Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ಗುವಾಹಟಿ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ಅಸ್ಸಾಂ ಸರ್ಕಾರ

ಭಾರತ್ ಜೋಡೋ ನ್ಯಾಯ ಯಾತ್ರೆ: ಗುವಾಹಟಿ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ಅಸ್ಸಾಂ ಸರ್ಕಾರ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯು ಗುವಾಹಟಿಯ ಒಳ ರಸ್ತೆಗಳ ಮೂಲಕ ತೆರಳಲು ಅನುಮತಿ ನಿರಾಕರಿಸಿಲಾಗಿದೆ. ಯಾತ್ರೆಯು ಇಂದು ಮೇಘಾಲಯದ ನಂತರ ಅಸ್ಸಾಂಗೆ ಮರುಪ್ರವೇಶಿಸಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ ಎಂದು ಎಂದು ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿದ್ದು, ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಮಾತಿನ ವಿನಿಮಯ ನಡೆದಿದೆ.

ಗುವಾಹಟಿಯ ಪ್ರಮುಖ ರಸ್ತೆಗಳ ಮೂಲಕ ಯಾತ್ರೆ ಚಲಿಸಲು ಅವಕಾಶ ನೀಡುವುದರಿಂದ ಸಂಚಾರ ದಟ್ಟಣೆಗೆ ಕಾರಣವಾಗಬಹುದು ಎಂದು ವಾದಿಸಿ, ರಾಜ್ಯ ಆಡಳಿತವು ಯಾತ್ರೆಯು ಕೆಳ ಅಸ್ಸಾಂ ಕಡೆಗೆ ಚಲಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದೆ. ನಗರದ ಸುತ್ತ ವರ್ತುಲ ರಸ್ತೆಯಂತೆ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ 27ರಲ್ಲಿ ಯಾತ್ರೆ ಕೈಗೊಳ್ಳುವಂತೆ ಕೋರಲಾಗಿದೆ.

ಅಸ್ಸಾಂನಲ್ಲಿ 15ನೇ ಶತಮಾನದ ಸಮಾಜ ಸುಧಾರಕನ ದೇವಾಲಯದ ಬಳಿ ನಿನ್ನೆ ನಾಟಕೀಯ ಬೆಳವಣಿಗೆಗಳು ನಡೆದ ಒಂದು ದಿನದ ನಂತರ ಬಿಜೆಪಿ ಆಡಳಿತ ಮತ್ತೊಮ್ಮೆ ಯಾತ್ರೆಗೆ ಅಡ್ಡಿಪಡಿಸಿದೆ. ರಾಹುಲ್ ಗಾಂಧಿ ಅವರು ನಿನ್ನೆ ಗುವಾಹಟಿ ಬಳಿಯ ವೈಷ್ಣವ ಸಂತ ಶ್ರೀಮಂತ ಶಂಕರದೇವರ ಜನ್ಮಸ್ಥಳಕ್ಕೆ ಭೇಟಿ ನೀಡಲು ಯೋಜಿಸಿದ್ದರು. ದೇವಾಲಯ ಪ್ರವೇಶ ಸುದ್ದಿಯನ್ನು ಘೋಷಿಸಿದ ಕೂಡಲೇ, ಮುಖ್ಯಮಂತ್ರಿ ಶರ್ಮಾ ಅವರು ಅಯೋಧ್ಯೆಯಲ್ಲಿ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಮೊದಲು ದೇಗುಲಕ್ಕೆ ಭೇಟಿ ನೀಡದಂತೆ ರಾಹುಲ್ ಅವರನ್ನು ಒತ್ತಾಯಿಸಿದರು.

