Homeಮುಖಪುಟಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

ಭಾರತ್ ಜೋಡೋ: ಮಹಾರಾಷ್ಟ್ರದಲ್ಲಿ ರಾಹುಲ್ ಸ್ವಾಗತಿಸಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನವೆಂಬರ್ 06 ರಂದು ಮಹಾರಾಷ್ಟ್ರಕ್ಕೆ ಪ್ರವೇಶಿಸಲಿದ್ದು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಯಾತ್ರೆಯು 4 ರಾಜ್ಯಗಳನ್ನು ಕ್ರಮಿಸಿ 1000 ಕಿ.ಮೀ ಗಳನ್ನು ಪೂರೈಸಿದೆ. ಸದ್ಯ ಆಂಧ್ರಪ್ರದೇಶದಲ್ಲಿರುವ ಯಾತ್ರೆಯು ನಾಳೆ ಮತ್ತೆ ಕರ್ನಾಟಕ ಪ್ರವೇಶಿಸಲಿದ್ದು ಆನಂತರ ತೆಲಂಗಾಣಕ್ಕೆ ಕಾಲಿಡಲಿದೆ. ಆನಂತರ 6ನೇ ರಾಜ್ಯವಾಗಿ ಮಹಾರಾಷ್ಟ್ರದ ನಾಂದೇಡ್‌ಗೆ ಪ್ರವೇಶಿಸಲಿದೆ ಎನ್ನಲಾಗಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಎಚ್‌.ಕೆ ಪಾಟೀಲ್, ಹಿರಿಯ ನಾಯಕರಾದ ಬಾಳಾಸಾಹೇಬ್ ಥೋರಟ್, ಅಶೋಕ್ ಚವ್ಹಾಣ್‌ರವರು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಭಾರತ್ ಜೋಡೋ ಯಾತ್ರೆಗೆ  ಆಹ್ವಾನಿಸಿದ್ದಾರೆ. ಉದ್ಧವ್ ಠಾಕ್ರೆ ಅಥವಾ ಅವರ ಪುತ್ರ ಮಾಜಿ ಸಚಿವ ಆದಿತ್ಯ ಠಾಕ್ರೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಯಾತ್ರೆಯನ್ನು ಸ್ವಾಗತಿಸುವ ನಿರೀಕ್ಷೆಯಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ರಾಹುಲ್ ಮತ್ತು ರಾಮ ವಿವಾದ

ರಾಜಸ್ಥಾನದ ಸಚಿವ ಪರ್ಸಾದಿ ಲಾಲ್ ಮೀನಾ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ರಾಮನಿಗೆ ಹೋಲಿಸಿದ್ದಾರೆ. ರಾಹುಲ್ ಗಾಂಧಿಯವರ ಯಾತ್ರೆಯು ಅಯೋಧ್ಯೆಯಿಂದ ಶ್ರೀಲಂಕಾಕ್ಕೆ ನಡೆದ ರಾಮನ ಪ್ರಯಾಣಕ್ಕಿಂತಲೂ ಉದ್ದವಾಗಿದೆ ಎಂದು ಹೇಳಿದ್ದಾರೆ. ಈ ಹೋಲಿಕೆ ಕೋಲಾಹಲಕ್ಕೆ ಕಾರಣವಾಗುತ್ತಿದ್ದಂತೆ, ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಸ್ಪಷ್ಟೀಕರಣ ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಭಗವಾನ್ ರಾಮರ ಹೆಸರುಗಳು ‘ಆರ್’ ನೊಂದಿಗೆ ಪ್ರಾರಂಭವಾಗುವುದು ಕೇವಲ ಕಾಕತಾಳೀಯವಾಗಿದೆ. ಆದರೆ ಯಾವುದೇ ಹೋಲಿಕೆ ಇಲ್ಲ ಎಂದು ಹೇಳಿದ್ದಾರೆ. “ದೇವರು ದೇವರು, ಮತ್ತು ನಾವು ಮನುಷ್ಯರು. ರಾಹುಲ್ ಗಾಂಧಿ ಕೇವಲ ಮಾನವೀಯತೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯು ತ್ರಿವರ್ಣ ಮತ್ತು ಮಾನವೀಯತೆಯನ್ನು ಉಳಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಭಾರತ್ ಜೋಡೋ ಬೆಂಬಲಿಸುವುದಕ್ಕೆ ಬಿಜೆಪಿ ನಾಯಕ ಉಪಾಧ್ಯೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉದ್ಧವ್ ತಮ್ಮ ಪಕ್ಷದ ಸಲುವಾಗಿಯೂ ಎಂದೂ ಮನೆ ಬಿಟ್ಟು ಬಂದಿಲ್ಲ. ಯಾವುದೇ ಹಿಂದುತ್ವದ ಮೆರವಣಿಗೆ, ಅಡ್ವಾಣಿಯವರ ರಥಯಾತ್ರೆಗೆ ಬೆಂಬಲ ನೀಡಿಲ್ಲ. ಆದರೆ ಈಗ ಅವರು ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಹೊರಟಿದ್ದಾರೆ. ‘ಮುಹ್ ಮೆ ರಾಮ್, ಬಗಲ್ ಮೆ ಚುರಿ’ ಎಂದು ಹಳೆಯ ಹಿಂದಿ ಗಾದೆಯಂತೆ ಉದ್ಧವ್ ಠಾಕ್ರೆಗೆ ಇದು ‘ಮುಹ್ ಮೆ ರಾಮ್, ಬಗಲ್ ಮಿ ರಾಹುಲ್’ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯಕ್ಕೆ ಯಾರೇ ಬಂದರೂ ಅವರು ಬಾಳ್ ಠಾಕ್ರೆಯವರ ಮನೆಗೆ ಹೋಗಲೇಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಿದ್ದರು. ಆದರೆ ಉದ್ಧವ್ ಅದಕ್ಕೆ ವಿರುದ್ಧವಾಗಿ ರಾಹುಲ್ ಸ್ವಾಗತಿಸಲು ನಾಂದೇಡ್‌ಗೆ ಹೋಗುತ್ತಿದ್ದಾರೆ ಎಂದು ಉಪಾಧ್ಯೆ ಹೇಳಿದ್ದಾರೆ.

ಇದನ್ನೂ ಓದಿ : ಭಾರತ್ ಜೋಡೋ ಜೊತೆಗೆ ದಲಿತರನ್ನೂ ಬೆಸೆಯಬಹುದೇ ಕಾಂಗ್ರೆಸ್ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...