Homeಮುಖಪುಟಪ್ರಯಾಗರಾಜ್ ತಲುಪಿದ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ನ್ಯಾಯ್ ಯಾತ್ರೆ'

ಪ್ರಯಾಗರಾಜ್ ತಲುಪಿದ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಭಾನುವಾರ ಸಂಜೆ 4.00 ರ ಸುಮಾರಿಗೆ ಉತ್ತರ ಪ್ರದೇಶದ ಪ್ರಯಾಗ್ರಾಜ್ ತಲುಪಿತು. ರಾಹುಲ್ ಗಾಂಧಿ, ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಮತ್ತು ಇತರ ಪಕ್ಷದ ನಾಯಕರು ಯಾತ್ರೆಯ ವೇಳೆ ತೆರೆದ ಜೀಪಿನಲ್ಲಿ ಚಲಿಸಿದರು.

ವಿಮಾನ ನಿಲ್ದಾಣದಿಂದ ನೇರವಾಗಿ ಸ್ವರಾಜ್ ಭವನ ತಲುಪಿದ ರಾಹುಲ್ ಗಾಂಧಿ, ಅಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಯಾತ್ರೆ ಆರಂಭಿಸಿದರು. ಯಾತ್ರೆಯು ನೇತ್ರಂ ಚೌರಾಹಾದ ಮೂಲಕ ಸಾಗಿ ಲಕ್ಷ್ಮಿ ಟಾಕೀಸ್ ತಲುಪಲಿದ್ದು, ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದು, ಇದಾದ ಬಳಿಕ ಯಾತ್ರೆ ಮುಂದುವರಿಯಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದರು.

ಆನೆ ದಾಳಿ ಸಂತ್ರದಸ್ತರನ್ನು ಭೇಟಿಯಾಗಲು ವಯನಾಡ್‌ಗೆ ತೆರಳಿದ್ದ ರಾಹುಲ್ ಗಾಂಧಿ, ಇಂದು ಪ್ರಯಾಗ್‌ರಾಜ್‌ನ ‘ಆನಂದ ಭವನ’ದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.

ವಯನಾಡಿನಲ್ಲಿ ಕಾಡು ಆನೆಗಳ ದಾಳಿಯಿಂದ ಸಾವನ್ನಪ್ಪಿದ ಸಾರ್ವಜನಿಕ ಪ್ರತಿಭಟನೆಯಿಂದಾಗಿ ವಾರಣಾಸಿಯಲ್ಲಿ ರಾಹುಲ್ ಗಾಂಧಿ ತಮ್ಮ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಹಠಾತ್ತನೆ ನಿಲ್ಲಿಸಿದ ನಂತರ, ಆನೆ ದಾಳಿಯಿಂದ ಸಾವನ್ನಪ್ಪಿದ ಅರಣ್ಯ ಇಲಾಖೆ ಸಿಬ್ಬಂದಿ ವಿಪಿ ಪಾಲ್ ಅವರ ಮನೆಗೆ ಭೇಟಿ ನೀಡಿದರು. ನಂತರ ಅವರು ಉತ್ತರ ಪ್ರದೇಶಕ್ಕೆ ಮರಳಿದ್ದು, ಆನಂದ ಭವನದಿಂದ ತಮ್ಮ ಯಾತ್ರೆಯನ್ನು ಪುನರಾರಂಭಿಸುತ್ತಾರೆ.

ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕೋರಿ ಸ್ಥಳೀಯರ ತೀವ್ರ ಪ್ರತಿಭಟನೆಯ ನಂತರ ವಾರಣಾಸಿಯಲ್ಲಿದ್ದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಹಠಾತ್ತನೆ ಸ್ಥಗಿತಗೊಳಿಸಿದ ನಂತರ ಅವರು ಕ್ಷೇತ್ರಕ್ಕೆ ಆಗಮಿಸಿದರು. ವಯನಾಡ್ ವೈದ್ಯಕೀಯ ಕಾಲೇಜಿನಲ್ಲಿ ಸೌಲಭ್ಯಗಳ ಕೊರತೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು; ಇದು ಗಮನಿಸಲೇಬಾಎಕಾದ ವಿಷಯವಾಗಿದೆ ಎಂದು ಹೇಳಿದರು.