‘ಮಹಾಪುರುಷ ಶ್ರೀಮಂತ ಶಂಕರದೇವರ ಜನ್ಮಸ್ಥಳಕ್ಕೆ ಭೇಟಿ ನೀಡುವುದರಿಂದ ರಾಮಮಂದಿರ ಮತ್ತು ಬಟದ್ರವ ಸತ್ರದ ನಡುವೆ ಪೈಪೋಟಿ ಇದೆ ಎಂಬ ಕಲ್ಪನೆಯನ್ನು ಹುಟ್ಟು ಹಾಕಬೇಡಿ’ ಎಂದು ನಾನು ರಾಹುಲ್ ಗಾಂಧಿಗೆ ಮನವಿ ಮಾಡುತ್ತೇನೆ ಸಿಎಂ ಶರ್ಮಾ ನಿನ್ನೆ ಹೇಳಿದ್ದರು.

ದೇಗುಲದ ವ್ಯವಸ್ಥಾಪನಾ ಸಮಿತಿಯು ಸಹ, ರಾಹುಲ್ ಗಾಂಧಿಯವರನ್ನು ಮಧ್ಯಾಹ್ನ 3 ಗಂಟೆಯ ಮೊದಲು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಿದರು.

ದೇಗುಲಕ್ಕೆ ತೆರಳುತ್ತಿದ್ದ ರಾಹುಲ್ ಮತ್ತು ಕಾಂಗ್ರೆಸ್ ಮುಖಂಡರು, ಸಂಗಡಿಗರನ್ನು ಸಿಬ್ಬಂದಿ ತಡೆದರು. ಇದರಿಂದ ಕೋಪಗೊಂಡ ಕೈ ಮುಖಂಡರು, ರಸ್ತೆ ತಡೆದು ಸ್ಥಳದಲ್ಲೇ ಧರಣಿ ಕುಳಿತರು. ಪಕ್ಷದ ಸಂಸದ ಗೌರವ್ ಗೊಗೊಯ್ ಮತ್ತು ಬಟದ್ರಾವ ಶಾಸಕ ಸಿಬಾಮೋನಿ ಬೋರಾ ಅವರು ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ರಾಹುಲ್ ಗಾಂಧಿ, ‘ತಾವು ಶಂಕರದೇವರ ತತ್ವದಲ್ಲಿ ನಂಬಿಕೆ ಇಟ್ಟವರು. ನಾವು, ಅವರಂತೆ ಜನರನ್ನು ಒಟ್ಟಿಗೆ ಸೇರಿಸುವುದರಲ್ಲಿ ಮತ್ತು ದ್ವೇಷವನ್ನು ಹರಡುವುದಿಲ್ಲ ಎಂದು ನಂಬುತ್ತೇವೆ. ಅವರು ನಮಗೆ ಗುರುವಿನಂತಿದ್ದಾರೆ ಮತ್ತು ನಮಗೆ ಮಾರ್ಗದರ್ಶನ ನೀಡುತ್ತಾರೆ. ಹಾಗಾಗಿ ನಾನು ಅಸ್ಸಾಂಗೆ ಬಂದಾಗ ಅವರಿಗೆ ನನ್ನ ನಮನಗಳನ್ನು ಸಲ್ಲಿಸಬೇಕು ಎಂದು ಯೋಚಿಸಿದ್ದೆ’ ಎಂದು ಹೇಳಿದರು.

‘ದೇವಾಲಯಕ್ಕೆ ಗೌರವ್ ಗೊಗೊಯ್ ಮತ್ತು ಇತರರು ಹೋಗಬಹುದು. ಆದರೆ ರಾಹುಲ್ ಗಾಂಧಿ ಮಾತ್ರ ಹೋಗಲು ಸಾಧ್ಯವಿಲ್ಲ. ಇದಕ್ಕೆ ಏನಾದ್ರೂ ಕಾರಣ ಇರಬಹುದೋ ಗೊತ್ತಿಲ್ಲ, ಅವಕಾಶ ಸಿಕ್ಕಾಗ ಬಟದ್ರವ ಹೋಗ್ತೇನೆ’ ಅಂದರು.

