Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಮಂಗಳವಾರ ಜಾರ್ಖಂಡ್‌ನಿಂದ ಒಡಿಶಾಗೆ ಪ್ರವೇಶಿಸಲಿದೆ. ಇಂದು ಬೆಳಗ್ಗೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಿಂದ ಯಾತ್ರೆಯನ್ನು ಪುನರಾರಂಭಿಸುವ ಮೊದಲು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಡಕಟ್ಟು ಜನಾಂಗದ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಹೀದ್ ಮೈದಾನದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ INDIA ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದರೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಬುಡಕಟ್ಟು ಜನಾಂಗದವರಾಗಿರುವುದರಿಂದ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ-ಆರೆಸ್ಸೆಸ್‌ನ ಪಿತೂರಿಯನ್ನು ಮೆಟ್ಟಿ ಬಡವರ ಸರ್ಕಾರವನ್ನು ರಕ್ಷಿಸಿದಕ್ಕೆ ಎಲ್ಲಾ ಮೈತ್ರಿ ಶಾಸಕರಿಗೆ ಮತ್ತು ಚಂಪೈ ಸೊರೆನ್ ಜಿ ಅವರಿಗೆ ಅಭಿನಂದಿಸಲು ಬಯಸುತ್ತೇನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಒಬಿಸಿ ಎಂದು ಹೇಳುತ್ತಿದ್ದರು ಆದರೆ ಜಾತಿ ಗಣತಿಗೆ ಬೇಡಿಕೆ ಬಂದಾಗ ಕೇವಲ ಎರಡು ಜಾತಿಗಳಿವೆ ಅದು ಶ್ರೀಮಂತರು ಮತ್ತು ಬಡವರು ಎಂದು ಹೇಳಿದ್ದಾರೆ. ಒಬಿಸಿ, ದಲಿತರು, ಬುಡಕಟ್ಟು ಜನಾಂಗದವರಿಗೆ ಹಕ್ಕುಗಳ ವಿಚಾರಕ್ಕೆ ಬಂದಾಗ ಮೋದಿಜಿ ಯಾವುದೇ ಜಾತಿಗಳಿಲ್ಲ ಎಂದು ಹೇಳುತ್ತಾರೆ ಮತ್ತು ವೋಟ್‌ ವಿಚಾರಕ್ಕೆ ಬಂದಾಗ ಓಬಿಸಿ ಎಂದು ಹೇಳುತ್ತಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಆದಿವಾಸಿಗಳ ಭೂಮಿಯನ್ನು ಅವರಿಂದ ಕಸಿದುಕೊಳ್ಳಲಾಗುತ್ತಿದೆ,  ಜಾತಿವಾರು ಜನಸಂಖ್ಯೆ ಎಷ್ಟು ಮತ್ತು ಅವರು ಎಷ್ಟು ತೆರಿಗೆ ಪಾವತಿಸುತ್ತಿದ್ದಾರೆ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಮ್ಮನ್ನು ಮತ್ತು ನಮ್ಮ ಯಾತ್ರೆಯನ್ನು ಬೆಂಬಲಿಸುವ ಮೂಲಕ ನೀವು ಜಾರ್ಖಂಡ್‌ನಲ್ಲಿ ಲಕ್ಷಗಟ್ಟಲೆ ‘ಮೊಹಬತ್ ಕಿ ದುಕಾನ್’ ತೆರೆದಿದ್ದೀರಿ’ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಆದಿವಾಸಿಗಳ ಭೂಮಿಯನ್ನು ಅವರಿಂದ ಕಸಿದುಕೊಳ್ಳಲಾಗುತ್ತಿದೆ, ಕಾನೂನು ಪ್ರಕಾರ ಭೂಮಿಯನ್ನು ತೆಗೆದುಕೊಂಡರೆ ಪರಿಹಾರವನ್ನು ನೀಡಬೇಕು ಮತ್ತು ಅದು ಕೂಡ ಈಗಿನ ಮೊತ್ತದ 4 ಪಟ್ಟು ಹೆಚ್ಚು ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮಾದ್ಯಮಗಳು ಅದಾನಿಗಾಗಿ ಕೆಲಸ ಮಾಡುತ್ತದೆ. ಅವರು ದಲಿತರ, ಬಡವರ ಕಷ್ಟಗಳನ್ನು ಬಯಲಿಗೆಳೆಯುವುದಿಲ್ಲ, ಅದರ ಬಗ್ಗೆ ಬರೆಯುವುದಿಲ್ಲ, ಮಾತನಾಡುವುದಿಲ್ಲ, ನಿಮ್ಮ ಅಗತ್ಯಗಳ ಬಗ್ಗೆ ಮಾತನಾಡುವುದು ನಮ್ಮ ಗುರಿಯಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬೆಳಗ್ಗೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಿಂದ ಪುನರಾರಂಭಗೊಂಡಿದೆ. ಬುಡಕಟ್ಟು ಜನಾಂಗದ ಐಕಾನ್ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ನಂತರ ಶಹೀದ್ ಭಗತ್ ಸಿಂಗ್ ಚೌಕ್‌ನಿಂದ ಯಾತ್ರೆ ಪ್ರಾರಂಭವಾಯಿತು.

ಭಾರತ್ ಜೋಡೋ ನ್ಯಾಯ ಯಾತ್ರೆ ಇಂದು ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರ ಮೂಲಕ ಒಡಿಶಾವನ್ನು ಪ್ರವೇಶಿಸಲಿದೆ. ಬಿರಾಮಿತ್ರಪುರ ವಿಧಾನಸಭಾ ಸ್ಥಾನವನ್ನು ಈಗ ಬಿಜೆಪಿ ಪ್ರತಿನಿಧಿಸುತ್ತದೆಯಾದರೂ, ಮೊದಲು ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಜನವರಿ 14ರಂದು ಮಣಿಪುರದಲ್ಲಿ ಆರಂಭವಾದ ಭಾರತ್‌ ಜೋಡೋ ನ್ಯಾಯ ಯಾತ್ರೆ ಸುಮಾರು 15 ರಾಜ್ಯಗಳಲ್ಲಿ ಸಾಗಿ ಮಾರ್ಚ್ 20ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...