ನಂತರ, ಜಿಲ್ಲೆಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿದರು ಮತ್ತು ಸಂತ್ರಸ್ತರಿಗೆ ಖಚಿತವಾದ ಪರಿಹಾರವನ್ನು ಹೆಚ್ಚು ವಿಳಂಬವಿಲ್ಲದೆ ಹಸ್ತಾಂತರಿಸಲು ಪ್ರಯತ್ನಿಸಿದರು. ರಾಹುಲ್ ಗಾಂಧಿ ಅವರು  ವಯನಾಡು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಮಂಗಳವಾರ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯನ್ನು ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೇರಲಿದ್ದಾರೆ. ಕಾಂಗ್ರೆಸ್ ಮತ್ತು ಎಸ್‌ಪಿ ಶೀಘ್ರದಲ್ಲೆ ರಾಜ್ಯದಲ್ಲಿ ತಮ್ಮ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಖಿಲೇಶ್ ಅವರು ಕಾಂಗ್ರೆಸ್‌ಗೆ 11 ಸ್ಥಾನಗಳನ್ನು ಘೋಷಿಸಿದಾಗ ಜನವರಿ 27 ರಿಂದ ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರ ಚರ್ಚಾ ವಿಷಯವಾಗಿದೆ.

ರಾಹುಲ್ ಅವರ ಯಾತ್ರೆ ಸಂಜೆ ಹರಿಸೆಂಗಂಜ್‌ನಲ್ಲಿ ನಿಲ್ಲುತ್ತದೆ ಮತ್ತು ಮೌಯಿಮಾದ ಸಕ್ರಮೌದಲ್ಲಿ ರಾತ್ರಿ ತಂಗುವ ನಂತರ ಯಾತ್ರೆ ಮರುದಿನ ಪ್ರತಾಪ್‌ಗಢ ಜಿಲ್ಲೆಯನ್ನು ಪ್ರವೇಶಿಸಲಿದೆ. ಶನಿವಾರ, ವಾರಣಾಸಿಯಲ್ಲಿ ಪಕ್ಷದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುವಾಗ ರಾಹುಲ್ ಗಾಂಧಿ ಒಟ್ಟಾಗಿ ಕೆಲಸ ಮಾಡುವ ಶಕ್ತಿಯನ್ನು ಒತ್ತಿ ಹೇಳಿದರು.

ಇಂದು ಮಧ್ಯಾಹ್ನ 3 ಗಂಟೆಗೆ ನೆಹರು ಕುಟುಂಬದ ಪೂರ್ವಿಕರ ಮನೆಯಾದ ಆನಂದ ಭವನದಿಂದ ರಾಹುಲ್ ಗಾಂಧಿ ಅವರು ಯಾತ್ರೆಯ ನೇತೃತ್ವ ವಹಿಸಲಿದ್ದು, ನಗರದ ಕತ್ರಾ, ನೇತ್ರಂ, ಲಕ್ಷ್ಮಿ ಟಾಕೀಸ್, ತೇಲಿಯಾರ್‌ಗಂಜ್ ಮತ್ತು ಮಲಕಾ, ಸೊರಾನ್ ಪ್ರದೇಶದ ಮೂಲಕ ಸಾಗಲಿದ್ದಾರೆ.

ಇದನ್ನೂ ಓದಿ; ಇಂಡಿಯಾ ಬ್ಲಾಕ್‌ ಸೇರುವಂತೆ ಮಾಯಾವತಿ ನೇತೃತ್ವದ ಬಿಎಸ್‌ಪಿಗೆ ಕಾಂಗ್ರೆಸ್ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...