Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆ: ಗುವಾಹಟಿ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ಅಸ್ಸಾಂ ಸರ್ಕಾರ

ಭಾರತ್ ಜೋಡೋ ನ್ಯಾಯ ಯಾತ್ರೆ: ಗುವಾಹಟಿ ನಗರ ಪ್ರವೇಶಿಸಲು ಅನುಮತಿ ನಿರಾಕರಿಸಿದ ಅಸ್ಸಾಂ ಸರ್ಕಾರ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯು ಗುವಾಹಟಿಯ ಒಳ ರಸ್ತೆಗಳ ಮೂಲಕ ತೆರಳಲು ಅನುಮತಿ ನಿರಾಕರಿಸಿಲಾಗಿದೆ. ಯಾತ್ರೆಯು ಇಂದು ಮೇಘಾಲಯದ ನಂತರ ಅಸ್ಸಾಂಗೆ ಮರುಪ್ರವೇಶಿಸಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ ಎಂದು ಎಂದು ಬಿಜೆಪಿ ಸರ್ಕಾರ ಅನುಮತಿ ನಿರಾಕರಿಸಿದ್ದು, ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಮಾತಿನ ವಿನಿಮಯ ನಡೆದಿದೆ.

ಗುವಾಹಟಿಯ ಪ್ರಮುಖ ರಸ್ತೆಗಳ ಮೂಲಕ ಯಾತ್ರೆ ಚಲಿಸಲು ಅವಕಾಶ ನೀಡುವುದರಿಂದ ಸಂಚಾರ ದಟ್ಟಣೆಗೆ ಕಾರಣವಾಗಬಹುದು ಎಂದು ವಾದಿಸಿ, ರಾಜ್ಯ ಆಡಳಿತವು ಯಾತ್ರೆಯು ಕೆಳ ಅಸ್ಸಾಂ ಕಡೆಗೆ ಚಲಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದೆ. ನಗರದ ಸುತ್ತ ವರ್ತುಲ ರಸ್ತೆಯಂತೆ ಕಾರ್ಯನಿರ್ವಹಿಸುವ ರಾಷ್ಟ್ರೀಯ ಹೆದ್ದಾರಿ 27ರಲ್ಲಿ ಯಾತ್ರೆ ಕೈಗೊಳ್ಳುವಂತೆ ಕೋರಲಾಗಿದೆ.

ಅಸ್ಸಾಂನಲ್ಲಿ 15ನೇ ಶತಮಾನದ ಸಮಾಜ ಸುಧಾರಕನ ದೇವಾಲಯದ ಬಳಿ ನಿನ್ನೆ ನಾಟಕೀಯ ಬೆಳವಣಿಗೆಗಳು ನಡೆದ ಒಂದು ದಿನದ ನಂತರ ಬಿಜೆಪಿ ಆಡಳಿತ ಮತ್ತೊಮ್ಮೆ ಯಾತ್ರೆಗೆ ಅಡ್ಡಿಪಡಿಸಿದೆ. ರಾಹುಲ್ ಗಾಂಧಿ ಅವರು ನಿನ್ನೆ ಗುವಾಹಟಿ ಬಳಿಯ ವೈಷ್ಣವ ಸಂತ ಶ್ರೀಮಂತ ಶಂಕರದೇವರ ಜನ್ಮಸ್ಥಳಕ್ಕೆ ಭೇಟಿ ನೀಡಲು ಯೋಜಿಸಿದ್ದರು. ದೇವಾಲಯ ಪ್ರವೇಶ ಸುದ್ದಿಯನ್ನು ಘೋಷಿಸಿದ ಕೂಡಲೇ, ಮುಖ್ಯಮಂತ್ರಿ ಶರ್ಮಾ ಅವರು ಅಯೋಧ್ಯೆಯಲ್ಲಿ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಮೊದಲು ದೇಗುಲಕ್ಕೆ ಭೇಟಿ ನೀಡದಂತೆ ರಾಹುಲ್ ಅವರನ್ನು ಒತ್ತಾಯಿಸಿದರು.