ದೇವಾಲಯ ಪ್ರವೇಶ ನಿರಾಕರಣೆ ನಂತರ ಇದೀಗ ಕಾಂಗ್ರೆಸ್ ಯಾತ್ರೆಗೆ ಗುವಾಹಟಿ ರಸ್ತೆ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ. ಬದಲಾಗಿ, ಯಾತ್ರೆಯು ರಾಷ್ಟ್ರೀಯ ಹೆದ್ದಾರಿ 27 ರ ಮೂಲಕ ಗುವಾಹಟಿಯನ್ನು ಬೈಪಾಸ್ ಮೂಲಕ ತಲುಪಬೇಕು ಎಂದು ಹೇಳಲಾಗಿದೆ.

‘ಹಿಮಂತ ಬಿಸ್ವ ಶರ್ಮಾ ಸರ್ಕಾರ ಯಾತ್ರೆಗೆ ಅಡೆತಡೆಗಳನ್ನು ಸೃಷ್ಟಿಸುತ್ತಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ. ರಾಹುಲ್ ಗಾಂಧಿ ಅವರ ಯಾತ್ರೆ ಸಾಗುತ್ತಿರುವಾಗ ಕಾರ್ಯಕರ್ತರ ಗುಂಪು ‘ಜೈ ಶ್ರೀ ರಾಮ್’ ಮತ್ತು ‘ಮೋದಿ, ಮೋದಿ’ ಘೋಷಣೆಗಳನ್ನು ಎತ್ತಲು ಪ್ರಾರಂಭಿಸಿದ ಘಟನೆಯನ್ನು ಅವರು ಉಲ್ಲೇಖಿಸಲಾಗಿದೆ. ‘ನಾವು ಅಸ್ಸಾಂಗೆ ಪ್ರವೇಶಿಸಿದಾಗಿನಿಂದ, ಭಾರತದ ಅತ್ಯಂತ ಭ್ರಷ್ಟ ಸಿಎಂ ತನ್ನ ಗೂಂಡಾಗಳನ್ನು ಬಳಸಿಕೊಂಡು ನಮ್ಮ ಬೆಂಗಾವಲು ಪಡೆಗಳು, ಆಸ್ತಿಗಳು ಮತ್ತು ನಾಯಕರ ಮೇಲೆ ನಿರಂತರ ದಾಳಿ ನಡೆಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆಯಡ, ಬಿಜೆಪಿಯು ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿರುವ ಮೇಘಾಲಯದಲ್ಲಿ ರಾಹುಲ್ ಗಾಂಧಿಯವರ ಯಾತ್ರೆಯು ರಸ್ತೆ ತಡೆಯನ್ನು ಹೊಡೆದಿದೆ.

ಮೇಘಾಲಯದ ವಿಶ್ವವಿದ್ಯಾಲಯವೊಂದರಲ್ಲಿ ಕಾಂಗ್ರೆಸ್ ನಾಯಕ ಮತ್ತು ವಿದ್ಯಾರ್ಥಿಗಳ ನಡುವಿನ ಸಂವಾದದ ಯೋಜನೆಯನ್ನು ಅನುಮತಿ ನಿರಾಕರಿಸಿದ ನಂತರ ರದ್ದುಗೊಳಿಸಲಾಯಿತು. ರಾಹುಲ್ ಗಾಂಧಿ ಅವರು ಈಗ ಅಸ್ಸಾಂ-ಮೇಘಾಲಯ ಗಡಿ ಬಳಿಯ ಹೋಟೆಲ್‌ನಲ್ಲಿ ವಿದ್ಯಾರ್ಥಿಗಳನ್ನು ಭೇಟಿಯಾಗಲಿದ್ದಾರೆ. ಮೇಘಾಲಯದಲ್ಲಿ ಅವರು ಈಶಾನ್ಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ; ರಾಹುಲ್ ಗಾಂಧಿಯನ್ನು ರಾವಣನಿಗೆ ಹೋಲಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...