನಲ್ಲಿ ಸೌಲಭ್ಯಗಳ ಕೊರತೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು; ಇದು ಗಮನಿಸಲೇಬಾಎಕಾದ ವಿಷಯವಾಗಿದೆ ಎಂದು ಹೇಳಿದರು.

ನಂತರ, ಜಿಲ್ಲೆಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿದರು ಮತ್ತು ಸಂತ್ರಸ್ತರಿಗೆ ಖಚಿತವಾದ ಪರಿಹಾರವನ್ನು ಹೆಚ್ಚು ವಿಳಂಬವಿಲ್ಲದೆ ಹಸ್ತಾಂತರಿಸಲು ಪ್ರಯತ್ನಿಸಿದರು. ರಾಹುಲ್ ಗಾಂಧಿ ಅವರು  ವಯನಾಡು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಮಂಗಳವಾರ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೇರಲಿದ್ದಾರೆ. ಕಾಂಗ್ರೆಸ್ ಮತ್ತು ಎಸ್‌ಪಿ ಶೀಘ್ರದಲ್ಲೆ ರಾಜ್ಯದಲ್ಲಿ ತಮ್ಮ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಖಿಲೇಶ್ ಅವರು ಕಾಂಗ್ರೆಸ್‌ಗೆ 11 ಸ್ಥಾನಗಳನ್ನು ಘೋಷಿಸಿದಾಗ ಜನವರಿ 27 ರಿಂದ ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರ ಚರ್ಚಾ ವಿಷಯವಾಗಿದೆ.

ರಾಹುಲ್ ಅವರ ಯಾತ್ರೆ ಸಂಜೆ ಹರಿಸೆಂಗಂಜ್‌ನಲ್ಲಿ ನಿಲ್ಲುತ್ತದೆ ಮತ್ತು ಮೌಯಿಮಾದ ಸಕ್ರಮೌದಲ್ಲಿ ರಾತ್ರಿ ತಂಗುವ ನಂತರ ಯಾತ್ರೆ ಮರುದಿನ ಪ್ರತಾಪ್‌ಗಢ ಜಿಲ್ಲೆಯನ್ನು ಪ್ರವೇಶಿಸಲಿದೆ. ಶನಿವಾರ, ವಾರಣಾಸಿಯಲ್ಲಿ ಪಕ್ಷದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುವಾಗ ರಾಹುಲ್ ಗಾಂಧಿ ಒಟ್ಟಾಗಿ ಕೆಲಸ ಮಾಡುವ ಶಕ್ತಿಯನ್ನು ಒತ್ತಿ ಹೇಳಿದರು.

ಇಂದು ಮಧ್ಯಾಹ್ನ 3 ಗಂಟೆಗೆ ನೆಹರು ಕುಟುಂಬದ ಪೂರ್ವಿಕರ ಮನೆಯಾದ ಆನಂದ ಭವನದಿಂದ ರಾಹುಲ್ ಗಾಂಧಿ ಅವರು ಯಾತ್ರೆಯ ನೇತೃತ್ವ ವಹಿಸಲಿದ್ದು, ನಗರದ ಕತ್ರಾ, ನೇತ್ರಂ, ಲಕ್ಷ್ಮಿ ಟಾಕೀಸ್, ತೇಲಿಯಾರ್‌ಗಂಜ್ ಮತ್ತು ಮಲಕಾ, ಸೊರಾನ್ ಪ್ರದೇಶದ ಮೂಲಕ ಸಾಗಲಿದ್ದಾರೆ.

ಇದನ್ನೂ ಓದಿ; ಇಂಡಿಯಾ ಬ್ಲಾಕ್‌ ಸೇರುವಂತೆ ಮಾಯಾವತಿ ನೇತೃತ್ವದ ಬಿಎಸ್‌ಪಿಗೆ ಕಾಂಗ್ರೆಸ್ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...