‘ಮಹಾಪುರುಷ ಶ್ರೀಮಂತ ಶಂಕರದೇವರ ಜನ್ಮಸ್ಥಳಕ್ಕೆ ಭೇಟಿ ನೀಡುವುದರಿಂದ ರಾಮಮಂದಿರ ಮತ್ತು ಬಟದ್ರವ ಸತ್ರದ ನಡುವೆ ಪೈಪೋಟಿ ಇದೆ ಎಂಬ ಕಲ್ಪನೆಯನ್ನು ಹುಟ್ಟು ಹಾಕಬೇಡಿ’ ಎಂದು ನಾನು ರಾಹುಲ್ ಗಾಂಧಿಗೆ ಮನವಿ ಮಾಡುತ್ತೇನೆ ಸಿಎಂ ಶರ್ಮಾ ನಿನ್ನೆ ಹೇಳಿದ್ದರು.

ದೇಗುಲದ ವ್ಯವಸ್ಥಾಪನಾ ಸಮಿತಿಯು ಸಹ, ರಾಹುಲ್ ಗಾಂಧಿಯವರನ್ನು ಮಧ್ಯಾಹ್ನ 3 ಗಂಟೆಯ ಮೊದಲು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಿದರು.

ದೇಗುಲಕ್ಕೆ ತೆರಳುತ್ತಿದ್ದ ರಾಹುಲ್ ಮತ್ತು ಕಾಂಗ್ರೆಸ್ ಮುಖಂಡರು, ಸಂಗಡಿಗರನ್ನು ಸಿಬ್ಬಂದಿ ತಡೆದರು. ಇದರಿಂದ ಕೋಪಗೊಂಡ ಕೈ ಮುಖಂಡರು, ರಸ್ತೆ ತಡೆದು ಸ್ಥಳದಲ್ಲೇ ಧರಣಿ ಕುಳಿತರು. ಪಕ್ಷದ ಸಂಸದ ಗೌರವ್ ಗೊಗೊಯ್ ಮತ್ತು ಬಟದ್ರಾವ ಶಾಸಕ ಸಿಬಾಮೋನಿ ಬೋರಾ ಅವರು ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ರಾಹುಲ್ ಗಾಂಧಿ, ‘ತಾವು ಶಂಕರದೇವರ ತತ್ವದಲ್ಲಿ ನಂಬಿಕೆ ಇಟ್ಟವರು. ನಾವು, ಅವರಂತೆ ಜನರನ್ನು ಒಟ್ಟಿಗೆ ಸೇರಿಸುವುದರಲ್ಲಿ ಮತ್ತು ದ್ವೇಷವನ್ನು ಹರಡುವುದಿಲ್ಲ ಎಂದು ನಂಬುತ್ತೇವೆ. ಅವರು ನಮಗೆ ಗುರುವಿನಂತಿದ್ದಾರೆ ಮತ್ತು ನಮಗೆ ಮಾರ್ಗದರ್ಶನ ನೀಡುತ್ತಾರೆ. ಹಾಗಾಗಿ ನಾನು ಅಸ್ಸಾಂಗೆ ಬಂದಾಗ ಅವರಿಗೆ ನನ್ನ ನಮನಗಳನ್ನು ಸಲ್ಲಿಸಬೇಕು ಎಂದು ಯೋಚಿಸಿದ್ದೆ’ ಎಂದು ಹೇಳಿದರು.

‘ದೇವಾಲಯಕ್ಕೆ ಗೌರವ್ ಗೊಗೊಯ್ ಮತ್ತು ಇತರರು ಹೋಗಬಹುದು. ಆದರೆ ರಾಹುಲ್ ಗಾಂಧಿ ಮಾತ್ರ ಹೋಗಲು ಸಾಧ್ಯವಿಲ್ಲ. ಇದಕ್ಕೆ ಏನಾದ್ರೂ ಕಾರಣ ಇರಬಹುದೋ ಗೊತ್ತಿಲ್ಲ, ಅವಕಾಶ ಸಿಕ್ಕಾಗ ಬಟದ್ರವ ಹೋಗ್ತೇನೆ’ ಅಂದರು.

