Homeಮುಖಪುಟಭಾರತ್ ಜೋಡೋ ಯಾತ್ರೆ - ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆ – ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಎರಡನೇ ದಿನದಂದು ತಮಿಳುನಾಡಿನ ನಾಗರ್‌ಕೋಯಿಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಈ ಯಾತ್ರೆಯು ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ. ಯಾತ್ರೆಯಲ್ಲಿ ತಾನೋರ್ವ ಯಾತ್ರಿಯಾಗಿ ಮಾತ್ರ ಭಾಗವಹಿಸುತ್ತಿದ್ದು, ಯಾತ್ರೆಯನ್ನು ಮುನ್ನಡೆಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಈ ಯಾತ್ರೆಯ ಬಗ್ಗೆ ಆರೆಸ್ಸೆಸ್-ಬಿಜೆಪಿಗೆ ಅವರದ್ದ ಆದ ಅಭಿಪ್ರಾಯಗಳಿವೆ. ಅವರ ಅಭಿಪ್ರಾಯಗಳಿಗೆ ಸ್ವಾಗತ, ಆದರೆ ಕಾಂಗ್ರೆಸ್ ಪಕ್ಷವು ಯಾತ್ರೆಯ ಮೂಲಕ ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮಾಡಿದ ಹಾನಿಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಬಿಜೆಪಿ ದೇಶವನ್ನು ವಿಭಜಿಸಿದೆ ಎಂದು ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಕ್ಷ ತೊರೆಯುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡಿದ ಅವರು,‘‘ಪಕ್ಷ ತೊರೆಯುವ ನಾಯಕರು ಒತ್ತಡದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿಯ ನೆರೆ ಪರಿಶೀಲನೆ ಸಭೆಯಲ್ಲಿ ನಿದ್ದೆ ಹೊಡೆದ ಸಚಿವ ಆರ್‌. ಅಶೋಕ್‌: ಕಾಂಗ್ರೆಸ್‌‌ ಆಕ್ರೋಶ

ದೇಶದ ಮೇಲೆ ಒಂದೇ ದೃಷ್ಟಿಕೋನವನ್ನು ಹೇರುವ ಪ್ರಯತ್ನ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರತಿಪಕ್ಷಗಳನ್ನು ಒಗ್ಗೂಡಿಸುವುದು ಮತ್ತು ಯಾತ್ರೆ ಎರಡು ಪ್ರತ್ಯೇಕ ವಿಷಯಗಳಾಗಿವೆ. ಆದರೆ ಇವೆರಡೂ ಒಟ್ಟಿಗೆ ಬಂದರೆ ಒಳ್ಳೆಯದು ಎಂದು ತಿಳಿಸಿದ್ದಾರೆ.

ಯಾತ್ರೆಯ ಸಂದರ್ಭದಲ್ಲಿ ತಾನು ಸಂವಾದ ನಡೆಸಿದ ಯುವತಿಯೊಬ್ಬಳನ್ನು ಉಲ್ಲೇಖಿಸಿದ ಅವರು, ಭಾರತದ ಜನರು ಭಾರತದಲ್ಲಿ ಸಾಮರಸ್ಯದಿಂದ ಬದುಕುತ್ತಿದ್ದಾರೆ, ಆದರೆ ದೇಶವನ್ನು ಧಾರ್ಮಿಕ ಮತ್ತು ರಾಜ್ಯಗಳ ನಡುವೆ ವಿಭಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಬೆಲೆ ಏರಿಕೆ ಮತ್ತು ನಿರುದ್ಯೋಗ ಉತ್ತುಂಗದಲ್ಲಿರುವಾಗ ಕೇವಲ ಎರಡು-ಮೂರು ವ್ಯಾಪಾರ ಸಂಸ್ಥೆಗಳು ದೇಶವನ್ನು ನಿಯಂತ್ರಿಸುತ್ತಿವೆ. ಆದರೆ ದೇಶದ ಸಮಸ್ಯೆಗಳನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

ರಾಹುಲ್ ಗಾಂಧಿ ಅವರು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸುವ 3,570 ಕಿಮೀ ‘ಭಾರತ್ ಜೋಡೋ’ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ.

ಯಾತ್ರೆಯ ಸಮಯದಲ್ಲಿ, ರಾಹುಲ್ ಗಾಂಧಿ ಮತ್ತು ಅವರ ಸಂಗಡಿಗರು ಪ್ರತಿದಿನ ಬೆಳಿಗ್ಗೆ 7 ರಿಂದ 10.30 ರವರೆಗೆ ಆಯ್ದ ಜನರನ್ನು ಭೇಟಿಯಾಗಲಿದ್ದಾರೆ. ಸಂಜೆ ಸಾಮೂಹಿಕ ಸಂಪರ್ಕ ಕಾರ್ಯಕ್ರಮ ನಡೆಯಲಿದೆ. ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಯಾತ್ರಿಗಳು ದಿನದ ಕೊನೆಯಲ್ಲಿ ವಿಶೇಷವಾಗಿ ನಿರ್ಮಿಸಲಾದ ಕಂಟೈನರ್‌ಗಳಲ್ಲಿ ವಿಶ್ರಾಂತಿ ಪಡೆಯುತ್ತಾರೆ.

ಯಾತ್ರೆಗೆ ಮುನ್ನ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಮಾತನಾಡಿ, ಇದು ಭಾರತದ ರಾಜಕೀಯದಲ್ಲಿ ಮಹತ್ವದ ತಿರುವು ನೀಡಲಿದೆ ಮತ್ತು ಹೊಸ ಆರಂಭವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಹೋರಾಟಗಾರರ ಸಾಥ್!

ಈ ನಡುವೆ ಬಹು ನಿರೀಕ್ಷಿತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವೆಂಬರ್ 17 ರಂದು ಚುನಾವಣೆ ನಡೆಯಲಿದ್ದು, ಎರಡು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ಸೆಪ್ಟೆಂಬರ್ 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 21 ರೊಳಗೆ ಕಾಂಗ್ರೆಸ್ ಹೊಸ ಅಧ್ಯಕ್ಷರನ್ನು ಹೊಂದಬೇಕಿತ್ತು, ಆದರೆ ಗಡುವನ್ನು ಒಂದು ತಿಂಗಳು ವಿಸ್ತರಿಸಲಾಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...