Homeಮುಖಪುಟಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

ಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನವೆಂಬರ್ 06 ರಂದು ಮಹಾರಾಷ್ಟ್ರಕ್ಕೆ ಪ್ರವೇಶಿಸಲಿದ್ದು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಯಾತ್ರೆಯು 4 ರಾಜ್ಯಗಳನ್ನು ಕ್ರಮಿಸಿ 1000 ಕಿ.ಮೀ ಗಳನ್ನು ಪೂರೈಸಿದೆ. ಸದ್ಯ ಆಂಧ್ರಪ್ರದೇಶದಲ್ಲಿರುವ ಯಾತ್ರೆಯು ನಾಳೆ ಮತ್ತೆ ಕರ್ನಾಟಕ ಪ್ರವೇಶಿಸಲಿದ್ದು ಆನಂತರ ತೆಲಂಗಾಣಕ್ಕೆ ಕಾಲಿಡಲಿದೆ. ಆನಂತರ 6ನೇ ರಾಜ್ಯವಾಗಿ ಮಹಾರಾಷ್ಟ್ರದ ನಾಂದೇಡ್‌ಗೆ ಪ್ರವೇಶಿಸಲಿದೆ ಎನ್ನಲಾಗಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್‌.ಕೆ ಪಾಟೀಲ್, ಹಿರಿಯ ನಾಯಕರಾದ ಬಾಳಾಸಾಹೇಬ್ ಥೋರಟ್, ಅಶೋಕ್ ಚವ್ಹಾಣ್‌ರವರು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಭಾರತ್ ಜೋಡೋ ಯಾತ್ರೆಗೆ  ಆಹ್ವಾನಿಸಿದ್ದಾರೆ. ಉದ್ಧವ್ ಠಾಕ್ರೆ ಅಥವಾ ಅವರ ಪುತ್ರ ಮಾಜಿ ಸಚಿವ ಆದಿತ್ಯ ಠಾಕ್ರೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಯಾತ್ರೆಯನ್ನು ಸ್ವಾಗತಿಸುವ ನಿರೀಕ್ಷೆಯಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ರಾಹುಲ್ ಮತ್ತು ರಾಮ ವಿವಾದ

ರಾಜಸ್ಥಾನದ ಸಚಿವ ಪರ್ಸಾದಿ ಲಾಲ್ ಮೀನಾ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ರಾಮನಿಗೆ ಹೋಲಿಸಿದ್ದಾರೆ. ರಾಹುಲ್ ಗಾಂಧಿಯವರ ಯಾತ್ರೆಯು ಅಯೋಧ್ಯೆಯಿಂದ ಶ್ರೀಲಂಕಾಕ್ಕೆ ನಡೆದ ರಾಮನ ಪ್ರಯಾಣಕ್ಕಿಂತಲೂ ಉದ್ದವಾಗಿದೆ ಎಂದು ಹೇಳಿದ್ದಾರೆ. ಈ ಹೋಲಿಕೆ ಕೋಲಾಹಲಕ್ಕೆ ಕಾರಣವಾಗುತ್ತಿದ್ದಂತೆ, ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಸ್ಪಷ್ಟೀಕರಣ ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಭಗವಾನ್ ರಾಮರ ಹೆಸರುಗಳು ‘ಆರ್’ ನೊಂದಿಗೆ ಪ್ರಾರಂಭವಾಗುವುದು ಕೇವಲ ಕಾಕತಾಳೀಯವಾಗಿದೆ. ಆದರೆ ಯಾವುದೇ ಹೋಲಿಕೆ ಇಲ್ಲ ಎಂದು ಹೇಳಿದ್ದಾರೆ. “ದೇವರು ದೇವರು, ಮತ್ತು ನಾವು ಮನುಷ್ಯರು. ರಾಹುಲ್ ಗಾಂಧಿ ಕೇವಲ ಮಾನವೀಯತೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯು ತ್ರಿವರ್ಣ ಮತ್ತು ಮಾನವೀಯತೆಯನ್ನು ಉಳಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಭಾರತ್ ಜೋಡೋ ಬೆಂಬಲಿಸುವುದಕ್ಕೆ ಬಿಜೆಪಿ ನಾಯಕ ಉಪಾಧ್ಯೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉದ್ಧವ್ ತಮ್ಮ ಪಕ್ಷದ ಸಲುವಾಗಿಯೂ ಎಂದೂ ಮನೆ ಬಿಟ್ಟು ಬಂದಿಲ್ಲ. ಯಾವುದೇ ಹಿಂದುತ್ವದ ಮೆರವಣಿಗೆ, ಅಡ್ವಾಣಿಯವರ ರಥಯಾತ್ರೆಗೆ ಬೆಂಬಲ ನೀಡಿಲ್ಲ. ಆದರೆ ಈಗ ಅವರು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಹೊರಟಿದ್ದಾರೆ. ‘ಮುಹ್ ಮೆ ರಾಮ್, ಬಗಲ್ ಮೆ ಚುರಿ’ ಎಂದು ಹಳೆಯ ಹಿಂದಿ ಗಾದೆಯಂತೆ ಉದ್ಧವ್ ಠಾಕ್ರೆಗೆ ಇದು ‘ಮುಹ್ ಮೆ ರಾಮ್, ಬಗಲ್ ಮಿ ರಾಹುಲ್’ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯಕ್ಕೆ ಯಾರೇ ಬಂದರೂ ಅವರು ಬಾಳ್ ಠಾಕ್ರೆಯವರ ಮನೆಗೆ ಹೋಗಲೇಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದ್ದರು. ಆದರೆ ಉದ್ಧವ್ ಅದಕ್ಕೆ ವಿರುದ್ಧವಾಗಿ ರಾಹುಲ್ ಸ್ವಾಗತಿಸಲು ನಾಂದೇಡ್‌ಗೆ ಹೋಗುತ್ತಿದ್ದಾರೆ ಎಂದು ಉಪಾಧ್ಯೆ ಹೇಳಿದ್ದಾರೆ.

ಇದನ್ನೂ ಓದಿ : ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...