ದೇವಾಲಯ ಪ್ರವೇಶ ನಿರಾಕರಣೆ ನಂತರ ಇದೀಗ ಕಾಂಗ್ರೆಸ್ ಯಾತ್ರೆಗೆ ಗುವಾಹಟಿ ರಸ್ತೆ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ. ಬದಲಾಗಿ, ಯಾತ್ರೆಯು ರಾಷ್ಟ್ರೀಯ ಹೆದ್ದಾರಿ 27 ರ ಮೂಲಕ ಗುವಾಹಟಿಯನ್ನು ಬೈಪಾಸ್ ಮೂಲಕ ತಲುಪಬೇಕು ಎಂದು ಹೇಳಲಾಗಿದೆ.

‘ಹಿಮಂತ ಬಿಸ್ವ ಶರ್ಮಾ ಸರ್ಕಾರ ಯಾತ್ರೆಗೆ ಅಡೆತಡೆಗಳನ್ನು ಸೃಷ್ಟಿಸುತ್ತಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ. ರಾಹುಲ್ ಗಾಂಧಿ ಅವರ ಯಾತ್ರೆ ಸಾಗುತ್ತಿರುವಾಗ ಕಾರ್ಯಕರ್ತರ ಗುಂಪು ‘ಜೈ ಶ್ರೀ ರಾಮ್’ ಮತ್ತು ‘ಮೋದಿ, ಮೋದಿ’ ಘೋಷಣೆಗಳನ್ನು ಎತ್ತಲು ಪ್ರಾರಂಭಿಸಿದ ಘಟನೆಯನ್ನು ಅವರು ಉಲ್ಲೇಖಿಸಲಾಗಿದೆ. ‘ನಾವು ಅಸ್ಸಾಂಗೆ ಪ್ರವೇಶಿಸಿದಾಗಿನಿಂದ, ಭಾರತದ ಅತ್ಯಂತ ಭ್ರಷ್ಟ ಸಿಎಂ ತನ್ನ ಗೂಂಡಾಗಳನ್ನು ಬಳಸಿಕೊಂಡು ನಮ್ಮ ಬೆಂಗಾವಲು ಪಡೆಗಳು, ಆಸ್ತಿಗಳು ಮತ್ತು ನಾಯಕರ ಮೇಲೆ ನಿರಂತರ ದಾಳಿ ನಡೆಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆಯಡ, ಬಿಜೆಪಿಯು ಆಡಳಿತಾರೂಢ ಮೈತ್ರಿಕೂಟದ ಭಾಗವಾಗಿರುವ ಮೇಘಾಲಯದಲ್ಲಿ ರಾಹುಲ್ ಗಾಂಧಿಯವರ ಯಾತ್ರೆಯು ರಸ್ತೆ ತಡೆಯನ್ನು ಹೊಡೆದಿದೆ.

ಮೇಘಾಲಯದ ವಿಶ್ವವಿದ್ಯಾಲಯವೊಂದರಲ್ಲಿ ಕಾಂಗ್ರೆಸ್ ನಾಯಕ ಮತ್ತು ವಿದ್ಯಾರ್ಥಿಗಳ ನಡುವಿನ ಸಂವಾದದ ಯೋಜನೆಯನ್ನು ಅನುಮತಿ ನಿರಾಕರಿಸಿದ ನಂತರ ರದ್ದುಗೊಳಿಸಲಾಯಿತು. ರಾಹುಲ್ ಗಾಂಧಿ ಅವರು ಈಗ ಅಸ್ಸಾಂ-ಮೇಘಾಲಯ ಗಡಿ ಬಳಿಯ ಹೋಟೆಲ್‌ನಲ್ಲಿ ವಿದ್ಯಾರ್ಥಿಗಳನ್ನು ಭೇಟಿಯಾಗಲಿದ್ದಾರೆ. ಮೇಘಾಲಯದಲ್ಲಿ ಅವರು ಈಶಾನ್ಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ; ರಾಹುಲ್ ಗಾಂಧಿಯನ್ನು ರಾವಣನಿಗೆ ಹೋಲಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...