Homeಮುಖಪುಟಭಾರತ್ ಜೋಡೋ ಯಾತ್ರೆ - ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಎರಡನೇ ದಿನದಂದು ತಮಿಳುನಾಡಿನ ನಾಗರ್‌ಕೋಯಿಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಈ ಯಾತ್ರೆಯು ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ. ಯಾತ್ರೆಯಲ್ಲಿ ತಾನೋರ್ವ ಯಾತ್ರಿಯಾಗಿ ಮಾತ್ರ ಭಾಗವಹಿಸುತ್ತಿದ್ದು, ಯಾತ್ರೆಯನ್ನು ಮುನ್ನಡೆಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಈ ಯಾತ್ರೆಯ ಬಗ್ಗೆ ಆರೆಸ್ಸೆಸ್-ಬಿಜೆಪಿಗೆ ಅವರದ್ದ ಆದ ಅಭಿಪ್ರಾಯಗಳಿವೆ. ಅವರ ಅಭಿಪ್ರಾಯಗಳಿಗೆ ಸ್ವಾಗತ, ಆದರೆ ಕಾಂಗ್ರೆಸ್ ಪಕ್ಷವು ಯಾತ್ರೆಯ ಮೂಲಕ ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬಿಜೆಪಿ ದೇಶವನ್ನು ವಿಭಜಿಸಿದೆ ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷ ತೊರೆಯುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡಿದ ಅವರು,‘‘ಪಕ್ಷ ತೊರೆಯುವ ನಾಯಕರು ಒತ್ತಡದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯ ನೆರೆ ಪರಿಶೀಲನೆ ಸಭೆಯಲ್ಲಿ ನಿದ್ದೆ ಹೊಡೆದ ಸಚಿವ ಆರ್‌. ಅಶೋಕ್‌: ಕಾಂಗ್ರೆಸ್‌‌ ಆಕ್ರೋಶ

ದೇಶದ ಮೇಲೆ ಒಂದೇ ದೃಷ್ಟಿಕೋನವನ್ನು ಹೇರುವ ಪ್ರಯತ್ನ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರತಿಪಕ್ಷಗಳನ್ನು ಒಗ್ಗೂಡಿಸುವುದು ಮತ್ತು ಯಾತ್ರೆ ಎರಡು ಪ್ರತ್ಯೇಕ ವಿಷಯಗಳಾಗಿವೆ. ಆದರೆ ಇವೆರಡೂ ಒಟ್ಟಿಗೆ ಬಂದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.

ಯಾತ್ರೆಯ ಸಂದರ್ಭದಲ್ಲಿ ತಾನು ಸಂವಾದ ನಡೆಸಿದ ಯುವತಿಯೊಬ್ಬಳನ್ನು ಉಲ್ಲೇಖಿಸಿದ ಅವರು, ಭಾರತದ ಜನರು ಭಾರತದಲ್ಲಿ ಸಾಮರಸ್ಯದಿಂದ ಬದುಕುತ್ತಿದ್ದಾರೆ, ಆದರೆ ದೇಶವನ್ನು ಧಾರ್ಮಿಕ ಮತ್ತು ರಾಜ್ಯಗಳ ನಡುವೆ ವಿಭಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಬೆಲೆ ಏರಿಕೆ ಮತ್ತು ನಿರುದ್ಯೋಗ ಉತ್ತುಂಗದಲ್ಲಿರುವಾಗ ಕೇವಲ ಎರಡು-ಮೂರು ವ್ಯಾಪಾರ ಸಂಸ್ಥೆಗಳು ದೇಶವನ್ನು ನಿಯಂತ್ರಿಸುತ್ತಿವೆ. ಆದರೆ ದೇಶದ ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

ರಾಹುಲ್ ಗಾಂಧಿ ಅವರು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸುವ 3,570 ಕಿಮೀ ‘ಭಾರತ್ ಜೋಡೋ’ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ.

ಯಾತ್ರೆಯ ಸಮಯದಲ್ಲಿ, ರಾಹುಲ್ ಗಾಂಧಿ ಮತ್ತು ಅವರ ಸಂಗಡಿಗರು ಪ್ರತಿದಿನ ಬೆಳಿಗ್ಗೆ 7 ರಿಂದ 10.30 ರವರೆಗೆ ಆಯ್ದ ಜನರನ್ನು ಭೇಟಿಯಾಗಲಿದ್ದಾರೆ. ಸಂಜೆ ಸಾಮೂಹಿಕ ಸಂಪರ್ಕ ಕಾರ್ಯಕ್ರಮ ನಡೆಯಲಿದೆ. ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಯಾತ್ರಿಗಳು ದಿನದ ಕೊನೆಯಲ್ಲಿ ವಿಶೇಷವಾಗಿ ನಿರ್ಮಿಸಲಾದ ಕಂಟೈನರ್‌ಗಳಲ್ಲಿ ವಿಶ್ರಾಂತಿ ಪಡೆಯುತ್ತಾರೆ.

ಯಾತ್ರೆಗೆ ಮುನ್ನ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಮಾತನಾಡಿ, ಇದು ಭಾರತದ ರಾಜಕೀಯದಲ್ಲಿ ಮಹತ್ವದ ತಿರುವು ನೀಡಲಿದೆ ಮತ್ತು ಹೊಸ ಆರಂಭವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಈ ನಡುವೆ ಬಹು ನಿರೀಕ್ಷಿತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವೆಂಬರ್ 17 ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ಸೆಪ್ಟೆಂಬರ್ 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 21 ರೊಳಗೆ ಕಾಂಗ್ರೆಸ್ ಹೊಸ ಅಧ್ಯಕ್ಷರನ್ನು ಹೊಂದಬೇಕಿತ್ತು, ಆದರೆ ಗಡುವನ್ನು ಒಂದು ತಿಂಗಳು ವಿಸ್ತರಿಸಲಾಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...